Sign In

By signing in or creating an account, you agree with Associated Broadcasting Company's Terms & Conditions and Privacy Policy.

Senthil Balaji: ಸೆಂಥಿಲ್ ಬಾಲಾಜಿ ವಜಾಕ್ಕೆ ತಡೆ, ಗದ್ದಲದ ಬಳಿಕ ನಿರ್ಧಾರ ಹಿಂಪಡೆದ ರಾಜ್ಯಪಾಲರು

ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ(V Senthil Balaji) ಅವರನ್ನು ಸಚಿವ ಸಂಪುಟ(Cabinet)ದಿಂದ ವಜಾಗೊಳಿಸುವ ಆದೇಶವನ್ನು ರಾಜ್ಯಪಾಲ ಆರ್ ಎನ್ ರವಿ ತಡೆಹಿಡಿದಿದ್ದಾರೆ ಎಂದು ತಮಿಳುನಾಡು ರಾಜಭವನದ ಮೂಲಗಳು ನ್ಯೂಸ್ 9 ಗೆ ತಿಳಿಸಿವೆ.

Senthil Balaji: ಸೆಂಥಿಲ್ ಬಾಲಾಜಿ ವಜಾಕ್ಕೆ ತಡೆ, ಗದ್ದಲದ ಬಳಿಕ ನಿರ್ಧಾರ ಹಿಂಪಡೆದ ರಾಜ್ಯಪಾಲರು
ಸೆಂಥಿಲ್ ಬಾಲಾಜಿImage Credit source: Zee news
Follow us
ನಯನಾ ರಾಜೀವ್
|

Updated on:Jun 30, 2023 | 10:06 AM

ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ( V Senthil Balaji) ಅವರನ್ನು ಸಚಿವ ಸಂಪುಟ(Cabinet)ದಿಂದ ವಜಾಗೊಳಿಸುವ ಆದೇಶವನ್ನು ರಾಜ್ಯಪಾಲ ಆರ್ ಎನ್ ರವಿ(RN Ravi) ತಡೆಹಿಡಿದಿದ್ದಾರೆ ಎಂದು ತಮಿಳುನಾಡು ರಾಜಭವನದ ಮೂಲಗಳು ನ್ಯೂಸ್ 9 ಗೆ ತಿಳಿಸಿವೆ. ಸೆಂಥಿಲ್ ಬಾಲಾಜಿ ವಿಚಾರವಾಗಿ ತಮಿಳುನಾಡು ರಾಜ್ಯಪಾಲ ರವಿ ಅಟಾರ್ನಿ ಜನರಲ್‌ನಿಂದ ಕಾನೂನು ಅಭಿಪ್ರಾಯ ಪಡೆಯಲು ನಿರ್ಧರಿಸಿದ್ದಾರೆ. ಕಾನೂನು ಅಭಿಪ್ರಾಯ ಬರುವವರೆಗೆ ರಾಜಭವನದ ಹಿಂದಿನ ಆದೇಶವನ್ನು ಅಮಾನತುಗೊಳಿಸಲಾಗಿದೆ ಎಂದು ರಾಜಭವನದ ಮೂಲಗಳು ತಿಳಿಸಿವೆ. ಇದರರ್ಥ ಬಾಲಾಜಿ ಸದ್ಯಕ್ಕೆ ಸಚಿವ ಸಂಪುಟದಲ್ಲಿ ಮುಂದುವರಿಯಲಿದ್ದಾರೆ.

ಈ ವಿಚಾರದಲ್ಲಿ ಗೃಹ ಸಚಿವರ ಮಧ್ಯಪ್ರವೇಶದ ಬಳಿಕ ರಾಜ್ಯಪಾಲರು ತಮ್ಮ ನಿರ್ಧಾರವನ್ನು ಬದಲಾಯಿಸಿದ್ದಾರೆ ಎನ್ನಲಾಗುತ್ತಿದೆ. ಸೆಂಥಿಲ್ ವಿಚಾರದಲ್ಲಿ ತಮ್ಮ ನಿರ್ಧಾರದ ಕುರಿತು ರಾಜ್ಯಪಾಲರಾದ ಆರ್​ಎನ್​ ರವಿ ಮುಖ್ಯಮಂತ್ರಿ ಸ್ಟಾಲಿನ್​ ಅವರಿಗೆ ಪತ್ರವನ್ನೂ ಕಳುಹಿಸಿದ್ದಾರೆ.

ಮತ್ತಷ್ಟು ಓದಿ: ರಾಜ್ಯಪಾಲರಿಂದ ಏಕಪಕ್ಷೀಯ ನಿರ್ಧಾರ: ಜೈಲಿನಲ್ಲಿರುವ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಸಚಿವ ಸಂಪುಟದಿಂದ ವಜಾ

ಅಟಾರ್ನಿ ಜನರಲ್ ಅವರಿಂದ ಕಾನೂನು ಅಭಿಪ್ರಾಯ ಪಡೆದು ನಂತರವಷ್ಟೇ ಅವರನ್ನು ವಜಾ ಮಾಡಬೇಕೋ ಬೇಡವೋ ಎಂಬುದನ್ನು ನಿರ್ಧರಿಸಬೇಕು ಎಂದು ಗೃಹ ಸಚಿವರು ರಾಜ್ಯಪಾಲರಿಗೆ ಸಲಹೆ ನೀಡಿದ್ದರು. ಗುರುವಾರ ಸಂಜೆ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರು ಸಚಿವ ಸೆಂಥಿಲ್ ಬಾಲಾಜಿ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ವಜಾಗೊಳಿಸಿದ್ದರು.

ಕೇಂದ್ರ ಸಚಿವ ಸಂಪುಟದಲ್ಲಿ ಸೆಂಥಿಲ್ ಬಾಲಾಜಿ ಅವರ ಮುಂದುವರಿಕೆ ಕಾನೂನಿನ ಪ್ರಕ್ರಿಯೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂಬ ಆತಂಕವಿರುವುದಾಗಿ ರಾಜಭವನದ ಪತ್ರದಲ್ಲಿ ತಿಳಿಸಲಾಗಿತ್ತು.

ರವಿ ಅವರ ಆದೇಶಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಸಚಿವರನ್ನು ವಜಾ ಮಾಡುವ ಅಧಿಕಾರ ರಾಜ್ಯಪಾಲರಿಗೆ ಇಲ್ಲ, ನಾವು ಅದನ್ನು ಕಾನೂನುಬದ್ಧವಾಗಿ ಎದುರಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು.

ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಂಧಿಸಲಾಗಿತ್ತು ವಿದ್ಯುತ್ ಮತ್ತು ಅಬಕಾರಿ ಸಚಿವ ವಿ ಸೆಂಥಿಲ್ ಬಾಲಾಜಿಯನ್ನು ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಂಧಿಸಲಾಗಿತ್ತು. ಅವರ ಆಪ್ತರ ಮನೆ ಮೇಲೆ ಜಾರಿ ನಿರ್ದೇಶನಾಲಯ ಜೂ.13 ರಂದು ಅಧಿಕಾರಿಗಳು ದಾಳಿ ಮಾಡಿದ್ದರು. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜೂ.14 ರ ಬೆಳಗ್ಗೆ ಸೆಂಥಿಲ್ ಅವರನ್ನು ಬಂಧಿಸಿ, ವೈದ್ಯಕೀಯ ತಪಾಸಣೆಗಾಗಿ ಓಮಂಡೂರರ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:05 am, Fri, 30 June 23

ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು