Sign In

By signing in or creating an account, you agree with Associated Broadcasting Company's Terms & Conditions and Privacy Policy.

Vaishno Devi Yatra: ವೈಷ್ಣೋದೇವಿ ಯಾತ್ರೆಗೆ ತೆರಳುವವರಿಗೆ ಗುಡ್ ನ್ಯೂಸ್​; ಈ ಹೊಸ ಸೌಲಭ್ಯ ಒದಗಿಸಲು ಸರ್ಕಾರ ಅನುಮತಿ

ಕತ್ರಾದಿಂದ ಅಧಕುವಾರಿಯವರೆಗಿನ ರೋಪ್‌ವೇ ಉದ್ದ 1,281 ಮೀಟರ್. ರೋಪ್ ವೇ ಆರಂಭವಾದ ನಂತರ ಪ್ರಯಾಣಿಕರಿಗೆ ನೆಮ್ಮದಿ ಸಿಗಲಿದ್ದು, ಯಾತ್ರಾರ್ಥಿಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

Vaishno Devi Yatra: ವೈಷ್ಣೋದೇವಿ ಯಾತ್ರೆಗೆ ತೆರಳುವವರಿಗೆ ಗುಡ್ ನ್ಯೂಸ್​; ಈ ಹೊಸ ಸೌಲಭ್ಯ ಒದಗಿಸಲು ಸರ್ಕಾರ ಅನುಮತಿ
ವೈಷ್ಣೋದೇವಿ ಯಾತ್ರೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Apr 13, 2022 | 9:30 PM

ವೈಷ್ಣೋದೇವಿ ಯಾತ್ರೆಗೆ ತೆರಳುವ ಭಕ್ತರಿಗೆ ಒಂದು ಸಿಹಿ ಸುದ್ದಿಯಿದೆ. ವೈಷ್ಣೋದೇವಿ ದರ್ಶನಕ್ಕೆ (Vaishno Devi Yatra)  ಹೋಗುವವರಿಗೆ ಸರ್ಕಾರ ಹೊಸ ಸೌಲಭ್ಯವನ್ನು ಕಲ್ಪಿಸಿರುವುದರಿಂದ ಕೋಟ್ಯಂತರ ಭಕ್ತರಿಗೆ ಮಾತಾ ವೈಷ್ಣೋದೇವಿಯ ಯಾತ್ರೆ ಸುಲಭವಾಗಲಿದೆ. ಕತ್ರಾದಿಂದ ಭವನಕ್ಕೆ ಪ್ರಯಾಣವನ್ನು ಸುಲಭಗೊಳಿಸಲು ರೋಪ್‌ವೇ (Ropeway) ಸೌಲಭ್ಯವನ್ನು ಪ್ರಾರಂಭಿಸಲು ಸಿದ್ಧತೆಗಳು ನಡೆಯುತ್ತಿವೆ. ಈ ರೋಪ್‌ವೇ ಕತ್ರಾ ಮತ್ತು ಅಧಕುವಾರಿ ನಡುವೆ ಪ್ರಾರಂಭವಾಗುತ್ತದೆ. ರೋಪ್ ವೇ ಆರಂಭವಾದ ನಂತರ ಪ್ರಯಾಣಿಕರಿಗೆ ನೆಮ್ಮದಿ ಸಿಗಲಿದ್ದು, ಯಾತ್ರಾರ್ಥಿಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದ ಸ್ಥಳೀಯ ಉದ್ಯಮಿಗಳಿಗೆ ನೇರ ಲಾಭವಾಗಲಿದೆ.

ಕತ್ರಾದಿಂದ ಅಧಕುವಾರಿಯವರೆಗಿನ ರೋಪ್‌ವೇ ಉದ್ದ 1,281 ಮೀಟರ್. ಶ್ರೀ ಮಾತಾ ವೈಷ್ಣೋದೇವಿ ದೇಗುಲ ಮಂಡಳಿಯ ಅಧ್ಯಕ್ಷ ಮತ್ತು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಲೆಫ್ಟಿನೆಂಟ್ ಗವರ್ನರ್ ಅಧ್ಯಕ್ಷತೆಯಲ್ಲಿ ನೂತನವಾಗಿ ನೇಮಕಗೊಂಡ ದೇಗುಲ ಮಂಡಳಿ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಯಾತ್ರಾರ್ಥಿಗಳ ಪ್ರಯಾಣವನ್ನು ತೊಂದರೆ ರಹಿತವಾಗಿಸಲು ಇನ್ನೂ ಹಲವು ಸೌಲಭ್ಯಗಳನ್ನು ಆರಂಭಿಸಲು ಒಪ್ಪಿಗೆ ನೀಡಲಾಯಿತು. ಕಟ್ಟಡದ ಪ್ರದೇಶದಲ್ಲಿ ಜನದಟ್ಟಣೆ ತಪ್ಪಿಸಲು ಸ್ಕೈವಾಕ್ ಕಾಮಗಾರಿ ಮಾಡಲಾಗುತ್ತಿದೆ.

ಹಾಗೇ, ದುರ್ಗಾ ಭವನ ಮತ್ತು ಆರ್‌ಎಫ್‌ಐಡಿ ಟ್ಯಾಗ್ ಸೇವೆಯನ್ನು ಕೂಡ ಶೀಘ್ರದಲ್ಲೇ ಆರಂಭಿಸಲಾಗುವುದು. ಇದಲ್ಲದೆ, ಕತ್ರಾ ಮತ್ತು ಸುತ್ತಮುತ್ತ ಆಧ್ಯಾತ್ಮಿಕ ಥೀಮ್ ಪಾರ್ಕ್ ಅನ್ನು ಅಭಿವೃದ್ಧಿಪಡಿಸಲಾಗುವುದು. ಕತ್ರಾ ಮತ್ತು ಅಧಕುವಾರಿಯಲ್ಲಿ ಹೆಚ್ಚಿನ ಸಿಬ್ಬಂದಿ ವಸತಿ ನಿರ್ಮಾಣಕ್ಕೂ ಅನುಮೋದನೆ ನೀಡಲಾಯಿತು.

ಇದನ್ನೂ ಓದಿ: Vaishno Devi Yatra: ವೈಷ್ಣೋದೇವಿ ಯಾತ್ರೆ ಕೈಗೊಳ್ಳುವವರು ಈ ವೆಬ್​ಸೈಟ್​ನಲ್ಲೇ ಬುಕಿಂಗ್ ಮಾಡುವುದು ಕಡ್ಡಾಯ

Vaishno Devi Temple Stampede: ವೈಷ್ಣೋದೇವಿ ಮಂದಿರದಲ್ಲಿ ಕಾಲ್ತುಳಿತ, 12 ಭಕ್ತರ ಸಾವು

Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ