ಮಳೆ ಮತ್ತು ಭೂಕುಸಿತದಿಂದ ಸ್ಥಗಿತಗೊಂಡಿದ್ದ ವೈಷ್ಣೋದೇವಿ ಯಾತ್ರೆ ಸೆ. 14ರಿಂದ ಪುನರಾರಂಭ
ಆಗಸ್ಟ್ 26ರಂದು ಭಾರೀ ಮಳೆಯಿಂದಾಗಿ ತ್ರಿಕೂಟ ಬೆಟ್ಟಗಳಲ್ಲಿ ದೊಡ್ಡ ಭೂಕುಸಿತ ಸಂಭವಿಸಿತ್ತು. ಭಾರೀ ಮಳೆ, ಪ್ರವಾಹದಿಂದ ಈ ಪ್ರದೇಶದಲ್ಲಿ ಸಾವು-ನೋವುಗಳು ಸಂಭವಿಸಿದ್ದವು. ಈ ದುರಂತ ಘಟನೆಯಲ್ಲಿ 34 ಯಾತ್ರಿಕರು ಪ್ರಾಣ ಕಳೆದುಕೊಂಡಿದ್ದರು, ಇನ್ನೂ ಅನೇಕರು ಗಾಯಗೊಂದಿದ್ದರು. ಈ ಪರಿಸ್ಥಿತಿಯ ತೀವ್ರತೆಯನ್ನು ಪರಿಗಣಿಸಿ, ಆಡಳಿತವು ತಕ್ಷಣವೇ ವೈಷ್ಣೋದೇವಿ ಯಾತ್ರೆಯನ್ನು ಸ್ಥಗಿತಗೊಳಿಸಿತ್ತು.

ಕತ್ರಾ, ಸೆಪ್ಟೆಂಬರ್ 12: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಸ್ಥಗಿತಗೊಳಿಸಲಾಗಿದ್ದ ವೈಷ್ಣೋದೇವಿ ಯಾತ್ರೆ (Vaishno Devi Yatra) ಸೆಪ್ಟೆಂಬರ್ 14ರಿಂದ ಪುನರಾರಂಭಗೊಳ್ಳಲಿದೆ. ಭೂಕುಸಿತ ಮತ್ತು ಮೇಘಸ್ಫೋಟಗಳು ಸೇರಿದಂತೆ ತೀವ್ರ ಹವಾಮಾನ ಪರಿಸ್ಥಿತಿಗಳ ನಂತರ ರಿಯಾಸಿ ಜಿಲ್ಲೆಯ ವೈಷ್ಣೋದೇವಿ ದೇವಾಲಯಕ್ಕೆ ಕಳೆದ 19 ದಿನಗಳಿಂದ ಯಾತ್ರೆ ಸ್ಥಗಿತಗೊಂಡಿತ್ತು. ಆಗಸ್ಟ್ 26ರಂದು ಭಾರೀ ಮಳೆಯಿಂದಾಗಿ ತ್ರಿಕೂಟ ಬೆಟ್ಟಗಳಲ್ಲಿ ದೊಡ್ಡ ಭೂಕುಸಿತ ಸಂಭವಿಸಿತ್ತು.
ಈ ದುರಂತ ಘಟನೆಯಲ್ಲಿ 34 ಯಾತ್ರಿಕರು ಪ್ರಾಣ ಕಳೆದುಕೊಂಡರು ಮತ್ತು ಅನೇಕರು ಗಾಯಗೊಂಡರು. ಪರಿಸ್ಥಿತಿಯ ತೀವ್ರತೆಯನ್ನು ಪರಿಗಣಿಸಿ ಸರ್ಕಾರ ತಕ್ಷಣವೇ ವೈಷ್ಣೋ ದೇವಿ ತೀರ್ಥಯಾತ್ರೆಯನ್ನು ಸ್ಥಗಿತಗೊಳಿಸಿತು. ಅಂದಿನಿಂದ ಈ ಮಾರ್ಗವನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ಅದರ ಪರಿಣಾಮವಾಗಿ ಸಾವಿರಾರು ಭಕ್ತರು ಕತ್ರಾದಲ್ಲಿ ಸಿಲುಕಿಕೊಂಡಿದ್ದಾರೆ ಮತ್ತು ತೀರ್ಥಯಾತ್ರೆ ಪುನರಾರಂಭಗೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ.
ಇದನ್ನೂ ಓದಿ: Video: ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ 20 ಅಡಿ ಆಳದ ಚರಂಡಿಗೆ ಬಿದ್ದು, ಓರ್ವ ಸಾವು
मां वैष्णो देवी के अद्भुत अलौकिक दर्शन Divya Darshan of Maa Vaishno Devi pic.twitter.com/ILygcXL8gV
— Jassi (@desh_bhakt123) September 12, 2025
ಇದೀಗ ಅನುಕೂಲಕರ ಹವಾಮಾನ ಪರಿಸ್ಥಿತಿಗಳನ್ನು ಅವಲಂಬಿಸಿ ಈ ಯಾತ್ರೆಯನ್ನು ಪುನರಾರಂಭಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ವೈಷ್ಣೋ ದೇವಿ ದೇಗುಲ ಮಂಡಳಿ ಅದಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡುತ್ತದೆ. ಯಾತ್ರಿಕರ ಅನುಕೂಲಕ್ಕಾಗಿ ದೇವಾಲಯ ಮಂಡಳಿಯು ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ. ಯಾತ್ರೆಗೆ ಸಂಬಂಧಿಸಿದ ಬುಕಿಂಗ್ಗಳಿಗಾಗಿ ನೀವು ಅಧಿಕೃತ ವೆಬ್ಸೈಟ್ http://maavaishnodevi.orgಗೆ ಭೇಟಿ ನೀಡಬಹುದು.
ಇದನ್ನೂ ಓದಿ: Vaishno Devi Shrine: ಜಮ್ಮು ಕಾಶ್ಮೀರದ ವೈಷ್ಣೋದೇವಿ ದೇಗುಲದ ಬಳಿ ಭೂಕುಸಿತ; ಇಬ್ಬರು ಮಹಿಳಾ ಯಾತ್ರಾರ್ಥಿಗಳು ಸಾವು
ಇತ್ತೀಚಿನ ದಿನಗಳಲ್ಲಿ ಜಮ್ಮು ಪ್ರದೇಶದ ಹವಾಮಾನ ಬಹಳ ಸುಧಾರಿಸಿದೆ. ವೈಷ್ಣೋದೇವಿ ದೇವಾಲಯಕ್ಕೆ ಹೋಗುವ ಮಾರ್ಗದ ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ವೈಷ್ಣೋ ದೇವಿ ದೇವಾಲಯವು ಭಾರತದ ಅತ್ಯಂತ ಪವಿತ್ರ ಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ. ತ್ರಿಕೂಟ ಬೆಟ್ಟಗಳಲ್ಲಿ ನೆಲೆಗೊಂಡಿರುವ ಈ ದೇವಾಲಯವು ದುರ್ಗಾ ದೇವಿಯ ಅವತಾರವೆಂದು ಪರಿಗಣಿಸಲ್ಪಟ್ಟ ಮಾತಾ ವೈಷ್ಣೋ ದೇವಿಗೆ ಸಮರ್ಪಿತವಾಗಿದೆ. ಪ್ರತಿ ವರ್ಷ ಲಕ್ಷಾಂತರ ಭಕ್ತರು ದೇವಿಯ ಆಶೀರ್ವಾದ ಪಡೆಯಲು ಈ ಪವಿತ್ರ ಗುಹಾ ದೇವಾಲಯಕ್ಕೆ ಭೇಟಿ ನೀಡುತ್ತಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




