AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಿಗೆ ಕೊರೊನಾ ಲಸಿಕೆ ನೀಡುವ ಯೋಜನೆಯ ಕುರಿತು ಇನ್ನೆರಡು ವಾರದಲ್ಲಿ ನಿರ್ಧಾರ ಸಾಧ್ಯತೆ

Vaccine for Children: ಮಕ್ಕಳಿಗೆ ಲಸಿಕೆ ನೀಡುವ ಯೋಜನೆಯ ಕುರಿತಂತೆ ಇನ್ನೆರಡು ವಾರದಲ್ಲಿ ನಿರ್ಧಾರವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಕುರಿತ ಸಂಪೂರ್ಣ ವರದಿ ಇಲ್ಲಿದೆ.

ಮಕ್ಕಳಿಗೆ ಕೊರೊನಾ ಲಸಿಕೆ ನೀಡುವ ಯೋಜನೆಯ ಕುರಿತು ಇನ್ನೆರಡು ವಾರದಲ್ಲಿ ನಿರ್ಧಾರ ಸಾಧ್ಯತೆ
ಕೊವಿಡ್ ಲಸಿಕೆ
TV9 Web
| Edited By: |

Updated on:Nov 23, 2021 | 12:23 PM

Share

ನವದೆಹಲಿ: ಮುಂದಿನ ಎರಡು ವಾರಗಳಲ್ಲಿ ರೋಗ ಪ್ರತಿರೋಧಕ ಶಕ್ತಿಯ ಕುರಿತ ಸರ್ಕಾರದ ಉನ್ನತ ಸಲಹಾ ಗುಂಪಿನ ಸಭೆ ನಡೆಯಲಿದ್ದು, ಅದರಲ್ಲಿ ಮಕ್ಕಳಿಗೆ ಕೊರೊನಾ ಲಸಿಕೆ ನೀಡುವುದೂ ಸೇರಿದಂತೆ ಹಲವು ಅಂಶಗಳು  ಚರ್ಚೆಯಾಗಲಿವೆ. ಕೊಮೊರ್ಬಿಡಿಟೀಸ್ ಹೊಂದಿರುವ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನವು ಜನವರಿಯಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ. ಮಾರ್ಚ್ ವೇಳೆಗೆ, ಇತರ ಎಲ್ಲ ಮಕ್ಕಳು ಲಸಿಕೆಗೆ ಅರ್ಹರಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಇದರೊಂದಿಗೆ ವಯಸ್ಕರಿಗೆ ಕೊವಿಡ್ 19 ಬೂಸ್ಟರ್ ಲಸಿಕೆ ನೀಡಲು ರೋಗ ನಿರೋಧಕ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು (NTAGI), ಸಮಗ್ರ ಯೋಜನೆಯನ್ನು ರೂಪಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಸಾಂಕ್ರಾಮಿಕ ಪರಿಸ್ಥಿತಿಯನ್ನು ಅವಲಂಬಿಸಿ ಹಲವಾರು ರಾಜ್ಯಗಳಲ್ಲಿ ಶಾಲೆಗಳು ತರಗತಿಗಳನ್ನು ಪ್ರಾರಂಭಿಸಿವೆ. ಈಗ ಮಕ್ಕಳಿಗೆ ಲಸಿಕೆ ಆದ್ಯತೆಯಾಗಿ ನೋಡಲಾಗುತ್ತಿದ್ದು, ಆ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಭಾರತದಲ್ಲಿ ಕೊರೊನಾದಿಂದ ಸಾಕಷ್ಟು ಜನರು ಬಲಿಯಾದ ಬೆನ್ನಲ್ಲೇ, ಮಕ್ಕಳಿಗೆ ರಕ್ಷಣೆ ನೀಡುವ ಕುರಿತು ಚರ್ಚೆಯಾಗುತ್ತಿದೆ. ಕಾರಣ, ವಯಸ್ಕರಿಗೆ ಈಗಾಗಲೇ ಕನಿಷ್ಠ ಒಂದು ಅಥವಾ ಸಂಪೂರ್ಣ ಲಸಿಕೆ ನೀಡಲಾಗಿದೆ. ಆದರೆ ಮಕ್ಕಳಿಗೆ ಇನ್ನೂ ಲಸಿಕೆ ನೀಡಲು ಪ್ರಾರಂಭಿಸಿಲ್ಲ. ಆದ್ದರಿಂದ ಸರ್ಕಾರ ಈ ಕುರಿತು ಗಂಭೀರವಾಗಿ ಚಿಂತನೆ ನಡೆಸಿದೆ.

ವಯಸ್ಕರಿಗೆ ಬೂಸ್ಟರ್ ಡೋಸ್‌ಗಳನ್ನು ನೀಡುವ ಕುರಿತು ಈಗಾಗಲೇ ಚರ್ಚೆಯಾಗುತ್ತಿದ್ದು, ಮುಂದಿನ ಸಭೆಯಲ್ಲೂ ಚರ್ಚೆಯಾಗಲಿದೆ ಎನ್ನಲಾಗಿದೆ. ಕೆಲವು ರಾಷ್ಟ್ರಗಳು ಸೋಂಕು ವಿರುದ್ಧದ ಹೋರಾಟದಲ್ಲಿ ಬೂಸ್ಟರ್ ಡೋಸ್ ಪ್ರಮುಖ ಪಾತ್ರ ವಹಿಸಲಿವೆ ಎಂದು ಹೇಳಿವೆ. ಈ ಕುರಿತು ಪ್ರಪಂಚದಾದ್ಯಂತ ನೀತಿ ನಿರೂಪಕರು ಮತ್ತು ವಿಜ್ಞಾನಿಗಳ ನಡುವೆ ಚರ್ಚೆ ನಡೆಯುತ್ತಿದೆ. ಅಮೇರಿಕಾದಲ್ಲಿ ಬೂಸ್ಟರ್ ಡೋಸ್ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅನೇಕ ವಿಜ್ಞಾನಿಗಳು ಬೂಸ್ಟರ್ ಡೋಸ್ ಅಗತ್ಯತೆಯನ್ನು ಪ್ರಶ್ನಿಸಿದ್ದು, ಮೂಲ ಲಸಿಕೆ ರೋಗ ಪ್ರತಿರೋಧಕ್ಕೆ ಸಮರ್ಥವಾಗಿರುವಾಗ, ಬೂಸ್ಟರ್ ಡೋಸ್ ಅಗತ್ಯವಿಲ್ಲ ಎಂದಿದ್ದಾರೆ.

ಕೇಂದ್ರ ಸರ್ಕಾರ ಬೂಸ್ಟರ್ ಡೋಸ್ ಲಸಿಕೆ ಕುರಿತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಹೇಳಿದರೆ ಮಾತ್ರ ಪರಿಗಣನೆ ಮಾಡಲಾಗುತ್ತದೆ ಎಂದು ಹೇಳಿತ್ತು. ಇತ್ತೀಚೆಗೆ ಐಸಿಎಂಆರ್ ಮಹಾ ನಿರ್ದೇಶಕ ಡಾ.ಬಲರಾಮ್ ಭಾರ್ಗವ್ ಮಾತನಾಡಿ, ಕೊರೋನ ವೈರಸ್ ಸಾಂಕ್ರಾಮಿಕದಿಂದ (ಕೋವಿಡ್ -19) ಮತ್ತಷ್ಟು ರಕ್ಷಣೆಗಾಗಿ ಬೂಸ್ಟರ್ ಡೋಸ್ ಲಸಿಕೆ ಅಗತ್ಯವಿದೆ ಎಂದು ಸಾಧಿಸಲು ಇದುವರೆಗೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಎಂದಿದ್ದರು. ಜೊತೆಗೆ ಅವರು ಸದ್ಯದ ಆದ್ಯತೆ ಎಲ್ಲಾ ವಯಸ್ಕರಿಗೆ ಎರಡೂ ಡೋಸ್ ಲಸಿಕೆ ನೀಡುವುದು ಎಂದಿದ್ದರು. ಈ ಮೂಲಕ ಬೂಸ್ಟರ್ ಡೋಸ್ ಲಸಿಕೆ ಕುರಿತ ಚರ್ಚೆಗೆ ಅವರು ವಿರಾಮ ಹಾಕಿದ್ದಾರೆ. ಆದ್ದರಿಂದ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪಿನ ಸಭೆಯಲ್ಲಿ ಮಕ್ಕಳಿಗೆ ಲಸಿಕೆ ಹಾಗೂ ಲಸಿಕೆ ನೀಡುವಿಕೆಯ ವೇಗದ ಕುರಿತಂತೆ ಮಹತ್ತರವಾಗಿ ಚರ್ಚೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ:

ಬೂಸ್ಟರ್ ಡೋಸ್ ಲಸಿಕೆ ಅಗತ್ಯವಿದೆ ಎಂಬುದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ : ಐಸಿಎಂಆರ್ ಮುಖ್ಯಸ್ಥರ ಹೇಳಿಕೆ

ಸಾಂಕ್ರಾಮಿಕ ರೋಗದ ವರ್ಷದಲ್ಲಿ ಕೇರಳದಲ್ಲಿ ಜನನ ಪ್ರಮಾಣ ತೀವ್ರ ಕುಸಿತ

Published On - 12:14 pm, Tue, 23 November 21

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ