AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಅಪಘಾತ ತಡೆಯಲು ಹೊಸ ತಂತ್ರಜ್ಞಾನ ಪರಿಚಯಿಸಿದ ಕೇಂದ್ರ: 2026ಕ್ಕೆ ಎಲ್ಲ ವಾಹನಗಳಿಗೆ ಅಳವಡಿಕೆ

ರಸ್ತೆ ಸಾರಿಗೆ ಸಚಿವಾಲಯ 2026 ರ ವೇಳೆಗೆ ಭಾರತದಲ್ಲಿ V2V ಸಂವಹನ ವ್ಯವಸ್ಥೆಗಳನ್ನು ಪರಿಚಯಿಸಲು ಸಜ್ಜಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಘೋಷಿಸಿದಂತೆ, ಈ ತಂತ್ರಜ್ಞಾನವು ವಾಹನಗಳ ನಡುವೆ ಸುರಕ್ಷತಾ ಮಾಹಿತಿ ವಿನಿಮಯಕ್ಕೆ ನೆರವಾಗಲಿದೆ. ಇಂಟರ್ನೆಟ್ ಇಲ್ಲದೆ ಸ್ಥಳೀಯ ವೈರ್‌ಲೆಸ್ ಸಿಗ್ನಲ್‌ಗಳ ಮೂಲಕ ಕಾರ್ಯನಿರ್ವಹಿಸುವ ಇದು ಅಪಘಾತಗಳನ್ನು ತಡೆಯಲು ನಿರ್ಣಾಯಕವಾಗಿದೆ. ಪ್ರತಿ ವಾಹನಕ್ಕೆ ಕೆಲವು ಸಾವಿರ ರೂ. ವೆಚ್ಚವಾಗುವ ನಿರೀಕ್ಷೆಯಿದೆ.

ರಸ್ತೆ ಅಪಘಾತ ತಡೆಯಲು ಹೊಸ ತಂತ್ರಜ್ಞಾನ ಪರಿಚಯಿಸಿದ ಕೇಂದ್ರ: 2026ಕ್ಕೆ ಎಲ್ಲ ವಾಹನಗಳಿಗೆ ಅಳವಡಿಕೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jan 09, 2026 | 5:22 PM

Share

ಭಾರತದಾದ್ಯಂತ ಅಪಘಾತಗಳನ್ನು ತಪ್ಪಿಸಲು ಹೊಸ ತಂತ್ರಜ್ಞಾನವನ್ನು ಕೇಂದ್ರ ಸರ್ಕಾರ ಪರಿಚಯಿಸಿದೆ. ವಾಹನದಿಂದ ವಾಹನಕ್ಕೆ (V2V) ಸಂವಹನ ವ್ಯವಸ್ಥೆಗಳನ್ನು (V2V Tech Revolution) ಪರಿಚಯಿಸುವ ನಿಟ್ಟಿನಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ನೂತನ ಕ್ರಮವನ್ನು ತಂದಿದೆ. ಈ ಯೋಜನೆ 2026 ರ ವೇಳೆಗೆ ಇದನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಿದೆ. ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. V2V ತಂತ್ರಜ್ಞಾನವು ರಸ್ತೆಗಳಲ್ಲಿ ವಾಹನಗಳ ಸುರಕ್ಷತೆಗೆ ಸಂಬಂಧಿಸಿದ ಮಾಹಿತಿಯನ್ನು ನೇರವಾಗಿ ಪರಸ್ಪರ ವಿನಿಮಯ ಮಾಡಿಕೊಳ್ಳಲು ಅನುವು ಮಾಡಿಕೊಡುತ್ತದೆ. ಈ ಸಂವಹನವು ಮೊಬೈಲ್ ನೆಟ್‌ವರ್ಕ್‌ಗಳು ಅಥವಾ ಇಂಟರ್ನೆಟ್ ಸಂಪರ್ಕವಿಲ್ಲದೆ, ಬದಲಾಗಿ, ವಾಹನಗಳು ಸ್ಥಳೀಯವಾಗಿ ಅಲ್ಪ-ಶ್ರೇಣಿಯ ವೈರ್‌ಲೆಸ್ ಸಿಗ್ನಲ್‌ಗಳನ್ನು ಬಳಸಿಕೊಂಡು ಸಂವಹನ ನಡೆಸುತ್ತವೆ. ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಹ ಈ ವ್ಯವಸ್ಥೆಯು ಕಾರ್ಯನಿರ್ವಹಿಸಲು ಅನುವು ಮಾಡಿಕೊಡುತ್ತದೆ ಎಂದು ಹೇಳಿದ್ದಾರೆ.

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಅಭಿವೃದ್ಧಿಪಡಿಸುತ್ತಿರುವ ಚೌಕಟ್ಟಿನ ಅಡಿಯಲ್ಲಿ, ವಾಹನಗಳಿಗೆ ಮೀಸಲಾದ ಹಾರ್ಡ್‌ವೇರ್ ಮಾಡ್ಯೂಲ್ ಅಳವಡಿಸಲಾಗುವುದು. ಇದು ಹತ್ತಿರದ ಸಂಚಾರದೊಂದಿಗೆ ಅಲ್ಪ-ಶ್ರೇಣಿಯ ಸಂವಹನ ನಡೆಸುತ್ತದೆ. ಇದು ವಾಹನಗಳು ವ್ಯಾಪ್ತಿಯಲ್ಲಿರುವವರೆಗೆ ನೈಜವಾಗಿ ಕಾರ್ಯನಿರ್ವಹಿಸುತ್ತದೆ. ಇದರ ವಿನಿಮಯವಾಗುವ ಡೇಟಾ ಸೀಮಿತವಾಗಿರುತ್ತದೆ. ಇದು ಮುಂದೆ ಇರುವ ಅಪಾಯಕಾರಿ ಪರಿಸ್ಥಿತಿಯನ್ನು ಗುರುತಿಸುತ್ತದೆ. ಉದಾಹರಣೆಗೆ, ಮುಂದಿರುವ ವಾಹನವು ವೇಗವಾಗಿ ಬರುತ್ತಿದ್ದರೆ, ಅದನ್ನು ನಿಧಾನವಾಗಿಸುವಂತೆ ಸೂಚಿಸುತ್ತದೆ. ಒಂದು ವೇಳೆ ಚಾಲಕನ ನಿಯಂತ್ರಣ ತಪ್ಪಿ ವೇಗವಾಗಿ ಬಂದರೆ ಅದನ್ನು ತಡೆಯುವುದಿಲ್ಲ. ಆದರೆ ಮೊದಲೇ ಈ ಬಗ್ಗೆ ಸೂಚನೆಯನ್ನು ನೀಡುತ್ತದೆ.

ಸಚಿವಾಲಯದ ದೃಷ್ಟಿಕೋನದ ಪ್ರಕಾರ, V2Vಯು ವಾಹನಗಳಿಗೆ ಮುಖ್ಯವಾಗಿರುತ್ತದೆ. ಹಲವು ಅಪಾಯಗಳನ್ನು ತಡೆಯುತ್ತದೆ. ಬ್ರೇಕ್​​ ಫೇಲ್, ವೇಗವಾಗಿ ಬರುವುದು, ಇತರ ಅಪಾಯಕಾರಿ ವಿಚಾರಗಳ ಬಗ್ಗೆ ಸೂಚನೆಯನ್ನು ನೀಡುತ್ತದೆ. ಈ ವ್ಯವಸ್ಥೆಗೆ ತಾಂತ್ರಿಕ ಮಾನದಂಡಗಳು ಮತ್ತು ಸಂವಹನ ಪ್ರೋಟೋಕಾಲ್‌ಗಳನ್ನು ಅಂತಿಮಗೊಳಿಸುವ ಉದ್ದೇಶದಿಂದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧಿಕಾರಿಗಳು ವಾಹನ ತಯಾರಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ತಕ್ಷಣದಲ್ಲಿ ಈ ನಿಯಮ ಬರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ದೇಶಾದ್ಯಂತ ಈ ಬಗ್ಗೆ ಕಾರ್ಯಚರಣೆ ಹಾಗೂ ಅಭಿಯಾನವನ್ನು ನಡೆಸಲಾಗುವುದು ಎಂದು ಸಚಿವಾಲಯ ಹೇಳಿದೆ. ಯಾವುದೇ ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ ವಿಶ್ವಾಸಾರ್ಹ ಕಾರ್ಯಾಚರಣೆ ಮಾಡುತ್ತದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಸಂಚಾರ ಉಲ್ಲಂಘನೆ ಗುರುತಿಸಲು ಹೆಲ್ಮೆಟ್​​ನ್ನು ಟ್ರಾಫಿಕ್ ಪೊಲೀಸ್ ಸಾಧನವಾಗಿ ಪರಿವರ್ತಿಸಿದ ಟೆಕ್ಕಿ

ಇನ್ನು ಇದನ್ನು ವಾಹನದಲ್ಲಿ ಅಳವಡಿಸಲು ಆಗುವ ವೆಚ್ಚದ ಬಗ್ಗೆ ನಿಖರವಾಗಿ ತಿಳಿಸಿಲ್ಲ. ಆದರೆ ಹೆಚ್ಚುವರಿ ಹಾರ್ಡ್‌ವೇರ್ ಪ್ರತಿ ವಾಹನಕ್ಕೆ ಕೆಲವು ಸಾವಿರ ರೂಪಾಯಿ ಆಗಬಹುದು ಎಂದು ಹೇಳಲಾಗಿದೆ. ಈ ವ್ಯವಸ್ಥೆಯು ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್‌ಗಳಂತಹ ಅಸ್ತಿತ್ವದಲ್ಲಿರುವ ಸುರಕ್ಷತಾ ತಂತ್ರಜ್ಞಾನಗಳ ಜೊತೆಗೆ ಕಾರ್ಯನಿರ್ವಹಿಸುವ ಸಾಧ್ಯತೆ ಇದೆ. ಈಗಾಗಲೇ ಹಲವು ವಾಹಳಲ್ಲಿ ಕ್ಯಾಮರ ಹಾಗೂ ಇತರ ಎಚ್ಚರಿಕೆ ಧ್ವನಿವರ್ಧಕಗಳನ್ನು ಬಳಸುವ ಬದಲು ಈ ತಂತ್ರಜ್ಞಾನವನ್ನು ಬಳಸುವುದು ಉತ್ತಮ ಎಂದು ಹೇಳಲಾಗಿದೆ. ಪ್ರತಿ ವರ್ಷವೂ ರಸ್ತೆ ಅಪಘಾತಗಳು ಹೆಚ್ಚುತ್ತ ಇದೆ . ಇದನ್ನು ತಡೆಯಲು ಸರ್ಕಾರದ ದೃಷ್ಟಿಕೋನದಿಂದ, V2V ಸಂವಹನವು ಸಾಧನ ತರಲಾಗಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್