AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ್​: ಗುರುದ್ವಾರದೊಳಗೆ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ

ಉತ್ತರಾಖಂಡದ ನಾನಕ್‌ಮಟ್ಟಾ ಗುರುದ್ವಾರದೊಳಗೆ ಸಿಬ್ಬಂದಿಯನ್ನು ಗುರುವಾರ ಮುಂಜಾನೆ ಇಬ್ಬರು ಮುಸುಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮೃತರನ್ನು ಬಾಬಾ ತಾರ್ಸೆಮ್ ಸಿಂಗ್ ಎಂದು ಗುರುತಿಸಲಾಗಿದ್ದು, ಘಟನೆಯ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದೆ.

ಉತ್ತರಾಖಂಡ್​: ಗುರುದ್ವಾರದೊಳಗೆ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ
ಪೊಲೀಸ್​Image Credit source: India Today
ನಯನಾ ರಾಜೀವ್
|

Updated on: Mar 28, 2024 | 11:40 AM

Share

ಉತ್ತರಾಖಂಡದ ನಾನಕ್‌ಮಟ್ಟಾ ಗುರುದ್ವಾರದೊಳಗೆ ಸಿಬ್ಬಂದಿಯನ್ನು ಗುರುವಾರ ಮುಂಜಾನೆ ಇಬ್ಬರು ಮುಸುಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮೃತರನ್ನು ಬಾಬಾ ತಾರ್ಸೆಮ್ ಸಿಂಗ್ ಎಂದು ಗುರುತಿಸಲಾಗಿದ್ದು, ಘಟನೆಯ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದೆ.

ಘಟನೆಯನ್ನು ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕರು ದೃಢಪಡಿಸಿದ್ದು, ಇಂದು ಬೆಳಗ್ಗೆ 7 ಗಂಟೆಗೆ ಕೊಲೆಯಾಗಿರುವ ಬಗ್ಗೆ ಮಾಹಿತಿ ಲಭಿಸಿದೆ ಎಂದು ಹೇಳಿದ್ದಾರೆ. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಮುಸುಕುಧಾರಿಗಳಾದ ಇಬ್ಬರು ದುಷ್ಕರ್ಮಿಗಳು ನಾನಕಮಟ್ಟಾ ಗುರುದ್ವಾರಕ್ಕೆ ನುಗ್ಗಿ ಕರಸೇವಾ ಪ್ರಮುಖ್ ಬಾಬಾ ತಾರ್ಸೆಮ್ ಸಿಂಗ್‌ಗೆ ಗುಂಡು ಹಾರಿಸಿದ್ದಾರೆ ಎಂದು ಉತ್ತರಾಖಂಡ ಡಿಜಿಪಿ ಅಭಿನವ್ ಕುಮಾರ್ ತಿಳಿಸಿದ್ದಾರೆ.

ಅವರನ್ನು ಕೂಡಲೇ ಖತಿಮಾದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಗಂಭೀರವಾಗಿ ಗಾಯಗೊಂಡಿದ್ದ ಕಾರಣ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಮತ್ತಷ್ಟು ಓದಿ: ಬೆಂಗಳೂರಿನ ಪ್ರತಿಷ್ಠಿತ ರೆಸ್ಟೋರೆಂಟ್​​​​ಗೆ ಬಾಂಬ್ ಬೆದರಿಕೆ; ತನಿಖೆ ನಡೆಸಿದಾಗ ಪೊಲೀಸರೇ ಶಾಕ್!

ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ. ತನಿಖೆಗಾಗಿ, ಪೊಲೀಸ್ ಪ್ರಧಾನ ಕಛೇರಿಯು ಎಸ್‌ಐಟಿಯನ್ನು ರಚಿಸಿದೆ. ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಇದನ್ನು ತಮ್ಮ ಪ್ರಮುಖ ಆದ್ಯತೆಯಾಗಿ ಇರಿಸಿಕೊಳ್ಳಲು ಮತ್ತು ಎಲ್ಲಾ ಕೋನಗಳನ್ನು ಸೂಕ್ಷ್ಮವಾಗಿ ತನಿಖೆ ಮಾಡಲು ತಿಳಿಸಲಾಗಿದೆ.

ಹಂತಕರ ದೃಶ್ಯಾವಲಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ, ಒಂದು ಗುಂಡು ಅವರ ಹೊಟ್ಟೆಯ ಮೂಲಕ ಹಾದು ಹೋಗಿತ್ತು. ಕೊಲೆಗಾರರು ಪೇಟ ಧರಿಸಿದ್ದರು. ಬೈಕ್ ಹಿಂದೆ ನೀಲಿ ಬಣ್ಣದ ಬ್ಯಾಗ್ ಕಟ್ಟಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?