AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಿರುದ್ಧ ಹೋರಾಟಕ್ಕೆ 2 ಲಸಿಕೆಗಳು ಸಿದ್ಧ; ಕೊವಿಶೀಲ್ಡ್​, ಕೊವ್ಯಾಕ್ಸಿನ್​ಗೆ DCGI ಅನುಮೋದನೆ

ಕೊವ್ಯಾಕ್ಸಿನ್​ ಮತ್ತು ಕೊವಿಶೀಲ್ಡ್ ಲಸಿಕೆಗಳು ಶೇ.100ರಷ್ಟು ಸುರಕ್ಷಿತವಾಗಿವೆ. ಅದರ ಸುರಕ್ಷತೆ ಬಗ್ಗೆ ಸ್ವಲ್ಪ ಅನುಮಾನ ಇದ್ದಿದ್ದರೂ ನಾವು ಅನುಮೋದನೆ ನೀಡುತ್ತಿರಲಿಲ್ಲ ಎಂದು DCGI ತಿಳಿಸಿದೆ.

ಕೊರೊನಾ ವಿರುದ್ಧ ಹೋರಾಟಕ್ಕೆ 2 ಲಸಿಕೆಗಳು ಸಿದ್ಧ; ಕೊವಿಶೀಲ್ಡ್​, ಕೊವ್ಯಾಕ್ಸಿನ್​ಗೆ DCGI ಅನುಮೋದನೆ
Follow us
Lakshmi Hegde
| Updated By: ಆಯೇಷಾ ಬಾನು

Updated on:Jan 03, 2021 | 2:48 PM

ನವದೆಹಲಿ: ಕೊರೊನಾ ಲಸಿಕೆ ಯಾವಾಗ ಬಳಕೆಗೆ ಸಿಗಬಹುದು ಎಂಬ ನಿರೀಕ್ಷೆಗೆ ಅಂತೂ ತೆರೆ ಬಿದ್ದಿದೆ. ಸೀರಮ್​ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ (ಆಕ್ಸ್​ಫರ್ಡ್ ವಿವಿ)​ ಕೊವಿಶೀಲ್ಡ್​ ಮತ್ತು ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್ ಲಸಿಕೆಗಳನ್ನು ತುರ್ತು ಪರಿಸ್ಥಿತಿಯಲ್ಲಿ ಬಳಕೆ ಮಾಡಲು ಡ್ರಗ್​ ಕಂಟ್ರೋಲರ್​ ಜನರಲ್​ ಆಫ್​ ಇಂಡಿಯಾ (DCGI-ಭಾರತೀಯ ಪ್ರಧಾನ ಔಷಧ ನಿಯಂತ್ರಣ ಇಲಾಖೆ) ಇಂದು ಅಧಿಕೃತವಾಗಿ ಅನುಮೋದನೆ ನೀಡಿದೆ.

DCGI ಅಧ್ಯಕ್ಷ ವಿ.ಜಿ. ಸೋಮಾನಿ ಇಂದು, ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್​ನಲ್ಲಿ ಸುದ್ದಿಗೋಷ್ಠಿ ನಡೆಸಿ ಘೋಷಿಸಿದ್ದಾರೆ. ಇವೆರಡೂ ಲಸಿಕೆ ತಯಾರಿಕಾ ಸಂಸ್ಥೆಗಳು ತಮ್ಮ ವ್ಯಾಕ್ಸಿನ್​ನ ಕ್ಲಿನಿಕಲ್​ ಪ್ರಯೋಗದ ಸಮಗ್ರ ಮಾಹಿತಿಯನ್ನೂ ಸಲ್ಲಿಸಿದ್ದಾರೆ. ಎರಡೂ ಕಂಪನಿಗಳ ಲಸಿಕೆಗಳ ತುರ್ತು ನಿರ್ಬಂಧಿತ ಬಳಕೆಗೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕೊವ್ಯಾಕ್ಸಿನ್​ ಮತ್ತು ಕೊವಿಶೀಲ್ಡ್ ಲಸಿಕೆಗಳು ಶೇ.100ರಷ್ಟು ಸುರಕ್ಷಿತವಾಗಿವೆ. ಅದರ ಸುರಕ್ಷತೆ ಬಗ್ಗೆ ಸ್ವಲ್ಪ ಅನುಮಾನ ಇದ್ದಿದ್ದರೂ ನಾವು ಅನುಮೋದನೆ ನೀಡುತ್ತಿರಲಿಲ್ಲ. ಇನ್ನು ಸಣ್ಣ ಜ್ವರ, ಮೈಕೈ ನೋವು ಮತ್ತು ಅಲರ್ಜಿಗಳು ಎಲ್ಲ ರೀತಿ ಲಸಿಕೆಗಳ ಸಾಮಾನ್ಯ ಅಡ್ಡಪರಿಣಾಮಗಳು. ಈ ಬಗ್ಗೆ ಯಾರೂ ಹೆದರುವುದು ಬೇಡ ಎಂದು ಹೇಳಿದ್ದಾರೆ.

ಟಿವಿ9 ಕನ್ನಡ ಡಿಜಿಟಲ್ ಲೈವ್ ಬ್ಲಾಗ್

Published On - 12:14 pm, Sun, 3 January 21

ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’