AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಕುಂಠ ಏಕಾದಶಿ: ತಿರುಮಲದಲ್ಲಿ 10 ದಿನ ವೈಕುಂಠ ದ್ವಾರ ತೆರೆಯಲು ನಿರ್ಧಾರ

ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ತಿರುಮಲ ತಿರುಪತಿ ದೇಗುಲದ ವೈಕುಂಠ ದ್ವಾರವನ್ನು ಡಿ.25ರಿಂದ ಜನವರಿ 3ರವರೆಗೂ ಓಪನ್ ಮಾಡಲಾಗುತ್ತೆ ಎಂದು ಟಿಟಿಡಿ ಚೇರ್ಮನ್ ವೈ.ವಿ.ಸುಬ್ಬಾರೆಡ್ಡಿ ಮಾಹಿತಿ ನೀಡಿದ್ದಾರೆ.

ವೈಕುಂಠ ಏಕಾದಶಿ: ತಿರುಮಲದಲ್ಲಿ 10 ದಿನ ವೈಕುಂಠ ದ್ವಾರ ತೆರೆಯಲು ನಿರ್ಧಾರ
ಆಯೇಷಾ ಬಾನು
|

Updated on:Nov 29, 2020 | 7:56 AM

Share

ತಿರುಮಲ: ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ತಿರುಮಲದಲ್ಲಿ 10 ದಿನ ವೈಕುಂಠ ದ್ವಾರ ತೆರೆಯಲು ನಿರ್ಧರಿಸಲಾಗಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ತಿರುಮಲ ತಿರುಪತಿ ದೇಗುಲದ ವೈಕುಂಠ ದ್ವಾರ ಡಿಸೆಂಬರ್ 25ರಿಂದ ಜನವರಿ 3ರವರೆಗೂ ಓಪನ್ ಆಗಿರಲಿದೆ ಎಂದು ಟಿಟಿಡಿ ಚೇರ್ಮನ್ ವೈ.ವಿ.ಸುಬ್ಬಾರೆಡ್ಡಿ ಮಾಹಿತಿ ನೀಡಿದ್ದಾರೆ.

ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕನ ಆಲಯದಲ್ಲಿ ವೈಕುಂಠ ಏಕಾದಶಿಯಂದು ತಿಮ್ಮಪ್ಪನ ಸನ್ನಿಧಾನಕ್ಕೆ ಭಕ್ತಸಾಗರವೇ ಹರಿದು ಬರುತ್ತೆ. ವೈಕುಂಠ ದ್ವಾರದ ಮೂಲಕ ಬಾಲಾಜಿ ದರ್ಶನ ಮಾಡುವುದು ಪ್ರತಿಯೊಬ್ಬ ಭಕ್ತನ ಮಹದಾಸೆಯಾಗಿರುತ್ತೆ.

ಅಲ್ಲದೆ ಇನ್ನು ಮುಂದೆ ವೈಕುಂಠ ಏಕಾದಶಿಯಿಂದ 10 ದಿನಗಳ ಕಾಲ ವೈಕುಂಠ ದ್ವಾರ ತೆರೆಯುವ ಸಾಧ್ಯತೆ ಇದೆ. ಇದರಿಂದ ಉತ್ತರದ ಬಾಗಿಲ ಮೂಲಕ ದೇವರ ದರ್ಶನಕ್ಕೆ ಅವಕಾಶ ದೊರೆಯಲಿದೆ.

ಪ್ರತಿ ವರ್ಷ ಕೇವಲ ಎರಡು ದಿನಗಳು ಮಾತ್ರ ವೈಕುಂಠ ದ್ವಾರ ತೆರೆದು ಸ್ವಾಮಿಯ ದರ್ಶನ ಮಾಡಲು ಅವಕಾಶ ನೀಡಲಾಗುತ್ತಿತ್ತು. ಆದರೆ ಈ ಬಾರಿ ದರ್ಶನವನ್ನು 10ದಿನಗಳಿಗೆ ಏರಿಸಲಾಗಿದೆ.

ಇದನ್ನೂ ಓದಿ: ತಿರುಮಲದಲ್ಲಿ ವೈಕುಂಠ ದ್ವಾರದ ಮೂಲಕ ಸಿಗಲಿದೆ ‘ವೆಂಕಟೇಶ್ವರ’ನ ದರ್ಶನ

Published On - 7:48 am, Sun, 29 November 20

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ