AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಕೊರೆಯುವ ಚಳಿಯಲ್ಲಿ ಮನುಕುಲದ ಒಳಿತಿಗಾಗಿ ಪ್ರಾರ್ಥನೆ!

ಕೇದಾರನಾಥ: ಕೊರೊನಾ ಪಿಡುಗಿನಿಂದ ಕಂಗೆಟ್ಟಿರುವ ಮಾನವ ಕುಲದ ಒಳಿತಿಗಾಗಿ 7ರಿಂದ 8 ಡಿಗ್ರಿ ತಾಪಮಾನದ ಹಿಮಾಲಯದ ತಪ್ಪಲಿನ ಕೇದಾರನಾಥದ ಮೈಕೊರೆಯುವ ಚಳಿಯಲ್ಲಿ ಧ್ಯಾನ, ಪ್ರಾರ್ಥನೆ ಮಾಡುತ್ತಿರುವುದಾಗಿ ಪಂಚಮಸಾಲಿ ಜಗದ್ಗುರು ಪೀಠದ ವಚನಾನಂದ ಸ್ವಾಮೀಜಿ ತಿಳಿಸಿದ್ದಾರೆ. ತಮ್ಮ ಫೇಸ್ಬುಕ್ ಖಾತೆಯಲ್ಲಿ ನಸುಕಿನ 4.30ರಿಂದ 5.30ರವೆಗಿನ ಬ್ರಾಹ್ಮಿ ಮುಹೂರ್ತದಲ್ಲಿ ಧ್ಯಾನದಲ್ಲಿ ನಿರತರಾಗಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸುದ್ದಿ ಮಾಡುತ್ತಿದೆ. ಜೊತೆಗೆ ಮಾತೃಭೂಮಿಯ ಒಳಿತಿಗಾಗಿಯೂ ಪ್ರಾರ್ಥನೆ ಸಲ್ಲಿಸಿರುವುದಾಗಿಯೂ ತಿಳಿಸಿದ್ದಾರೆ. ಬ್ರಾಹ್ಮಿ ಮುಹೂರ್ತ ಸಾಧುಗಳಿಗೆ ಮತ್ತು ಋಷಿಗಳಿಗೆ ಅತ್ಯಂತ ಪ್ರಮುಖವಾದುದು. […]

ಮೈಕೊರೆಯುವ ಚಳಿಯಲ್ಲಿ ಮನುಕುಲದ ಒಳಿತಿಗಾಗಿ ಪ್ರಾರ್ಥನೆ!
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​|

Updated on:Nov 09, 2020 | 5:43 PM

Share

ಕೇದಾರನಾಥ: ಕೊರೊನಾ ಪಿಡುಗಿನಿಂದ ಕಂಗೆಟ್ಟಿರುವ ಮಾನವ ಕುಲದ ಒಳಿತಿಗಾಗಿ 7ರಿಂದ 8 ಡಿಗ್ರಿ ತಾಪಮಾನದ ಹಿಮಾಲಯದ ತಪ್ಪಲಿನ ಕೇದಾರನಾಥದ ಮೈಕೊರೆಯುವ ಚಳಿಯಲ್ಲಿ ಧ್ಯಾನ, ಪ್ರಾರ್ಥನೆ ಮಾಡುತ್ತಿರುವುದಾಗಿ ಪಂಚಮಸಾಲಿ ಜಗದ್ಗುರು ಪೀಠದ ವಚನಾನಂದ ಸ್ವಾಮೀಜಿ ತಿಳಿಸಿದ್ದಾರೆ.

ತಮ್ಮ ಫೇಸ್ಬುಕ್ ಖಾತೆಯಲ್ಲಿ ನಸುಕಿನ 4.30ರಿಂದ 5.30ರವೆಗಿನ ಬ್ರಾಹ್ಮಿ ಮುಹೂರ್ತದಲ್ಲಿ ಧ್ಯಾನದಲ್ಲಿ ನಿರತರಾಗಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸುದ್ದಿ ಮಾಡುತ್ತಿದೆ. ಜೊತೆಗೆ ಮಾತೃಭೂಮಿಯ ಒಳಿತಿಗಾಗಿಯೂ ಪ್ರಾರ್ಥನೆ ಸಲ್ಲಿಸಿರುವುದಾಗಿಯೂ ತಿಳಿಸಿದ್ದಾರೆ.

ಬ್ರಾಹ್ಮಿ ಮುಹೂರ್ತ ಸಾಧುಗಳಿಗೆ ಮತ್ತು ಋಷಿಗಳಿಗೆ ಅತ್ಯಂತ ಪ್ರಮುಖವಾದುದು. ಬ್ರಾಹ್ಮಿ ಜಾವದಲ್ಲಿ ನಿದ್ರಿಸುವವರು ಪುಣ್ಯ ಗಳಿಸುವ ಅವಕಾಶದಿಂದ ವಂಚಿತರಾಗುತ್ತಾರೆ. ದೀಪಾವಳಿಯ ಹೊತ್ತಲ್ಲಿ ಮಹಾದೇವ ಕೇದಾರನಾಥ ದೇಗುಲದ ಬಳಿ ಕೌಪೀನಧಾರಿಯಾಗಿ ತಪಸ್ಸಿಗೆ ಕೂರುತ್ತಾನೆ.

ಋಷಿಗಳು ಈ ಸಮಯದಲ್ಲಿ ನಾಡಿ ಚಕ್ರಗಳನ್ನು ಸಕ್ರಿಯಗೊಳಿಸಲು ಧ್ಯಾನ, ಪ್ರಾಣಾಯಾಮಗಳಲ್ಲಿ ತೊಡಗಿಕೊಳ್ಳುತ್ತಾರೆ. ಹಿಮಪಾತ, ಚಳಿಗಳ ನಡುವೆ ಪ್ರತಿ ವರ್ಷದಂತೆ ಈ ವರ್ಷವೂ ತಾವು ಕೇದಾರನಾಥದಲ್ಲಿ ಧ್ಯಾನ ಮಾಡುತ್ತಿರುವಾಗಿ ತಿಳಿಸಿದ್ದಾರೆ. ಈ ವಿಡಿಯೋ ಫೇಸ್ಬುಕ್ನಲ್ಲಿ 23ಸಾವಿರಕ್ಕೂ ಹೆಚ್ಚು ವೀಕ್ಷಣೆ ಕಂಡಿದೆ.

ಬೆಳಗಾವಿಯ ಅಥಣಿಯಲ್ಲಿ ಜನಿಸಿದ ಅವರು ಚಿಕ್ಕ ವಯಸ್ಸಲ್ಲೇ ಸನ್ಯಾಸ ಸ್ವೀಕರಿಸಿ ಶ್ವಾಸ ಗುರುವೆಂದೇ ಖ್ಯಾತರಾಗಿದ್ದಾರೆ. ತಮ್ಮ ಶ್ವಾಸ ಯೋಗ ಫೌಂಡೇಶನ್ನಿನ ಮೂಲಕ ಪ್ರಾಣಾಯಾಮ, ಯೋಗಕ್ಕೆ ಸಂಬಧಿಸಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನವಾದಾಗ ಅವರ ಮನೆಗೆ ಭೇಟಿ ನೀಡಿದ ಕಾರಣ ವಚನಾನಂದ ಸ್ವಾಮೀಜಿ ಇತ್ತೀಚೆಗೆ ವಿವಾದಕ್ಕೀಡಾಗಿದ್ದರು.

Published On - 5:14 pm, Mon, 9 November 20

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ