AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕರೂಪ ನಾಗರಿಕ ಸಂಹಿತೆ ಕುರಾನ್ ತತ್ವಗಳಿಗೆ ವಿರುದ್ಧ: ಸಮಾಜವಾದಿ ಪಾರ್ಟಿ ಸಂಸದ ಎಸ್‌ಟಿ ಹಸನ್

ಕುರಾನ್‌ನಲ್ಲಿ ಮುಸ್ಲಿಮರಿಗೆ ನೀಡಿರುವ 'ಹಿದಾಯತ್' (ಸೂಚನೆಗಳು) ವಿರುದ್ಧವಾಗಿದ್ದರೆ ನಾವು ಅದನ್ನು (ಯುಸಿಸಿ ಬಿಲ್) ಪಾಲಿಸುವುದಿಲ್ಲ. ಅದು ‘ಹಿದಾಯತ್’ ಪ್ರಕಾರವಾಗಿದ್ದರೆ ನಮಗೆ ಯಾವುದೇ ಸಮಸ್ಯೆ ಇಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಎಸ್.ಟಿ.ಹಸನ್ ಹೇಳಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಏಕರೂಪ ನಾಗರಿಕ ಸಂಹಿತೆ ಕುರಾನ್ ತತ್ವಗಳಿಗೆ ವಿರುದ್ಧ: ಸಮಾಜವಾದಿ ಪಾರ್ಟಿ ಸಂಸದ ಎಸ್‌ಟಿ ಹಸನ್
ಎಸ್‌ಟಿ ಹಸನ್
Follow us
ರಶ್ಮಿ ಕಲ್ಲಕಟ್ಟ
|

Updated on: Feb 06, 2024 | 1:09 PM

ಡೆಹ್ರಾಡೂನ್ ಫೆಬ್ರುವರಿ 06: ಏಕರೂಪ ನಾಗರಿಕ ಸಂಹಿತೆ (Uniform Civil Code) ಮುಸ್ಲಿಮರ ಪವಿತ್ರ ಗ್ರಂಥ ಕುರಾನ್‌ನ (Quran) ತತ್ವಗಳಿಗೆ ವಿರುದ್ಧವಾಗಿದೆ ಎಂದು ಸಮಾಜವಾದಿ ಪಕ್ಷದ ಸಂಸದ ಎಸ್.ಟಿ.ಹಸನ್ (ST Hasan) ಹೇಳಿದ್ದು ನಮ್ಮ ಸಮುದಾಯವು ಅದನ್ನು ಪಾಲಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಕುರಾನ್‌ನಲ್ಲಿ ಮುಸ್ಲಿಮರಿಗೆ ನೀಡಿರುವ ‘ಹಿದಾಯತ್’ (ಸೂಚನೆಗಳು) ವಿರುದ್ಧವಾಗಿದ್ದರೆ ನಾವು ಅದನ್ನು (ಯುಸಿಸಿ ಬಿಲ್) ಪಾಲಿಸುವುದಿಲ್ಲ. ಅದು ‘ಹಿದಾಯತ್’ ಪ್ರಕಾರವಾಗಿದ್ದರೆ ನಮಗೆ ಯಾವುದೇ ಸಮಸ್ಯೆ ಇಲ್ಲ ಎಂದು ಅವರು ಹೇಳಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಯುಸಿಸಿ ಮಸೂದೆಯನ್ನು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಉತ್ತರಾಖಂಡ ವಿಧಾನಸಭೆಯಲ್ಲಿ ಇಂದು (ಮಂಗಳವಾರ) ಮಂಡಿಸಿದರು.2022 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಈ ಮಸೂದೆಯನ್ನು ಜಾರಿ ಮಾಡುವುದಾಗಿ ಭರವಸೆ ನೀಡಿತ್ತು.

ಮಸೂದೆಯು ಕಾನೂನಾದರೆ, ಇದು ಮದುವೆ, ವಿಚ್ಛೇದನ, ಉತ್ತರಾಧಿಕಾರ ಇತ್ಯಾದಿಗಳನ್ನು ನಿಯಂತ್ರಿಸುವ ವೈಯಕ್ತಿಕ ಧಾರ್ಮಿಕ ಕಾನೂನುಗಳನ್ನು ಬದಲಿಸುತ್ತದೆ. ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದಿರುವುದರಿಂದ ಮಸೂದೆ ಜಾರಿಯಾಗುವ ನಿರೀಕ್ಷೆಯಿದೆ.

ಅಂದಹಾಗೆ ಕಾಂಗ್ರೆಸ್ ಯುಸಿಸಿ ವಿರುದ್ಧವಲ್ಲ ಆದರೆ ಅದನ್ನು ಮಂಡಿಸುವ ವಿಧಾನದ ವಿರುದ್ಧ ಹೇಳಿದೆ. ನಾವು ಏಕರೂಪ ನಾಗರಿಕ ಸಂಹಿತೆ ವಿರುದ್ಧ ಅಲ್ಲ. ಸದನವು ವ್ಯವಹಾರ ನೀತಿಯ ನಿಯಮಗಳಿಂದ ಆಡಳಿತ ನಡೆಸುತ್ತಿದೆ ಆದರೆ ಬಿಜೆಪಿ ಅದನ್ನು ನಿರಂತರವಾಗಿ ನಿರ್ಲಕ್ಷಿಸುತ್ತಿದೆ. ಸಂಖ್ಯಾಬಲದ ಆಧಾರದ ಮೇಲೆ ಶಾಸಕರ ಧ್ವನಿಯನ್ನು ಹತ್ತಿಕ್ಕಲು ಬಯಸುತ್ತದೆ. ಪ್ರಶ್ನೋತ್ತರ ವೇಳೆಯಲ್ಲಿ ಸದನದಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದು ಶಾಸಕರ ಹಕ್ಕು, ಅವರು ನಿಯಮ 58 ರ ಅಡಿಯಲ್ಲಿ ಪ್ರಸ್ತಾವನೆಯನ್ನು ಹೊಂದಿದ್ದರೂ ಅಥವಾ ಇತರ ನಿಯಮಗಳ ಅಡಿಯಲ್ಲಿ ವಿಧಾನಸಭೆಯಲ್ಲಿ ರಾಜ್ಯದ ವಿವಿಧ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ಹಕ್ಕನ್ನು ಹೊಂದಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಯಶಪಾಲ್ ಆರ್ಯ ಹೇಳಿದರು.

ಉತ್ತರಾಖಂಡದ ಮಾಜಿ ಸಿಎಂ ಮತ್ತು ಕಾಂಗ್ರೆಸ್ ನಾಯಕ ಹರೀಶ್ ರಾವತ್, ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಮಸೂದೆಯನ್ನು ಅಂಗೀಕರಿಸುವ ಉತ್ಸುಕತೆಯಲ್ಲಿ ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ದೂರಿದ್ದಾರೆ.

ಇದನ್ನೂ ಓದಿ: Uniform Civil Code: ಜಾತಿ, ಧರ್ಮ, ಪ್ರಾಂತ್ಯ ಬೇಧವಿಲ್ಲ, ಎಲ್ಲರಿಗೂ ಒಂದೇ ಕಾನೂನು, ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ

ಕರಡು ಪ್ರತಿ ಯಾರ ಬಳಿಯೂ ಇಲ್ಲ ಮತ್ತು ಅದರ ಬಗ್ಗೆ ತಕ್ಷಣ ಚರ್ಚೆ ನಡೆಸಬೇಕೆಂದು ಅವರು ಬಯಸುತ್ತಾರೆ. ಕೇಂದ್ರ ಸರ್ಕಾರವು ಉತ್ತರಾಖಂಡದಂತಹ ಸೂಕ್ಷ್ಮ ರಾಜ್ಯವನ್ನು ಟೋಕನಿಸಂಗಾಗಿ ಬಳಸುತ್ತಿದೆ, ಅವರು ಯುಸಿಸಿ ತರಲು ಬಯಸಿದರೆ, ಅದನ್ನು ಕೇಂದ್ರ ಸರ್ಕಾರವೇ ತರಬೇಕಿತ್ತು ಎಂದು ಎಎನ್ಐ ಜತೆ ಮಾತನಾಡಿದ ರಾವತ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ