AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand: ಗಂಗೋತ್ರಿ ಹೆದ್ದಾರಿಯಲ್ಲಿ ಗುಡ್ಡದಿಂದ ವಾಹನಗಳ ಮೇಲೆ ಉರುಳಿದ ಬಂಡೆಗಳು, ನಾಲ್ವರು ಸಾವು

ಉತ್ತರಾಖಂಡದ ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದೆ. ಗುಡ್ಡದಿಂದ ಬಂಡೆಯೊಂದು ಉರುಳಿ ಕಾರುಗಳ ಮೇಲೆ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ. ಆರುಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

Uttarakhand: ಗಂಗೋತ್ರಿ ಹೆದ್ದಾರಿಯಲ್ಲಿ ಗುಡ್ಡದಿಂದ ವಾಹನಗಳ ಮೇಲೆ ಉರುಳಿದ ಬಂಡೆಗಳು, ನಾಲ್ವರು ಸಾವು
ಭೂಕುಸಿತImage Credit source: India Today
ನಯನಾ ರಾಜೀವ್
|

Updated on: Jul 11, 2023 | 10:19 AM

Share

ಉತ್ತರಾಖಂಡದ ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದೆ. ಗುಡ್ಡದಿಂದ ಬಂಡೆಯೊಂದು ಉರುಳಿ ಕಾರುಗಳ ಮೇಲೆ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ. ಆರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸೋಮವಾರ ರಾತ್ರಿ ಯಾತ್ರಾರ್ಥಿಗಳು ಗಂಗೋತ್ರಿಯಿಂದ ಉತ್ತರಕಾಶಿಗೆ ಸು ನಗರದ ಬಳಿ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಸ್ಥಳೀಯರ ನೆರವಿನಿಂದ ತಡರಾತ್ರಿ ಹಲವಾರು ಪ್ರಯಾಣಿಕರನ್ನು ರಕ್ಷಿಸಲಾಯಿತು. ಆದರೆ ನಿರಂತರವಾಗಿ ಬೀಳುತ್ತಿದ್ದ ಬಂಡೆಗಳಿಂದಾಗಿ ರಕ್ಷಣಾ ಕಾರ್ಯಾಚರಣೆ ಸ್ಥಗಿತಗೊಂಡಿದೆ. ಮೂರು ವಾಹನಗಳು ಅವಶೇಷಗಳಡಿ ಸಿಲುಕಿವೆ ಎಂದು ವಿಪತ್ತು ಸ್ವಯಂಸೇವಕ ರಾಜೇಶ್ ಕುಮಾರ್ ತಿಳಿಸಿದ್ದಾರೆ.

ಮತ್ತಷ್ಟು ಓದಿ:North India Rain: ಉತ್ತರ ಭಾರತದಲ್ಲಿ ವರುಣನ ರೌದ್ರಾವತಾರ, ಮಳೆಯಲ್ಲಿ ಸಿಲುಕಿ ಇದುವರೆಗೆ 37 ಮಂದಿ ಸಾವು

ಭಾರೀ ಮಳೆಯಿಂದಾಗಿ ಬಂದರಕೋಟ್ ಬಳಿ ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತಗೊಂಡಿದೆ. ಏತನ್ಮಧ್ಯೆ, ಮಲಾರಿಯಲ್ಲಿ ಹಿಮನದಿ ಒಡೆದು ಸೇತುವೆಯನ್ನು ಮುಳುಗಿಸಿತು, ಚಮೋಲಿ ಜಿಲ್ಲೆಯ ಭಾರತ-ಚೀನಾ ಗಡಿಯನ್ನು ಸಂಪರ್ಕಿಸುವ 10 ಹಳ್ಳಿಗಳನ್ನು ಕಡಿತಗೊಳಿಸಿತು.

ಉತ್ತರ ಭಾರತದ ರಾಜ್ಯಗಳಲ್ಲಿ ಮಳೆ ಮುಂದುವರಿದಿದ್ದು, ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್ ಘೋಷಿಸಿದ್ದು, ಉತ್ತರಾಖಂಡದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ದೊರೆತಿದೆ.

ಭಾರೀ ಮಳೆಯ ಎಚ್ಚರಿಕೆಯ ನಡುವೆ ಡೆಹ್ರಾಡೂನ್, ತೆಹ್ರಿ, ಚಮೋಲಿ, ಪೌರಿ, ಬಾಗೇಶ್ವರ್, ನೈನಿತಾಲ್, ಅಲ್ಮೋರಾ ಮತ್ತು ರುದ್ರಪ್ರಯಾಗದಲ್ಲಿ ಶಾಲೆಗಳನ್ನು ಮಂಗಳವಾರ ಮುಚ್ಚುವಂತೆ ಆದೇಶಿಸಲಾಗಿದೆ.

ಹವಾಮಾನ ಇಲಾಖೆ ಪ್ರಕಾರ, ಜುಲೈ 11 ಮತ್ತು 12 ರಂದು ಉತ್ತರಕಾಶಿ, ಚಮೋಲಿ, ತೆಹ್ರಿ ಗರ್ವಾಲ್, ಡೆಹ್ರಾಡೂನ್, ಪಾರು ಗರ್ವಾಲ್, ಬಾಗೇಶ್ವರ್, ಅಲ್ಮೋರಾ, ಚಂಪಾವತ್, ನೈನಿತಾಲ್, ಉಧಮ್ ಸಿಂಗ್ ನಹರ್ ಮತ್ತು ಹರಿದ್ವಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ