AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ರಾಜ್ಯದಲ್ಲಿ ಕಾಪಿ ಮಾಡಿದರೆ 10 ಕೋಟಿ ರೂ. ದಂಡದ ಜೊತೆಗೆ 10 ವರ್ಷ ಜೈಲು ಶಿಕ್ಷೆ!

ದೇಶದಲ್ಲೇ ಕಟ್ಟುನಿಟ್ಟಾದ ನಕಲು ವಿರೋಧಿ ಕಾನೂನು ( Anti-Copying Law)ಭಾರತದ ಉತ್ತರ ಭಾಗದಲ್ಲಿರುವ ಉತ್ತರಾಖಂಡದಲ್ಲಿ ಜಾರಿಗೆ ಬಂದಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಕಾಪಿ ಹೊಡೆದರೆ 10 ಕೋಟಿ ದಂಡದ ಜೊತೆ 10 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

ಈ ರಾಜ್ಯದಲ್ಲಿ ಕಾಪಿ ಮಾಡಿದರೆ 10 ಕೋಟಿ ರೂ. ದಂಡದ ಜೊತೆಗೆ 10 ವರ್ಷ ಜೈಲು ಶಿಕ್ಷೆ!
ಉತ್ತರಾಖಂಡ ನಕಲು ವಿರೋಧಿ ಕಾನೂನುImage Credit source: Times Now
TV9 Web
| Edited By: |

Updated on: Feb 11, 2023 | 4:40 PM

Share

ಉತ್ತರಾಖಂಡ: ಶಾಲಾ, ಕಾಲೇಜು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಅಥವಾ ಅಭ್ಯರ್ಥಿಗಳು ಕಾಪಿ ಹೊಡೆದು ಡಿಬಾರ್ ಆಗಿರುವ ಸುದ್ದಿಯನ್ನು ನೀವು ಕೇಳಿರಬಹುದು. ಹಾಗೆಯೇ ಹಲವು ರಾಜ್ಯಗಳಲ್ಲಿ ಕಾಪಿ ಮಾಡಿದ ಅಭ್ಯರ್ಥಿಗಳು ನಿರ್ದಿಷ್ಟ ಅವಧಿಯ ವರೆಗೂ ಪರೀಕ್ಷೆ ಬರೆಯುವಂತಿಲ್ಲ ಎಂಬ ಕಾನೂನಿರುತ್ತದೆ. ಆದರೆ ಇಲ್ಲೊಂದು ರಾಜ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಕಾಪಿ ಹೊಡೆದರೆ 10 ಕೋಟಿ  ರೂ. ದಂಡದ ಜೊತೆ 10 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

ಹೌದು.. ದೇಶದಲ್ಲೇ ಕಟ್ಟುನಿಟ್ಟಾದ ನಕಲು ವಿರೋಧಿ ಕಾನೂನು ( Anti-Copying Law)ಭಾರತದ ಉತ್ತರ ಭಾಗದಲ್ಲಿರುವ ಉತ್ತರಾಖಂಡದಲ್ಲಿ ಜಾರಿಗೆ ಬಂದಿದೆ. ಗವರ್ನರ್ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ (Gurmeet Singh) ಅವರು ನಿನ್ನೆ(ಫೆಬ್ರವರಿ 10) ಉತ್ತರಾಖಂಡ ಸ್ಪರ್ಧಾತ್ಮಕ ಪರೀಕ್ಷೆ ನೇಮಕಾತಿಯಲ್ಲಿ ಅನ್ಯಾಯವನ್ನು ತಡೆಗಟ್ಟಲು ಕಟುನಿಟ್ಟಾದ ಕ್ರಮಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ್ದಾರೆ. ಇನ್ನುಇದನ್ನು 24 ಗಂಟೆಯೊಳಗೆ ರಾಜಭವನ ಈ ಕಾನೂನು ಅಂಗೀಕರಿಸಿ ಜಾರಿಗೊಳಿಸಿದೆ.

ಈ ಪ್ರಸ್ತಾವನೆಗೆ ಅನುಮೋದನೆ ನೀಡಿದ ರಾಜ್ಯಪಾಲರಿಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಧನ್ಯವಾದ ತಿಳಿಸಿದ್ದಾರೆ. ಈ ನಕಲು ವಿರೋಧಿ ಕಾನೂನಿನಡಿಯಲ್ಲಿ ಕಾಪಿ ಮಾಡುವವರಿಗೆ ಜೀವಾವಧಿ ಶಿಕ್ಷೆ ಅಥವಾ 10 ವರ್ಷಗಳ ಜೈಲು ಶಿಕ್ಷೆಯೊಂದಿಗೆ 10 ಕೋಟಿ ರೂಪಾಯಿ ದಂಡ ವಿಧಿಸಲು ಅವಕಾಶವಿದೆ. ಇದಲ್ಲದೇ ಕಾಪಿ ಮಾಡುವ ದಂಧೆಗೆ ಕುಮ್ಮಕ್ಕು ನೀಡುವವರ ಆಸ್ತಿ ಮುಟ್ಟುಗೋಲು ಹಾಕುವ ಅವಕಾಶವೂ ಈ ಕಾನೂನಿನಲ್ಲಿ ಇದೆ.

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ