AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಮ್ಮಿನ ಸಿರಪ್ ತಯಾರಿಕಾ ಕಂಪನಿ ಮರಿಯನ್ ಬಯೋಟೆಕ್ ಪರವಾನಗಿ ರದ್ದುಗೊಳಿಸಲು ಕೇಂದ್ರ ಸೂಚನೆ

ಕಂಪನಿಯಿಂದ ಪರೀಕ್ಷೆಗಾಗಿ ಪಡೆಯಲಾದ 36 ಮಾದರಿಗಳ ಪೈಕಿ 22ರಲ್ಲಿ ಎಥಿಲೀನ್ ಗ್ಲೈಕೋಲ್ ಕಲಬೆರಕೆಯಾಗಿರುವುದು ಕಂಡುಬಂದ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ

ಕೆಮ್ಮಿನ ಸಿರಪ್ ತಯಾರಿಕಾ ಕಂಪನಿ ಮರಿಯನ್ ಬಯೋಟೆಕ್ ಪರವಾನಗಿ ರದ್ದುಗೊಳಿಸಲು ಕೇಂದ್ರ ಸೂಚನೆ
ಕೆಮ್ಮಿನ ಸಿರಪ್
Ganapathi Sharma
|

Updated on: Mar 04, 2023 | 9:33 PM

Share

ನವದೆಹಲಿ: ಉಜ್ಬೇಕಿಸ್ತಾನದಲ್ಲಿ (Uzbekistan) ಮಕ್ಕಳ ಸಾವಿಗೆ ಕಾರಣವಾದ ಕೆಮ್ಮಿನ ಸಿರಪ್ ತಯಾರಿಕಾ ಕಂಪನಿ ಮರಿಯನ್ ಬಯೋಟೆಕ್ (Marion biotech) ಪರವಾನಗಿ ರದ್ದುಗೊಳಿಸುವಂತೆ ಉತ್ತರ ಪ್ರದೇಶ ರಾಜ್ಯ ಔಷಧ ನಿಯಂತ್ರಣ ಪ್ರಾಧಿಕಾರಕ್ಕೆ ಕೇಂದ್ರ ಸರ್ಕಾರ ಸೂಚಿಸಿದೆ. ಕಂಪನಿಯಿಂದ ಪರೀಕ್ಷೆಗಾಗಿ ಪಡೆಯಲಾದ 36 ಮಾದರಿಗಳ ಪೈಕಿ 22ರಲ್ಲಿ ಎಥಿಲೀನ್ ಗ್ಲೈಕೋಲ್ (Ethylene glycol) ಕಲಬೆರಕೆಯಾಗಿರುವುದು ಕಂಡುಬಂದ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಗೌತಮ ಬುದ್ಧ ನಗರದ ಡ್ರಗ್ ಇನ್​ಸ್ಪೆಕ್ಟರ್ ತಿಳಿಸಿದ್ದಾರೆ. ಕೆಮ್ಮಿನ ಔಷಧಿ ಸೇವಿಸಿ 18 ಮಕ್ಕಳು ಪ್ರಾಣ ಕಳೆದುಕೊಂಡ ದಾರುಣ ಘಟನೆ ಉಜ್ಬೇಕಿಸ್ತಾನದಲ್ಲಿ ಜನವರಿಯಲ್ಲಿ ನಡೆದಿತ್ತು. ಇದರ ಬೆನ್ನಲ್ಲೇ, ಭಾರತದ 2 ಕೆಮ್ಮಿನ ಸಿರಪ್​ಗಳನ್ನು ಬಳಸದಂತೆ ಉಜ್ಬೇಕಿಸ್ತಾನಕ್ಕೆ ವಿಶ್ವ ಆರೋಗ್ಯ ಸಂಸ್ಥೆ (WHO) ಶಿಫಾರಸು ಮಾಡಿತ್ತು.

ಮೆರಿಯನ್ ಬಯೋಟೆಕ್‌ನಿಂದ ತಯಾರಿಸಲ್ಪಟ್ಟ ಉತ್ಪನ್ನಗಳು ಗುಣಮಟ್ಟದ ಮಾನದಂಡಗಳು ಅಥವಾ ವಿಶೇಷಣಗಳನ್ನು ಪೂರೈಸಲು ವಿಫಲವಾಗಿವೆ. ಹೀಗಾಗಿ ಅವುಗಳನ್ನು ಬಳಸಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿತ್ತು. ಇದಕ್ಕೂ ಮುನ್ನೆ ಕೆಮ್ಮಿನ ಔಷಧ ಸೇವಿಸಿ ಗ್ಯಾಂಬಿಯಾದಲ್ಲಿಯೂ ಮಕ್ಕಳು ಮೃತಪಟ್ಟಿದ್ದರು.

ಇದನ್ನೂ ಓದಿ: Cough Syrup Makers: ಮಹಾರಾಷ್ಟ್ರದಲ್ಲಿ 6 ಕೆಮ್ಮು ಸಿರಪ್ ತಯಾರಕರ ಪರವಾನಗಿ ರದ್ದುಗೊಳಿಸಿದ ಸರ್ಕಾರ

ಮಹಾರಾಷ್ಟ್ರದಲ್ಲಿ 6 ಕೆಮ್ಮು ಸಿರಪ್ ತಯಾರಕರ ಪರವಾನಗಿ ರದ್ದುಗೊಳಿಸಿದ ಬೆನ್ನಲ್ಲೇ ಮೆರಿಯನ್ ಬಯೋಟೆಕ್‌ ಪರವಾನಗಿ ರದ್ದತಿ ನಿರ್ಧಾರವೂ ಪ್ರಕಟವಾಗಿದೆ. ಮಹಾರಾಷ್ಟ್ರದಲ್ಲಿ 6 ಕೆಮ್ಮು ಸಿರಪ್ ತಯಾರಕರ ಪರವಾನಗಿಗಳನ್ನು ರದ್ದುಗೊಳಿಸಲಾಗಿದೆ. ರಾಜ್ಯದಲ್ಲಿ 108 ಕೆಮ್ಮು ಸಿರಪ್ ತಯಾರಕರ ಪೈಕಿ 84 ತಯಾರಕರ ವಿರುದ್ಧ ಮಹಾರಾಷ್ಟ್ರ ಸರ್ಕಾರ ತನಿಖೆಯನ್ನು ಪ್ರಾರಂಭಿಸಿದೆ ಎಂದು ಸಚಿವ ಸಂಜಯ್ ರಾಥೋಡ್ ಶನಿವಾರ ಬೆಳಿಗ್ಗೆ ತಿಳಿಸಿದ್ದರು.

ನಿಯಮಗಳನ್ನು ಉಲ್ಲಂಘಿಸಿದ 17 ಸಂಸ್ಥೆಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದೂ ಸಚಿವರು ಮಾಹಿತಿ ನೀಡಿದ್ದರು. ಭಾರತದಿಂದ ಆಮದು ಮಾಡಿಕೊಂಡ ಕೆಮ್ಮು ಸಿರಪ್‌ನಿಂದಾಗಿ ಗ್ಯಾಂಬಿಯಾದಲ್ಲಿ 66 ಮಕ್ಕಳ ಸಾವನ್ನಪ್ಪಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ