AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಪತ್ತೆಯಾಗಿರುವ ಕೊರೊನಾವೈರಸ್​ನ ರೂಪಾಂತರಿ ವಿರುದ್ಧ ಲಸಿಕೆ ಪರಿಣಾಮಕಾರಿ : ವಿಶ್ವ ಆರೋಗ್ಯ ಸಂಸ್ಥೆ

WHO: ಜಾಗತಿಕವಾಗಿ ತಜ್ಞರೊಂದಿಗಿನ ಚರ್ಚೆಗಳ ಪ್ರಕಾರ ವಿಶ್ವ ಆರೋಗ್ಯಸಂಸ್ಥೆಗೆ ಇದುವರೆಗೆ ತಿಳಿದಿರುವ ಮಾಹಿತಿ ಆಧರಿಸಿ ಭಾರತೀಯ ರೂಪಾಂತರಿ ವಿರುದ್ಧ ಲಸಿಕೆ ಪರಿಣಾಮಕಾರಿತ್ವದ ಕುರಿತು ಡಾ. ರೊಡೆರಿಕೊ ಎಚ್ ಆಫ್ರಿನ್ ಹೇಳಿಕೆ ನೀಡಿದ್ದಾರೆ.

ಭಾರತದಲ್ಲಿ ಪತ್ತೆಯಾಗಿರುವ ಕೊರೊನಾವೈರಸ್​ನ ರೂಪಾಂತರಿ ವಿರುದ್ಧ ಲಸಿಕೆ ಪರಿಣಾಮಕಾರಿ : ವಿಶ್ವ ಆರೋಗ್ಯ ಸಂಸ್ಥೆ
ಡಾ. ರೊಡೆರಿಕೊ ಎಚ್ ಆಫ್ರಿನ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 11, 2021 | 7:23 PM

Share

ದೆಹಲಿ: ಭಾರತದಲ್ಲಿ ಪತ್ತೆಯಾಗಿರುವ ಕೊರೊನಾವೈರಸ್ ನ B.1.617 ರೂಪಾಂತರಿ ಹೆಚ್ಚು ಅಪಾಯಕಾರಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದ ಬೆನ್ನಲ್ಲೇ ಭಾರತಕ್ಕೆ ಲಸಿಕೆಗಳು, ಚಿಕಿತ್ಸಕ ಮತ್ತು ರೋಗನಿರ್ಣಯವು ಪರಿಣಾಮಕಾರಿಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ (WHO) ಭಾರತದ ಪ್ರತಿನಿಧಿ ಮಂಗಳವಾರ ಹೇಳಿದ್ದಾರೆ. ಸುದ್ದಿ ಸಂಸ್ಥೆ ಎಎನ್‌ಐ ಪ್ರಕಾರ, ಜಾಗತಿಕವಾಗಿ ತಜ್ಞರೊಂದಿಗಿನ ಚರ್ಚೆಗಳ ಪ್ರಕಾರ ವಿಶ್ವ ಆರೋಗ್ಯಸಂಸ್ಥೆಗೆ ಇದುವರೆಗೆ ತಿಳಿದಿರುವ ಮಾಹಿತಿ ಆಧರಿಸಿ ಭಾರತೀಯ ರೂಪಾಂತರಿ ವಿರುದ್ಧ ಲಸಿಕೆ ಪರಿಣಾಮಕಾರಿತ್ವದ ಕುರಿತು ಡಾ. ರೊಡೆರಿಕೊ ಎಚ್ ಆಫ್ರಿನ್  ಹೇಳಿಕೆ ನೀಡಿದ್ದಾರೆ. ಭಾರತದಲ್ಲಿ ಕೊರೊನಾವೈರಸ್ ಕಾಯಿಲೆಯ (ಕೊವಿಡ್ -19) ಸಾಂಕ್ರಾಮಿಕ ರೋಗದ ಎರಡನೇ ಅಲೆಗೆ ಕಾರಣ ಎಂದು ನಂಬಲಾಗುವ ಬಿ.1.617 ರೂಪಾಂತರಿಯು ಜಾಗತಿಕ ಕಳವಳದ ರೂಪಾಂತರವೆಂದು ವರ್ಗೀಕರಿಸಲ್ಪಟ್ಟ ನಾಲ್ಕನೇ ರೂಪಾಂತರವಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ಕೊವಿಡ್ -19 ಟೆಕ್ನಿಕಲ್ ಲೀಡ್ ಡಾ. ಮಾರಿಯಾ ವ್ಯಾನ್ ಕೆರ್ಖೋವ್ ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದು ಹೆಚ್ಚಿದ ಪ್ರಸರಣವನ್ನು ಸೂಚಿಸಲು ಕೆಲವು ಲಭ್ಯವಿರುವ ಮಾಹಿತಿಯಿದೆ. ಆದರೆ ಬಿ .1.617 ರೂಪಾಂತರ ಮತ್ತು ಎಲ್ಲಾ ಉಪ-ವಂಶಾವಳಿಗಳ ಬಗ್ಗೆ ಹೆಚ್ಚಿನ ಮಾಹಿತಿ ಬೇಕು ಎಂದು ಡಾ. ಕೆರ್ಖೋವ್ ಅವರು ವಿಜ್ಞಾನಿಗಳಿಗೆ ಹೇಳಿದ್ದಾರೆ.

ನಮ್ಮ Epi ತಂಡಗಳು ಮತ್ತು ನಮ್ಮ ಲ್ಯಾಬ್ ತಂಡಗಳು ಆಂತರಿಕವಾಗಿ, ಬಿ 1.617 ರ ಹೆಚ್ಚಿನ ಪ್ರಸರಣವನ್ನು ಸೂಚಿಸಲು ಕೆಲವು ಲಭ್ಯವಿರುವ ಮಾಹಿತಿಯನ್ನು ಹೊಂದಿವೆ. ಆದ್ದರಿಂದ ನಾವು ಇದನ್ನು ಜಾಗತಿಕ ಮಟ್ಟದಲ್ಲಿ ಕಳಕಳಿಯ ರೂಪಾಂತರವೆಂದು ವರ್ಗೀಕರಿಸುತ್ತಿದ್ದೇವೆ ಎಂದು ಅವರು ಹೇಳಿದರು.

ಭಾರತದಲ್ಲಿ ಪ್ರತಿದಿನ ದಾಖಲಾಗುವ ಹೊಸ ಕೊವಿಡ್ ಪ್ರಕರಣಗಳ ಸಂಖ್ಯೆ ಮತ್ತು ಮರಣ ಸಂಖ್ಯೆಯಲ್ಲಿ ಕುಸಿತ ಕಂಡು ಬಂದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಹೇಳಿದೆ. ದೇಶದಲ್ಲಿ ಪ್ರತಿದಿನ 3 ಲಕ್ಷಕಿಂತಲೂ ಹೆಚ್ಚು ಸೋಂಕಿತರು ಪತ್ತೆಯಾಗುತ್ತಿದ್ದು, ಇದು ಆರೋಗ್ಯ ವ್ಯವಸ್ಥೆಯ ಮೇಲೆ ಹೆಚ್ಚಿನ ಒತ್ತಡವನ್ನುಂಟು ಮಾಡಿದೆ.

ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ, ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಅವರು ನೈಜ ಸಂಖ್ಯೆಗಳನ್ನು ವರದಿ ಮಾಡುವ ಬಗ್ಗೆ ಪ್ರಕ್ರಿಯೆ ಹೆಚ್ಚಿಸಲು ಸರ್ಕಾರಗಳಿಗೆ ಕರೆ ನೀಡಿದರು. ಸೋಂಕುಗಳ ಪ್ರಮಾಣ ಮತ್ತು ಸಾವುನೋವುಗಳು ಚಿಂತಾಜನಕ ಎಂದು ಹೇಳಿದ್ದಾರೆ ಸೌಮ್ಯಾ.

ಈ ಸಮಯದಲ್ಲಿ, ಪರಿಸ್ಥಿತಿ ತುಂಬಾ ಆತಂಕಕಾರಿಯಾಗಿದೆ ಎಂದು ನಾನು ಹೇಳುತ್ತೇನೆ. ಭಾರತ ಮತ್ತು ಆಗ್ನೇಯ ಪ್ರದೇಶದ ಇತರ ದೇಶಗಳಲ್ಲಿ ನಾವು ಇಂದು ನೋಡುತ್ತಿರುವ ಪ್ರಕರಣಗಳು ಮತ್ತು ಸಾವುಗಳ ಸಂಖ್ಯೆ ನಮಗೆ ಕಳವಳವಿದೆ. ವಿಶ್ವದ ಪ್ರತಿಯೊಂದು ದೇಶಗಳು, ವಾಸ್ತವವಾಗಿ, ಪ್ರಕರಣಗಳು ಮತ್ತು ಸಾವುಗಳ ಸಂಖ್ಯೆಯನ್ನು ಅದರ ನಿಜವಾದ ಸಂಖ್ಯೆಗೆ ಕಡಿಮೆ ಅಂದಾಜು ಮಾಡುತ್ತಿದ್ದೀರಿ  ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಭಾರತೀಯರು ಕೇವಲ ಕೊರೊನಾದಿಂದ ಸಾಯುತ್ತಿಲ್ಲ: ವಿಶ್ವ ಆರೋಗ್ಯ ಸಂಸ್ಥೆ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್

ಭಾರತದ ರೂಪಾಂತರಿ ಕೊರೊನಾ ಚಿಂತೆಗೀಡುಮಾಡುವ ತಳಿ ಎಂದ ವಿಶ್ವ ಆರೋಗ್ಯ ಸಂಸ್ಥೆ

Published On - 7:23 pm, Tue, 11 May 21

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!