AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಕಾಶಿ ಸುರಂಗ ಕುಸಿತ: ಕಾರ್ಮಿಕರ ರಕ್ಷಣೆಗೆ ಇನ್ನೂ 2 ರಿಂದ 15 ದಿನಗಳು ತಗುಲಬಹುದು ಎಂದ ಅಧಿಕಾರಿಗಳು

ಉತ್ತರಕಾಶಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗ ಕುಸಿದು 10 ದಿನಗಳು ಕಳೆದಿವೆ. ನಲವತ್ತೊಂದು ಕಾರ್ಮಿಕರನ್ನು ಮುಂದಿನ ಎರಡು ದಿನಗಳಲ್ಲಿ ಡ್ರಿಲ್ಲಿಂಗ್ ಮೆಷಿನ್ ಸಹಾಯದಿಂದ ಹೊರತೆಗೆಯಬಹುದು. ಆದರೆ ಅದೂ ಕೂಡ ಕೆಲಸ ಮಾಡದಿದ್ದರೆ ಕಾರ್ಮಿಕರ ರಕ್ಷಣೆಗೆ 15ದಿನವರೆಗೂ ಹಿಡಿಯ ಬಹುದು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಉತ್ತರಕಾಶಿ ಸುರಂಗ ಕುಸಿತ: ಕಾರ್ಮಿಕರ ರಕ್ಷಣೆಗೆ ಇನ್ನೂ 2 ರಿಂದ 15 ದಿನಗಳು ತಗುಲಬಹುದು ಎಂದ ಅಧಿಕಾರಿಗಳು
ಸುರಂಗImage Credit source: NDTV
ನಯನಾ ರಾಜೀವ್
|

Updated on: Nov 22, 2023 | 9:45 AM

Share

ಉತ್ತರಕಾಶಿ(Uttarkashi)ಯಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗ(Tunnel) ಕುಸಿದು 10 ದಿನಗಳು ಕಳೆದಿವೆ. ನಲವತ್ತೊಂದು ಕಾರ್ಮಿಕರನ್ನು ಮುಂದಿನ ಎರಡು ದಿನಗಳಲ್ಲಿ ಡ್ರಿಲ್ಲಿಂಗ್ ಮೆಷಿನ್ ಸಹಾಯದಿಂದ ಹೊರತೆಗೆಯಬಹುದು. ಆದರೆ ಅದೂ ಕೂಡ ಕೆಲಸ ಮಾಡದಿದ್ದರೆ ಕಾರ್ಮಿಕರ ರಕ್ಷಣೆಗೆ 15ದಿನವರೆಗೂ ಹಿಡಿಯಬಹುದು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ನವೆಂಬರ್ 12ರಂದು ಉತ್ತರಾಖಂಡದ ಉತ್ತರಕಾಶಿಯಲ್ಲಿ ನಿರ್ಮಾಣಹಂತದಲ್ಲಿರುವ ಸುರಂಗದ ಒಂದು ಭಾಗ ಕುಸಿದಿತ್ತು, 41 ಮಂದಿ ಕಾರ್ಮಿಕರು ಇದೀಗ ಸುರಂಗದೊಳಗೆ ಸಿಲುಕಿಕೊಂಡಿದ್ದಾರೆ. ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಅಮೆರಿಕ ನಿರ್ಮಿತ ಆಗರ್ ಡ್ರಿಲ್ಲಿಂಗ್ ಯಂತ್ರವು ಇದೀಗ ಉತ್ತಮ ಆಯ್ಕೆಯಾಗಿದೆ ಮತ್ತು 2.5 ದಿನಗಳಲ್ಲಿ ಕಾರ್ಮಿಕರು ಹೊರಬರಬಹುದು.

ಕಳೆದ ಶುಕ್ರವಾರ ಮಧ್ಯಾಹ್ನ ಆಗರ್ ಯಂತ್ರವು ಗಟ್ಟಿಯಾದ ಬಂಡೆಯೊಂದರ ಬಳಿ ಬಂದಿದ್ದು, ಕಂಪನ ಸಂಭವಿಸಿತ್ತು ಪ್ರಚೋದಿಸಿತು, ಸುರಕ್ಷತೆಯ ಕಾರಣದಿಂದ ಕಾರ್ಯಾಚರಣೆಯನ್ನು ತಡೆಹಿಡಿಯಲಾಗಿತ್ತು.

ಐದು ಇತರ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಲಾಗಿದೆ, ಆದರೆ ಅವು 12-15 ದಿನಗಳವರೆಗೆ ತೆಗೆದುಕೊಳ್ಳಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 6 ಇಂಚಿನ ಪೈಪ್ ಮೂಲಕ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರಿಗೆ ಚಪಾತಿ, ವೆಜ್​ ಪಲಾವ್, ಮಟರ್​ ಪನೀರ್​ನಂತಹ ಬೇಯಿಸಿದ ಆಹಾರ ಪದಾರ್ಥಗಳನ್ನು ರವಾನಿಸಲಾಗುತ್ತಿದೆ.

ಮತ್ತಷ್ಟು ಓದಿ: Uttarkashi: ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ಮೊದಲ ಫೋಟೊ ಬಿಡುಗಡೆ

ರಾಷ್ಟ್ರೀಯ ಹೆದ್ದಾರಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ನಿರ್ದೇಶಕ ಅಂಶು ಮನೀಶ್ ಮಾತನಾಡಿ, 6 ಇಂಚಿನ ಪೈಪ್​ನಲ್ಲಿ ಸಿಲಿಂಡರ್ ಆಕಾರದ ಪ್ಲಾಸ್ಟಿಕ್​ ಬಾಟಲಿಗಳಲ್ಲಿ ಖಿಚಡಿ ಮತ್ತು ದಾಲ್​ ಅನ್ನು ಪೂರೈಸಲು ಪ್ರಯತ್ನಿಸಲಾಯಿತು ಆದರೆ ಅದು ಸಾಧ್ಯವಾಗಲಿಲ್ಲ. ಬಳಿಕ ಇತರೆ ಪದಾರ್ಥಗಳು ಸೇರಿದಂತೆ ಕಿತ್ತಳೆ, ಬಾಳೆಹಣ್ಣು ಮತ್ತು ಅಗತ್ಯ ಔಷಧಗಳನ್ನು ಪೂರೈಸಲಾಯಿತು.

ಸದ್ಯ ಘಟನಾ ಸ್ಥಳದಲ್ಲಿ ಎನ್​ಡಿಆರ್​ಎಫ್ , ಎಸ್​ಡಿಆರ್​ಎಫ್, ಐಟಿಬಿಪಿ, ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಕಾರ್ಮಿಕರ ರಕ್ಷಣೆಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!