AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ್: ಮಹಿಳಾ ಟೂರಿಸ್ಟ್​ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಟ್ಯಾಕ್ಸಿ ಡ್ರೈವರ್, ಹೆದರಿ ಕಾಡಿನಲ್ಲಿ ರಾತ್ರಿ ಕಳೆದ ಯುವತಿ

ನೈನಿತಾಲ್​ಗೆ ಪ್ರವಾಸ(Tourism)ಕ್ಕೆಂದು ಬಂದಿದ್ದ ದೆಹಲಿಯ ಯುವತಿ ಮೇಲೆ ಟ್ಯಾಕ್ಸಿ ಡ್ರೈವರ್ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಶುಕ್ರವಾರ ತಡರಾತ್ರಿ ಮಹಿಳೆ ನೈನಿತಾಲ್‌ಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಆಕೆಯ ಹೋಗಬೇಕಿದ್ದ ಪ್ರದೇಶದಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಬಲ್ದಿಯಾಖಾನ್ ಬಳಿ, ಟ್ಯಾಕ್ಸಿ ಚಾಲಕನೊಬ್ಬ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಉತ್ತರಾಖಂಡ್: ಮಹಿಳಾ ಟೂರಿಸ್ಟ್​ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಟ್ಯಾಕ್ಸಿ ಡ್ರೈವರ್, ಹೆದರಿ ಕಾಡಿನಲ್ಲಿ ರಾತ್ರಿ ಕಳೆದ ಯುವತಿ
ಆರೋಪಿ ಚಾಲಕImage Credit source: India Today
ನಯನಾ ರಾಜೀವ್
|

Updated on: Mar 08, 2026 | 10:00 AM

Share

ಉತ್ತರಾಖಂಡ, ಮಾರ್ಚ್ 08: ನೈನಿತಾಲ್​ಗೆ ಪ್ರವಾಸ(Tourism)ಕ್ಕೆಂದು ಬಂದಿದ್ದ ದೆಹಲಿಯ ಯುವತಿ ಮೇಲೆ ಟ್ಯಾಕ್ಸಿ ಡ್ರೈವರ್ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಶುಕ್ರವಾರ ತಡರಾತ್ರಿ ಮಹಿಳೆ ನೈನಿತಾಲ್‌ಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಆಕೆಯ ಹೋಗಬೇಕಿದ್ದ ಪ್ರದೇಶದಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಬಲ್ದಿಯಾಖಾನ್ ಬಳಿ, ಟ್ಯಾಕ್ಸಿ ಚಾಲಕನೊಬ್ಬ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಮಹಿಳೆ ವಿರೋಧಿಸಿದಾಗ, ಚಾಲಕ ಆಕೆಯ ವಸ್ತುಗಳು ಮತ್ತು ಮೊಬೈಲ್ ಫೋನ್‌ನೊಂದಿಗೆ ಪರಾರಿಯಾಗಿದ್ದಾನೆ. ಈ ಭೀಕರ ಘಟನೆಯಿಂದ ಆಘಾತಕ್ಕೊಳಗಾದ ಮಹಿಳೆ, ಸ್ಥಳೀಯ ಪೊಲೀಸರು ರಕ್ಷಿಸುವವರೆಗೂ ಹತ್ತಿರದ ಕಾಡಿನಲ್ಲಿ ರಾತ್ರಿ ಕಳೆದಿದ್ದಾರೆ.

ಘಟನೆ ನಡೆದ 10 ಗಂಟೆಗಳಲ್ಲಿ ಆರೋಪಿಯನ್ನು ಉತ್ತರಾಖಂಡದ ಹಲ್ದ್ವಾನಿ ನಿವಾಸಿ ದೀಪಕ್ ಸಿಂಗ್ ಬೋರಾ ಎಂದು ಗುರುತಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ. ಪೊಲೀಸರು ಆತನ ವಿರುದ್ಧ ಅತ್ಯಾಚಾರ ಯತ್ನ ಸೇರಿದಂತೆ ಕಾನೂನಿನ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮತ್ತಷ್ಟು ಓದಿ: ಮಗಳ ಮೇಲೆ ಅತ್ಯಾಚಾರವೆಸಗಿದ್ದ ತಂದೆಗೆ ಜೈಲಿನಲ್ಲೇ ಕೊಳೆಯುವ ಶಿಕ್ಷೆ ವಿಧಿಸಿದ ಕೋರ್ಟ್

ಪೊಲೀಸರು ಬಲಿಪಶುವಿನ ಕದ್ದ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಘಟನೆಯಲ್ಲಿ ಬಳಸಲಾದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಏತನ್ಮಧ್ಯೆ, ಶನಿವಾರ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ದೆಹಲಿಯವರಾದ ಯುವತಿ ರಾತ್ರಿ ಕಥ್ಗೋಡಮ್ ನಿಂದ ನೈನಿತಾಲ್ ಗೆ ಟ್ಯಾಕ್ಸಿಯಲ್ಲಿ ಹೊರಟಿದ್ದರು. ಬಾಲ್ಡಿಯಾಖಾನ್ ಬಳಿ, ಟ್ಯಾಕ್ಸಿ ಚಾಲಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅತ್ಯಾಚಾರ ಮತ್ತು ಹಲ್ಲೆಗೆ ಯತ್ನಿಸಿದ್ದಾನೆ. ಯುವತಿ ತಪ್ಪಿಸಿಕೊಂಡು ಕಾಡಿಗೆ ಓಡಿಹೋಗುವಲ್ಲಿ ಯಶಸ್ವಿಯಾಗಿದ್ದಾರೆ. ಎಂದು ನೈನಿತಾಲ್ ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್ ಟಿಸಿ ತಿಳಿಸಿದ್ದಾರೆ.

ಮಹಿಳೆಯರು ಮತ್ತು ಪ್ರವಾಸಿಗರ ಸುರಕ್ಷತೆ ನಮ್ಮ ಆದ್ಯತೆಯಾಗಿದ್ದು, ಅಂತಹ ಅಪರಾಧಗಳನ್ನು ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು