AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಕಾಶಿ ಸುರಂಗ ಮಾರ್ಗಕ್ಕೆ ರಕ್ಷಣಾ ಸಾಧನಗಳನ್ನು ಸಾಗಿಸುತ್ತಿದ್ದ ಟ್ರಕ್ ಕಮರಿಗೆ ಬಿದ್ದು ಚಾಲಕ ಸಾವು

ಸಂಜೆ 4.30ರ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಚಾಲಕ ಗೌರವ್ ಕುಮಾರ್ (35) ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ವಲ್ಪ ಕಷ್ಟಪಟ್ಟು ಚಾಲಕನನ್ನು ಕಂದರದಿಂದ ಹೊರತೆಗೆದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಿದರು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ಭಟ್ ಹೇಳಿದ್ದಾರೆ.

ಉತ್ತರಕಾಶಿ ಸುರಂಗ ಮಾರ್ಗಕ್ಕೆ ರಕ್ಷಣಾ ಸಾಧನಗಳನ್ನು ಸಾಗಿಸುತ್ತಿದ್ದ ಟ್ರಕ್ ಕಮರಿಗೆ ಬಿದ್ದು ಚಾಲಕ ಸಾವು
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on: Nov 20, 2023 | 9:43 PM

Share

ಉತ್ತರಕಾಶಿ ನವೆಂಬರ್ 20: ಉತ್ತರಕಾಶಿ ಸುರಂಗದಲ್ಲಿ (Uttarkashi tunnel) ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆಗಾಗಿ ಉಪಕರಣಗಳನ್ನು ಸಾಗಿಸುವ ಟ್ರಕ್ ಸೋಮವಾರ ಮಧ್ಯಾಹ್ನ ಉತ್ತರಾಖಂಡದ (Uttarakhand )ತೆಹ್ರಿ ಜಿಲ್ಲೆಯ ನರೇಂದ್ರನಗರ (Narendranagar) ಪ್ರದೇಶದ 100 ಮೀಟರ್ ಆಳದ ಕಮರಿಗೆ ಬಿದ್ದಿದೆ. ಈ ಅಪಘಾತದಲ್ಲಿ ಚಾಲಕ ಸಾವಿಗೀಡಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನರೇಂದ್ರನಗರ ಪೊಲೀಸ್ ಠಾಣೆ ಪ್ರಭಾರಿ ಗೋಪಾಲ್ ದತ್ ಭಟ್ ಮಾತನಾಡಿ, ಇಲ್ಲಿನ ನರೇಂದ್ರನಗರ ಪ್ರದೇಶದಲ್ಲಿ ಟ್ರಕ್ 100 ಮೀಟರ್ ಕಮರಿಗೆ ಬಿದ್ದಿದೆ ಎಂದು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಸಂಜೆ 4.30ರ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಚಾಲಕ ಗೌರವ್ ಕುಮಾರ್ (35) ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ವಲ್ಪ ಕಷ್ಟಪಟ್ಟು ಚಾಲಕನನ್ನು ಕಂದರದಿಂದ ಹೊರತೆಗೆದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಿದರು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ಭಟ್ ಹೇಳಿದ್ದಾರೆ.

ಸ್ಥಳದಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ, ಕೆಲವು ಪೈಪ್‌ಗಳು ಮತ್ತು ಡ್ರಿಲ್ಲಿಂಗ್ ಮೆಷಿನ್ ಅನ್ನು ಹೊತ್ತ ಟ್ರಕ್ ಡೆಹ್ರಾಡೂನ್‌ನಿಂದ ಉತ್ತರಕಾಶಿಯ ಸುರಂಗದ ಸ್ಥಳಕ್ಕೆ ಪ್ರಯಾಣಿಸುತ್ತಿತ್ತು.

“ನಾವು ಅಪಘಾತದ ಸ್ಥಳದಲ್ಲಿ ಸಂಗ್ರಹಿಸಿದ ಮಾಹಿತಿಯಿಂದ, ಡೆಹ್ರಾಡೂನ್‌ನಿಂದ ಉತ್ತರಕಾಶಿ ಸುರಂಗಕ್ಕೆ ಉಪಕರಣಗಳನ್ನು ಕಳುಹಿಸಲು ರೈಲ್ವೆ ವಿಕಾಸ್ ನಿಗಮ್ ಲಿಮಿಟೆಡ್‌ನಿಂದ ತೊಡಗಿಸಿಕೊಂಡಿದ್ದ ಕೆಲವು ಖಾಸಗಿ ಮಾರಾಟಗಾರರು ಉಪಕರಣಗಳನ್ನು ಕಳುಹಿಸುತ್ತಿದ್ದರು. ಹೆಚ್ಚಿನ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಉತ್ತರಕಾಶಿ ಸುರಂಗ ಕುಸಿತ: ಕಾರ್ಮಿಕರ ರಕ್ಷಣೆಗೆ ಇನ್ನೂ 4-5 ದಿನಗಳು ಬೇಕೆಂದ ಅಧಿಕಾರಿಗಳು, ಸಂಬಂಧಿಕರ ಸಹನೆಯ ಕಟ್ಟೆ ಒಡೆದಿದೆ 

ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ದೂರವಾಣಿ ಕರೆ ಮಾಡಿ ಪ್ರಸ್ತುತ ನಡೆಯುತ್ತಿರುವ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳ ಬಗ್ಗೆ ಮಾಹಿತಿ ಪಡೆದರು.

“ಸುರಂಗದೊಳಗೆ ಸಿಲುಕಿರುವ ಎಲ್ಲಾ ಕಾರ್ಮಿಕರು ಸುರಕ್ಷಿತವಾಗಿದ್ದಾರೆ. ಅವರನ್ನು ಶೀಘ್ರದಲ್ಲೇ ಹೊರತರಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ” ಎಂದು ಮುಖ್ಯಮಂತ್ರಿ ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ