AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಕೊರೆಯುವ ಚಳಿಯಲ್ಲಿ ಮನುಕುಲದ ಒಳಿತಿಗಾಗಿ ಪ್ರಾರ್ಥನೆ!

ಕೇದಾರನಾಥ: ಕೊರೊನಾ ಪಿಡುಗಿನಿಂದ ಕಂಗೆಟ್ಟಿರುವ ಮಾನವ ಕುಲದ ಒಳಿತಿಗಾಗಿ 7ರಿಂದ 8 ಡಿಗ್ರಿ ತಾಪಮಾನದ ಹಿಮಾಲಯದ ತಪ್ಪಲಿನ ಕೇದಾರನಾಥದ ಮೈಕೊರೆಯುವ ಚಳಿಯಲ್ಲಿ ಧ್ಯಾನ, ಪ್ರಾರ್ಥನೆ ಮಾಡುತ್ತಿರುವುದಾಗಿ ಪಂಚಮಸಾಲಿ ಜಗದ್ಗುರು ಪೀಠದ ವಚನಾನಂದ ಸ್ವಾಮೀಜಿ ತಿಳಿಸಿದ್ದಾರೆ. ತಮ್ಮ ಫೇಸ್ಬುಕ್ ಖಾತೆಯಲ್ಲಿ ನಸುಕಿನ 4.30ರಿಂದ 5.30ರವೆಗಿನ ಬ್ರಾಹ್ಮಿ ಮುಹೂರ್ತದಲ್ಲಿ ಧ್ಯಾನದಲ್ಲಿ ನಿರತರಾಗಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸುದ್ದಿ ಮಾಡುತ್ತಿದೆ. ಜೊತೆಗೆ ಮಾತೃಭೂಮಿಯ ಒಳಿತಿಗಾಗಿಯೂ ಪ್ರಾರ್ಥನೆ ಸಲ್ಲಿಸಿರುವುದಾಗಿಯೂ ತಿಳಿಸಿದ್ದಾರೆ. ಬ್ರಾಹ್ಮಿ ಮುಹೂರ್ತ ಸಾಧುಗಳಿಗೆ ಮತ್ತು ಋಷಿಗಳಿಗೆ ಅತ್ಯಂತ ಪ್ರಮುಖವಾದುದು. […]

ಮೈಕೊರೆಯುವ ಚಳಿಯಲ್ಲಿ ಮನುಕುಲದ ಒಳಿತಿಗಾಗಿ ಪ್ರಾರ್ಥನೆ!
ಪೃಥ್ವಿಶಂಕರ
| Edited By: |

Updated on:Nov 09, 2020 | 5:43 PM

Share

ಕೇದಾರನಾಥ: ಕೊರೊನಾ ಪಿಡುಗಿನಿಂದ ಕಂಗೆಟ್ಟಿರುವ ಮಾನವ ಕುಲದ ಒಳಿತಿಗಾಗಿ 7ರಿಂದ 8 ಡಿಗ್ರಿ ತಾಪಮಾನದ ಹಿಮಾಲಯದ ತಪ್ಪಲಿನ ಕೇದಾರನಾಥದ ಮೈಕೊರೆಯುವ ಚಳಿಯಲ್ಲಿ ಧ್ಯಾನ, ಪ್ರಾರ್ಥನೆ ಮಾಡುತ್ತಿರುವುದಾಗಿ ಪಂಚಮಸಾಲಿ ಜಗದ್ಗುರು ಪೀಠದ ವಚನಾನಂದ ಸ್ವಾಮೀಜಿ ತಿಳಿಸಿದ್ದಾರೆ.

ತಮ್ಮ ಫೇಸ್ಬುಕ್ ಖಾತೆಯಲ್ಲಿ ನಸುಕಿನ 4.30ರಿಂದ 5.30ರವೆಗಿನ ಬ್ರಾಹ್ಮಿ ಮುಹೂರ್ತದಲ್ಲಿ ಧ್ಯಾನದಲ್ಲಿ ನಿರತರಾಗಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸುದ್ದಿ ಮಾಡುತ್ತಿದೆ. ಜೊತೆಗೆ ಮಾತೃಭೂಮಿಯ ಒಳಿತಿಗಾಗಿಯೂ ಪ್ರಾರ್ಥನೆ ಸಲ್ಲಿಸಿರುವುದಾಗಿಯೂ ತಿಳಿಸಿದ್ದಾರೆ.

ಬ್ರಾಹ್ಮಿ ಮುಹೂರ್ತ ಸಾಧುಗಳಿಗೆ ಮತ್ತು ಋಷಿಗಳಿಗೆ ಅತ್ಯಂತ ಪ್ರಮುಖವಾದುದು. ಬ್ರಾಹ್ಮಿ ಜಾವದಲ್ಲಿ ನಿದ್ರಿಸುವವರು ಪುಣ್ಯ ಗಳಿಸುವ ಅವಕಾಶದಿಂದ ವಂಚಿತರಾಗುತ್ತಾರೆ. ದೀಪಾವಳಿಯ ಹೊತ್ತಲ್ಲಿ ಮಹಾದೇವ ಕೇದಾರನಾಥ ದೇಗುಲದ ಬಳಿ ಕೌಪೀನಧಾರಿಯಾಗಿ ತಪಸ್ಸಿಗೆ ಕೂರುತ್ತಾನೆ.

ಋಷಿಗಳು ಈ ಸಮಯದಲ್ಲಿ ನಾಡಿ ಚಕ್ರಗಳನ್ನು ಸಕ್ರಿಯಗೊಳಿಸಲು ಧ್ಯಾನ, ಪ್ರಾಣಾಯಾಮಗಳಲ್ಲಿ ತೊಡಗಿಕೊಳ್ಳುತ್ತಾರೆ. ಹಿಮಪಾತ, ಚಳಿಗಳ ನಡುವೆ ಪ್ರತಿ ವರ್ಷದಂತೆ ಈ ವರ್ಷವೂ ತಾವು ಕೇದಾರನಾಥದಲ್ಲಿ ಧ್ಯಾನ ಮಾಡುತ್ತಿರುವಾಗಿ ತಿಳಿಸಿದ್ದಾರೆ. ಈ ವಿಡಿಯೋ ಫೇಸ್ಬುಕ್ನಲ್ಲಿ 23ಸಾವಿರಕ್ಕೂ ಹೆಚ್ಚು ವೀಕ್ಷಣೆ ಕಂಡಿದೆ.

ಬೆಳಗಾವಿಯ ಅಥಣಿಯಲ್ಲಿ ಜನಿಸಿದ ಅವರು ಚಿಕ್ಕ ವಯಸ್ಸಲ್ಲೇ ಸನ್ಯಾಸ ಸ್ವೀಕರಿಸಿ ಶ್ವಾಸ ಗುರುವೆಂದೇ ಖ್ಯಾತರಾಗಿದ್ದಾರೆ. ತಮ್ಮ ಶ್ವಾಸ ಯೋಗ ಫೌಂಡೇಶನ್ನಿನ ಮೂಲಕ ಪ್ರಾಣಾಯಾಮ, ಯೋಗಕ್ಕೆ ಸಂಬಧಿಸಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನವಾದಾಗ ಅವರ ಮನೆಗೆ ಭೇಟಿ ನೀಡಿದ ಕಾರಣ ವಚನಾನಂದ ಸ್ವಾಮೀಜಿ ಇತ್ತೀಚೆಗೆ ವಿವಾದಕ್ಕೀಡಾಗಿದ್ದರು.

Published On - 5:14 pm, Mon, 9 November 20

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು