AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರದ ಲಸಿಕೆ ದರ ನೀತಿ ವಿರೋಧಿಸಿ ಕೇರಳದಲ್ಲಿ ಲಸಿಕೆ ಚಾಲೆಂಜ್: ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ ಒಂದೇ ದಿನ ಲಭಿಸಿದ್ದು ₹1.3 ಕೋಟಿ

Vaccine Challenge: ಕೇಂದ್ರ ಸರ್ಕಾರದ ಸಹಾಯವಿಲ್ಲದೆ ರಾಜ್ಯದ ಜನರಿಗೆ ಉಚಿತ ಲಸಿಕೆ ಪೂರೈಸಲು ನಿರ್ಧರಿಸಿರುವ ಕೇರಳ ಸರ್ಕಾರ ಲಸಿಕೆ ಚಾಲೆಂಜ್ ಸ್ವೀಕರಿಸಿ ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ (CMDRF) ಧನ ಸಹಾಯ ನೀಡಲು ಕರೆ ನೀಡಿದೆ.

ಕೇಂದ್ರ ಸರ್ಕಾರದ ಲಸಿಕೆ ದರ ನೀತಿ ವಿರೋಧಿಸಿ ಕೇರಳದಲ್ಲಿ ಲಸಿಕೆ ಚಾಲೆಂಜ್: ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ ಒಂದೇ ದಿನ ಲಭಿಸಿದ್ದು ₹1.3 ಕೋಟಿ
ಪಿಣರಾಯಿ ವಿಜಯನ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Apr 23, 2021 | 8:14 PM

Share

ತಿರುವನಂತಪುರಂ: ಕೊವಿಡ್ ಲಸಿಕೆಗೆ ಪ್ರತ್ಯೇಕ ದರ ನಿರ್ಣಯಿಸಿರುವ ಕೇಂದ್ರ ಸರ್ಕಾರದ ನಿಲುವು ಖಂಡಿಸಿ ಕೇರಳದಲ್ಲಿ ಲಸಿಕೆ ಚಾಲೆಂಜ್ ಅಭಿಯಾನಕ್ಕೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರೆ ನೀಡಿದ್ದಾರೆ. ಕೇಂದ್ರ ಸರ್ಕಾರ ಕೊವಿಡ್ ಲಸಿಕೆಗೆ ಬೇರೆ ಬೇರೆ ದರ ನಿರ್ಣಯಿಸಿದರೂ ರಾಜ್ಯದ ಜನರಿಗೆ ಉಚಿತ ಲಸಿಕೆ ನೀಡುವುದಾಗಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಕೇಂದ್ರ ಸರ್ಕಾರದ ಸಹಾಯವಿಲ್ಲದೆ ರಾಜ್ಯದ ಜನರಿಗೆ ಲಸಿಕೆ ಪೂರೈಸಲು ನಿರ್ಧರಿಸಿರುವ ಕೇರಳ ಸರ್ಕಾರ ಲಸಿಕೆ ಚಾಲೆಂಜ್ ಸ್ವೀಕರಿಸಿ ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ (CMDRF) ಧನ ಸಹಾಯ ನೀಡಲು ಕರೆ ನೀಡಿದೆ. ಈ ಅಭಿಯಾನಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು ಶುಕ್ರವಾರ (ಏಪ್ರಿಲ್ 23) ರಂದು ₹1.3 ಕೋಟಿಗಿಂತಲೂ ಹೆಚ್ಚು ಹಣ ದೇಣಿಗೆಯಾಗಿ ಲಭಿಸಿದೆ.ಈ ಅಭಿಯಾನ ಸಕ್ರಿಯವಾಗಿದ್ದು,ದೇಣಿಗೆ ಹರಿದುಬರುತ್ತಲೇ ಇದೆ ಎಂದು ಸರ್ಕಾರದ ಮೂಲಗಳು ಹೇಳಿವೆ. ಕೊವಿಡ್ ಸಂಕಷ್ಟದ ನಡುವೆಯೂ ಫೆಬ್ರುವರಿ 27, 2020ರಿಂದ 2021 ಏಪ್ರಿಲ್ 23ರವರೆಗೆ ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ ₹525.3 ಕೋಟಿ ದೇಣಿಗೆ ಲಭಿಸಿದೆ . ರಾಜ್ಯದಲ್ಲಿ ಕೊವಿಡ್ ಸಂಬಂಧಿತ  ಕಾರ್ಯಗಳಿಗಾಗಿ  ರಾಜ್ಯ ಸರ್ಕಾರ  ಇಲ್ಲಿಯವರೆಗೆ ₹730.22 ಕೋಟಿ ವ್ಯಯಿಸಿದೆ. ₹ 246 ಕೋಟಿ ಎಲೆಕ್ಟ್ರಾನಿಕ್ ಪೇಮೆಂಟ್ ಮೂಲಕ ಲಭಿಸಿದೆ ಎಂದು  ಮಾತೃಭೂಮಿ ಪತ್ರಿಕೆ ವರದಿ ಮಾಡಿದೆ.

ಏಪ್ರಿಲ್ 21 ಬುಧವಾರದಂದು ಸಾಮಾಜಿಕ ಮಾಧ್ಯಮಗಳಲ್ಲಿ #VaccineChallenge ಎಂಬ ಹ್ಯಾಷ್​ಟ್ಯಾಗ್​ನೊಂದಿಗೆ ಈ ಅಭಿಯಾನ ಆರಂಭವಾಗಿತ್ತು. ಕೇರಳದಲ್ಲಿ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಘೋಷಿಸಿದ ತಕ್ಷಣವೇ ಈ ಚಾಲೆಂಜ್ ಆರಂಭವಾಗಿದ್ದು ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ ದೇಣಿಗೆ ನೀಡುವ ಮೂಲಕ ಜನರು ಈ ಚಾಲೆಂಜ್ ನಲ್ಲಿ ಭಾಗವಹಿಸಿದ್ದಾರೆ .

CMDRF

ಲಸಿಕೆ ಚಾಲೆಂಜ್​ನಲ್ಲಿ ಭಾಗಿಯಾಗುವುದು ಹೇಗೆ? donation.cmdrf.kerala.gov.in ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲಿರುವ Donate ಟ್ಯಾಬ್ ಕ್ಲಿಕ್ ಮಾಡಿ ದೇಣಿಗೆ ನೀಡಬಹುದಾಗಿದೆ. ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ,ವಾಲೆಟ್ ಮೂಲಕ ಹಣ ಪಾವತಿ ಮಾಡಬಹುದು. ಇದಾದನಂತರ ಇಮೇಲ್ ಮತ್ತು ಫೋನ್ ನಂಬರ್ ನಮೂದಿಸಿ ದೇಣಿಗೆ ನೀಡಲು ಬಯಸುವ ಮೊತ್ತ ನಮೂದಿಸಿ ಕ್ಲಿಕ್ ಮಾಡಿದರೆ ಹಣ ದೇಣಿಗೆ ರೂಪದಲ್ಲಿ ಪರಿಹಾರ ನಿಧಿಗೆ ಸಂದಾಯವಾಗುತ್ತದೆ. ದೇಣಿಗೆ ನೀಡಿದ ರಸೀದಿಯನ್ನೂ ಇಲ್ಲಿ ಡೌನ್​ಲೋಡ್ ಮಾಡಬಹುದು. ಗೂಗಲ್ ಪೇ ಮೂಲಕವೂ ಪರಿಹಾರ ನಿಧಿಗೆ ಹಣ ನೀಡಬಹುದು.

ಕೇರಳಿಗನೆಂದು ಹೇಳಲು ಹೆಮ್ಮೆಯಾಗುತ್ತಿದೆ: ಪಿಣರಾಯಿ ವಿಜಯನ್ ಕೊವಿಡ್ ಲಸಿಕೆ ಖರೀದಿ ಮಾಡಲು ಎಲ್ಲರೂ ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ ದೇಣಿಗೆ ನೀಡಿ ಎಂದು ಕರೆ ನೀಡಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇರಳಿಗನೆಂದು ಹೇಳಲು ಹೆಮ್ಮೆಯಾಗುತ್ತಿದೆ ಎಂದಿದ್ದಾರೆ.ಸಂದಿಗ್ಧ ಪರಿಸ್ಥಿತಿಯಲ್ಲಿ ರಾಜ್ಯದ ಜನರ ಸುರಕ್ಷೆ ಮತ್ತು ರಾಜ್ಯದ ಹಿತಕ್ಕಾಗಿ ಒಗ್ಗಟ್ಟಿನಿಂದ ನಿಂತವರು ಕೇರಳದವರು. ಈ ಮೂಲಕ ನಾವು ಜಗತ್ತಿಗೆ ಮಾದರಿಯಾಗಿದ್ದೇವೆ.ಕೇರಳಿಗನೆಂದು ಹೆಮ್ಮೆ ಪಡಲು ಈಗ ಮತ್ತೊಂದು ಸಂದರ್ಭ ಲಭಿಸಿದೆ ಎಂದು ಶುಕ್ರವಾರ ಕೊವಿಡ್ ಅವಲೋಕನ ಸಭೆ ನಂತರ ಮಾತನಾಡಿದ ವಿಜಯನ್ ಹೇಳಿದ್ದಾರೆ. ಲಸಿಕೆ ಖರೀದಿಗಾಗಿ ಹಣ ಸಂಗ್ರಹಿಸಲು ಸಿಎಂಡಿಆರ್​ಡಿಎಫ್​ನಲ್ಲಿ ಪ್ರತ್ಯೇಕ ಖಾತೆ ಆರಂಭಿಸುವುದಾಗಿ ಅವರು ಹೇಳಿದ್ದಾರೆ.

ಇದನ್ನೂ ಓದಿ: Rajinikanth : ಕೇರಳದ ಹುಡುಗನೊಬ್ಬ 300 ರೂಬಿಕ್ ಕ್ಯೂಬ್​ ನಲ್ಲಿ ನಟ ರಜನಿಕಾಂತ್ ಅವರ ಮುಖ ಸೃಷ್ಟಿಸಿದ್ದಾರೆ.!

(Vaccine Challenge in Kerala Over Rs 1.3 cr contributed to CMDRF on Friday chief minister Pinarayi Vijayan requests contribution)

Published On - 8:12 pm, Fri, 23 April 21

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್