AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ಕಾಲ್ತುಳಿತ ಪ್ರಕರಣ; ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್​ ಗವರ್ನರ್​

ಗೃಹ ಸಚಿವ ಅಮಿತ್​ ಶಾ ಸೇರಿ, ಹಲವು ಗಣ್ಯರು ಈ ದುರಂತದ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಕೇಂದ್ರ ಸಚಿವ ಜಿತೇಂದ್ರ ಸಿಂಗ್​ ಅವರು ಕತ್ರಾದಲ್ಲಿರುವ ನರೈನಾ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ಕಾಲ್ತುಳಿತ ಪ್ರಕರಣ; ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್​ ಗವರ್ನರ್​
ವೈಷ್ಣೋ ದೇವಿ ದೇಗುಲ ಆವರಣದಲ್ಲಿಂದು ಕಾಲ್ತುಳಿತ
TV9 Web
| Edited By: |

Updated on:Jan 01, 2022 | 3:32 PM

Share

ಇತಿಹಾಸ ಪ್ರಸಿದ್ಧ, ಜಮ್ಮು-ಕಾಶ್ಮೀರದ ವೈಷ್ಣೋದೇವಿ ದೇಗುಲ(Vaishno Devi Temple)ದಲ್ಲಿ ಇಂದು ಬೆಳಗ್ಗೆ ಕಾಲ್ತುಳಿತ ಉಂಟಾಗಿ 12 ಭಕ್ತರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ದೇಗುಲದ ಗರ್ಭಗುಡಿಯ ಹೊರಭಾಗದಲ್ಲಿ ಈ ಘಟನೆ ನಡೆದಿದ್ದು, ಸದ್ಯ ಪೊಲೀಸರು, ಇತರ ರಕ್ಷಣಾ ಪಡೆಗಳು ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಲ್ಲಿನ ಪರಿಸ್ಥಿತಿ ನಿಭಾಯಿಸುತ್ತಿದ್ದಾರೆ. ಇಂದು ಬೆಳಗ್ಗೆ ಸಾವಿರಾರು ಭಕ್ತರು ದೇಗುಲದಲ್ಲಿ ನೆರೆದಿದ್ದರು. ದೇವರ ದರ್ಶನಕ್ಕಾಗಿ ನಾ ಮುಂದು-ತಾ ಮುಂದು ಎಂದು ಮುನ್ನುಗ್ಗಲು ಯತ್ನಿಸಿದಾಗಿ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ. ಅದಕ್ಕೆ ಸಂಬಂಧಪಟ್ಟ ಎರಡು ವಿಡಿಯೋಗಳೂ ವೈರಲ್ ಆಗುತ್ತಿವೆ. 

ಉನ್ನತ ಮಟ್ಟದ ತನಿಖೆಗೆ ಆದೇಶ ವೈಷ್ಣೋದೇವಿ ದೇಗುಲದಲ್ಲಿ ನಡೆದ ಕಾಲ್ತುಳಿತ ಪ್ರಕರಣವನ್ನು ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್​ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಇದರ ತನಿಖೆ ಮಾಡಲು ಜಮ್ಮುವಿನ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ವಿಚಾರಣಾ ಸಮಿತಿ ರಚಿಸಲಾಗಿದ್ದು, ಎಡಿಜಿಪಿ, ಜಮ್ಮು ಮತ್ತು ವಿಭಾಗೀಯ ಆಯುಕ್ತರು ಇರಲಿದ್ದಾರೆ. ಘಟನೆ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಲೆಫ್ಟಿನಂಟ್ ಗವರ್ನರ್​, ವೈಷ್ಣೋದೇವಿ ದೇಗುಲದಲ್ಲಿ ನಡೆದ ದುರಂತದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಳಿ ಮಾತನಾಡಿದ್ದೇನೆ. ನಮ್ಮ ಆಡಳಿತದಿಂದ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ.ನೀಡಲಾಗುತ್ತದೆ. ಹಾಗೇ, ಗಾಯಗೊಂಡವರ ಚಿಕಿತ್ಸೆಗೆ 2 ಲಕ್ಷ ರೂ.ಕೊಡಲಾಗುತ್ತದೆ ಎಂದು ತಿಳಿಸಿದ್ದಾರೆ.

ರಾಷ್ಟ್ರಪತಿ ರಾಮನಾಥ ಕೋವಿಂದ್​, ಗೃಹ ಸಚಿವ ಅಮಿತ್​ ಶಾ ಸೇರಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿ ಹಲವು ಗಣ್ಯರು ಈ ದುರಂತದ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಕೇಂದ್ರ ಸಚಿವ ಜಿತೇಂದ್ರ ಸಿಂಗ್​ ಅವರು ಕತ್ರಾದಲ್ಲಿರುವ ನರೈನಾ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ವೈಷ್ಣೋದೇವಿ ದೇಗುಲ ದುರಂತದಲ್ಲಿ ಗಾಯಗೊಂಡವರು ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರನ್ನೆಲ್ಲ ಮಾತನಾಡಿಸಿದ್ದಾರೆ. ಈ ಆಸ್ಪತ್ರೆಗೆ ದಾಖಲಾಗಿರುವವರ ಆರೋಗ್ಯ ಸ್ಥಿರವಾಗಿದೆ. ಆರು ಮಂದಿ ಐಸಿಯುನಲ್ಲಿ ದಾಖಲಾಗಿದ್ದಾರೆ. ಇಬ್ಬರು ಈಗಾಗಲೇ ಡಿಸ್​ಚಾರ್ಜ್ ಆಗಿದ್ದಾರೆ. 4 ಮಂದಿ ಜನರಲ್​ ವಾರ್ಡ್​​ನಲ್ಲಿ ಇದ್ದಾರೆ. ಅವರು ನಾಳೆ-ನಾಡಿದ್ದು ಅಷ್ಟರಲ್ಲಿ ಡಿಸ್​ಚಾರ್ಜ್​ ಆಗಬಹುದು ಎಂದು ತಿಳಿಸಿದ್ದಾರೆ.  ಹಾಗೇ, ಮುಂದಿನ ದಿನಗಳಲ್ಲಿ ಇಂಥ ಅವಘಡಗಳು ಆಗದಂತೆ ತಡೆಯಲು, ಕೆಲವು ತಾಂತ್ರಿಕ ಕ್ರಮಗಳನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದೂ ಹೇಳಿದ್ದಾರೆ. ಹಾಗೇ, ಮೃತಪಟ್ಟವರು ಮತ್ತು ಗಾಯಗೊಂಡವರ ಹೆಸರಿನ ಪಟ್ಟಿಯನ್ನೂ ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Vaishno Devi Temple Stampede: ವೈಷ್ಣೋದೇವಿ ಮಂದಿರದಲ್ಲಿ ಕಾಲ್ತುಳಿತ, 12 ಭಕ್ತರ ಸಾವು

Published On - 3:22 pm, Sat, 1 January 22

ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್?
ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್?
Video: ಕಬ್ಬು ತುಂಬಿದ್ದ ಟ್ರಕ್ ಶಾಲಾ ವಾಹನದ ಮೇಲೆ ಪಲ್ಟಿ
Video: ಕಬ್ಬು ತುಂಬಿದ್ದ ಟ್ರಕ್ ಶಾಲಾ ವಾಹನದ ಮೇಲೆ ಪಲ್ಟಿ