AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್​ಗೆ ಬಿತ್ತು ಕಡಿವಾಣ.. ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ಯೋಗಿ ಸಂಪುಟ ಅಸ್ತು

ಒತ್ತಾಯ, ದೌರ್ಜನ್ಯ ಅಥವಾ ಮೋಸದಿಂದ ನಡೆಯುವ ಮತಾಂತರವನ್ನು ಜಾಮೀನುರಹಿತ ಅಪರಾಧವೆಂದು ಘೋಷಿಸಲಾಗಿದೆ. ಇಂಥ ಅಪರಾಧಕ್ಕೆ 10 ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ.

ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್​ಗೆ ಬಿತ್ತು ಕಡಿವಾಣ.. ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ಯೋಗಿ ಸಂಪುಟ ಅಸ್ತು
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
Follow us
Shruthi Hegde
| Updated By: ಸಾಧು ಶ್ರೀನಾಥ್​

Updated on:Nov 25, 2020 | 1:11 PM

ಲಖನೌ: ಲವ್ ಜಿಹಾದ್ ನಿಷೇಧ ಕಾನೂನು ಎಂದೇ ಜನಜನಿತವಾಗಿರುವ ಕಾನೂನು ಬಾಹಿರ ಮತಾಂತರ ಮತ್ತು ಯುವತಿಯ ಮತಾಂತರದ ಉದ್ದೇಶದಿಂದ ನಡೆಯುವ ಅಂತರ ಧರ್ಮೀಯ ವಿವಾಹ ನಿಷೇಧ ಸುಗ್ರೀವಾಜ್ಞೆಯ ಕರಡು ಪ್ರತಿಯನ್ನು ಉತ್ತರ ಪ್ರದೇಶ ಸಚಿವ ಸಂಪುಟವು ಅಂಗೀಕರಿಸಿದೆ. ಸುಗ್ರೀವಾಜ್ಞೆ ಉಲ್ಲಂಘಿಸಿದವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ.

ಉತ್ತರ ಪ್ರದೇಶ ವಿಧಿ ವಿರುದ್ಧ್ ಧರ್ಮ ಸಂಪರಿವರ್ತನ್ ಪ್ರತಿಶೇಧ್​ ಅಧ್ಯಾದೇಶ್ 2020ರ (ಕಾನೂನು ಬಾಹಿರ ಮತಾಂತರ ನಿಷೇಧ) ಪ್ರಕಾರ, ಹುಡುಗಿಯ ಧರ್ಮ ಬದಲಾವಣೆಯೊಂದನ್ನೇ ಉದ್ದೇಶವಾಗಿರಿಸಿಕೊಂಡು ನಡೆಸುವ ಮದುವೆಗಳನ್ನು ಶೂನ್ಯ (ರದ್ದು) ಎಂದು ಘೋಷಿಸಲಾಗುತ್ತದೆ.

ಒತ್ತಾಯ, ದೌರ್ಜನ್ಯ ಅಥವಾ ಮೋಸದಿಂದ ನಡೆಯುವ ಮತಾಂತರವನ್ನು ಜಾಮೀನುರಹಿತ ಅಪರಾಧವೆಂದು ಘೋಷಿಸಲಾಗಿದೆ. ಇಂಥ ಅಪರಾಧಕ್ಕೆ 10 ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ.

ಉತ್ತರ ಪ್ರದೇಶದಲ್ಲಿ ಬಲವಂತದ ಮತಾಂತರದ 100ಕ್ಕೂ ಹೆಚ್ಚು ಪ್ರಕರಣಗಳು ಬೆಳಕಿಗೆ ಬಂದಿವೆ. ವಂಚನೆ, ಸುಳ್ಳು ಹಾಗೂ ಮೋಸದಿಂದ ಧಾರ್ಮಿಕ ಮತಾಂತರಗಳನ್ನು ಮಾಡಿರುವ ದಾಖಲೆಗಳಿವೆ. ಈ ನಿಟ್ಟಿನಲ್ಲಿ ಕಾನೂನು ಜಾರಿಗೊಳಿಸುವುದು ಅಗತ್ಯವಾಗಿತ್ತು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಲು ಮತ್ತು ಮಹಿಳೆಯರಿಗೆ, ವಿಶೇಷವಾಗಿ ಪರಿಶಿಷ್ಟ ಪಂಗಡದವರಿಗೆ ನ್ಯಾಯ ದೊರಕಿಸಿಕೊಡಲು ಈ ಕಾನೂನು ಅಗತ್ಯವಾಗಿತ್ತು ಎಂದು ಉತ್ತರ ಪ್ರದೇಶದ ಸಚಿವ ಮತ್ತು ರಾಜ್ಯ ಸರ್ಕಾರದ ವಕ್ತಾರ ಸಿದ್ದಾರ್ಥ್ ಸಿಂಗ್ ಹೇಳಿದ್ದಾರೆ.

ಪ್ರಸ್ತಾವಿತ ಸುಗ್ರೀವಾಜ್ಞೆಯ ಪ್ರಕಾರ ಸಾಮಾನ್ಯ ಸಂದರ್ಭಗಳಲ್ಲಿ ಇಂಥ ಅಪರಾಧಗಳಿಗೆ 1ರಿಂದ 5 ವರ್ಷಗಳ ಜೈಲು ಶಿಕ್ಷೆ ಮತ್ತು ಕನಿಷ್ಠ ₹ 15 ಸಾವಿರ ರೂ. ದಂಡ ವಿಧಿಸಲಾಗುವುದು. ಮಹಿಳೆಯು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಥವಾ ಅಪ್ರಾಪ್ತ ವಯಸ್ಕಳಾಗಿದ್ದರೆ ಅಪರಾಧಿಗೆ 3ರಿಂದ 10 ವರ್ಷ ಜೈಲು ಶಿಕ್ಷೆ, ಕನಿಷ್ಠ ₹ 25 ಸಾವಿರ ರೂ. ದಂಡ ವಿಧಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಶುದ್ಧ ಪ್ರೇಮ ಬೇರೆ, ಮತಾಂತರಕ್ಕಾಗಿ ಪ್ರೇಮ ಬೇರೆ -ಲವ್​ ಜಿಹಾದ್ ತಡೆಗೆ ಸಿ.ಟಿ.ರವಿ ಆಗ್ರಹ

Published On - 1:02 pm, Wed, 25 November 20

ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್
ರೈಲುಗಳಲ್ಲಿ ವೇಟಿಂಗ್ ಲಿಸ್ಟ್ ಟಿಕೆಟ್ ಹಿಡಿದು ಸ್ಲೀಪರ್ ಕೋಚ್ ಹತ್ತುವಂತಿಲ್ಲ
ರೈಲುಗಳಲ್ಲಿ ವೇಟಿಂಗ್ ಲಿಸ್ಟ್ ಟಿಕೆಟ್ ಹಿಡಿದು ಸ್ಲೀಪರ್ ಕೋಚ್ ಹತ್ತುವಂತಿಲ್ಲ