AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯನಾಡ್​​ನಲ್ಲಿ ರಾಹುಲ್ ಕಚೇರಿ ಮೇಲೆ ಎಸ್ಎಫ್ಐ ದಾಂಧಲೆ ಪ್ರಕರಣ: ಮಹಾತ್ಮಾ ಗಾಂಧಿ ಫೋಟೊ ಹಾಳುಗೆಡವಿದ 4 ಕಾಂಗ್ರೆಸ್ ಕಾರ್ಯಕರ್ತರ ಬಂಧನ

ವಯನಾಡಿನ ಕಲ್ಪೆಟ್ಟಾ ನಗರದಲ್ಲಿರುವ ರಾಹುಲ್ ಗಾಂಧಿಯವರ ಕಚೇರಿಯ ಮೇಲೆ ಜೂನ್ 24 ರಂದು ಎಸ್‌ಎಫ್‌ಐ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ವಯನಾಡ್​​ನಲ್ಲಿ ರಾಹುಲ್ ಕಚೇರಿ ಮೇಲೆ ಎಸ್ಎಫ್ಐ ದಾಂಧಲೆ ಪ್ರಕರಣ: ಮಹಾತ್ಮಾ ಗಾಂಧಿ ಫೋಟೊ ಹಾಳುಗೆಡವಿದ 4 ಕಾಂಗ್ರೆಸ್ ಕಾರ್ಯಕರ್ತರ ಬಂಧನ
ಕಾಂಗ್ರೆಸ್ ಪಕ್ಷ
TV9 Web
| Edited By: |

Updated on:Aug 19, 2022 | 8:37 PM

Share

ತಿರುವನಂತಪುರಂ: ಜೂನ್‌ನಲ್ಲಿ ಕಾಂಗ್ರೆಸ್ ನಾಯಕರ ಕಚೇರಿಯಲ್ಲಿ ಮಹಾತ್ಮ ಗಾಂಧಿಯವರ ಫೋಟೊಗೆ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕೇರಳದ ವಯನಾಡಿನಲ್ಲಿ ರಾಹುಲ್ ಗಾಂಧಿ (Rahul Gandhi) ಅವರ ಕಚೇರಿ ಕಾರ್ಯದರ್ಶಿ ಸೇರಿದಂತೆ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರನ್ನು ಶುಕ್ರವಾರ ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಕಾಂಗ್ರೆಸ್ ಸಂಸದರ ಕಚೇರಿಯನ್ನು ಎಸ್‌ಎಫ್‌ಐ (SFI) ಕಾರ್ಯಕರ್ತರು ಧ್ವಂಸಗೊಳಿಸಿದಾಗ ಗಾಂಧೀಜಿ ಫೋಟೊ ಯಥಾಸ್ಥಿತಿಯಲ್ಲಿತ್ತು.ಆದರೆ ವಿದ್ಯಾರ್ಥಿಗಳ ವಿರುದ್ದ ದೂರು ನೀಡುವುದಕ್ಕಾಗಿ ಕಾಂಗ್ರೆಸ್ಸಿಗರೇ ಫೋಟೊ ಹಾಳುಗೆಡವಿದ್ದಾರೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ರಾಜ್ಯ ವಿಧಾನಸಭೆಯಲ್ಲಿ ಹೇಳಿದ್ದರು. ಇದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದರ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಎಸ್‌ಎಫ್‌ಐ ದಾಳಿಯ ಬಗ್ಗೆ ದೂರು ನೀಡಿದ ಪಕ್ಷದ ಕಾರ್ಯಕರ್ತರನ್ನು ಆಡಳಿತಾರೂಢ ಸಿಪಿಐಎಂನ ನಿದರ್ಶನದಲ್ಲಿ ಪೊಲೀಸರು ಉದ್ದೇಶಪೂರ್ವಕವಾಗಿ ಅಪರಾಧಿಗಳಾಗಿ ಮಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿದ್ದಾರೆ. ಸಂಸದರ ಕಚೇರಿಯಲ್ಲಿದ್ದ ನಾಲ್ವರು ಸಿಬ್ಬಂದಿಯನ್ನು ಬಂಧಿಸಲಾಗಿದೆ. ದೂರುದಾರರು ಇದ್ದಕ್ಕಿದ್ದಂತೆ ಅಪರಾಧಿಗಳಾಗಿ ಮಾರ್ಪಟ್ಟಿದ್ದಾರೆ. ಎಸ್‌ಎಫ್‌ಐ ಕಾರ್ಯಕರ್ತರು ನಡೆಸುತ್ತಿರುವ ಹಾನಿಯನ್ನು ಮಿತಿಗೊಳಿಸುವ ಕ್ರಮದ ಹಿಂದೆ ಸಿಎಂ ಕಚೇರಿ ಇದೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕೆ ಸುಧಾಕರನ್ ಆರೋಪಿಸಿದ್ದಾರೆ.

ಆರೋಪವನ್ನು ತಳ್ಳಿಹಾಕಿದ ಪೊಲೀಸರು, ರಾಹುಲ್ ಗಾಂಧಿ ಅವರ ಆಪ್ತ ಸಹಾಯಕ ಕೆ ಆರ್ ರತೀಶ್ ಸೇರಿದಂತೆ ನಾಲ್ವರು ಕಾರ್ಯಕರ್ತರನ್ನು ತಮ್ಮ ವಿಚಾರಣೆಯ ಆಧಾರದ ಮೇಲೆ ಬಂಧಿಸಲಾಗಿದೆ ಎಂದು ಹೇಳಿದರು. ಸಿಪಿಐ(ಎಂ) ವಯನಾಡ್ ಜಿಲ್ಲಾ ಕಾರ್ಯದರ್ಶಿ ಪಿ.ಗಗಾರಿನ್ ಅವರು ತಮ್ಮ ತನಿಖೆಯ ಆಧಾರದ ಮೇಲೆ ಪೊಲೀಸ್ ಕ್ರಮ ಕೈಗೊಳ್ಳಲಾಗಿದೆ ಮತ್ತು ಇದರಲ್ಲಿ ಪಕ್ಷದ ಪಾತ್ರವಿಲ್ಲ ಎಂದು ಹೇಳಿದರು.

ವಯನಾಡಿನ ಕಲ್ಪೆಟ್ಟಾ ನಗರದಲ್ಲಿರುವ ರಾಹುಲ್ ಗಾಂಧಿಯವರ ಕಚೇರಿಯ ಮೇಲೆ ಜೂನ್ 24 ರಂದು ಎಸ್‌ಎಫ್‌ಐ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ 26 ಎಸ್‌ಎಫ್‌ಐ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ದಾಂಧಲೆ ನಡೆಸಿದವರು ಮಹಾತ್ಮ ಗಾಂಧಿಯವರ ಫೋಟೋಗಳನ್ನು ಕೂಡಾ ಬಿಟ್ಟಿಲ್ಲ ಎಂದು ಆರೋಪಿಸಿದ್ದರು.

ಆದರೆ ಸಿಪಿಐ(ಎಂ) ಮುಖಂಡರು ಈ ಆರೋಪವನ್ನು ತಳ್ಳಿಹಾಕಿದರು, ಎಸ್‌ಎಫ್‌ಐ ಕಾರ್ಯಕರ್ತರು ಸ್ಥಳದಿಂದ ತೆರಳಿದಾಗ ಮಹಾತ್ಮ ಗಾಂಧಿಯವರ ಫೋಟೋ ಸುರಕ್ಷಿತವಾಗಿತ್ತು ಎಂದು ಹೇಳಿದರು. ಜುಲೈನಲ್ಲಿ ವಿಧಾನಸಭೆಯಲ್ಲಿ ಪಿಣರಾಯಿ ವಿಜಯನ್ ಅವರು ಇದೇ ವಿಷಯವನ್ನು ಹೇಳಿದ್ದರು. “ಹಲವು ಚಾನೆಲ್‌ಗಳು ದಾಳಿಯ ನಂತರ ಕಚೇರಿಯ ಚಿತ್ರವನ್ನು ಪ್ರಸಾರ ಮಾಡಿದವು ಮತ್ತು ಆ ದೃಶ್ಯಗಳಲ್ಲಿ ಗಾಂಧಿಯವರ ಫೋಟೋ ಹಾಗೇ ಇತ್ತು. ಕಾಂಗ್ರೆಸ್ಸಿಗರು ಕಚೇರಿಗೆ ನುಗ್ಗಿದ ಬಳಿಕ ಈ ಘಟನೆ ನಡೆದಿದೆ. ಗೋಡ್ಸೆ ಅಕ್ಷರಶಃ ಮಾಡಿದ್ದನ್ನು ಕಾಂಗ್ರೆಸ್ ಸಾಂಕೇತಿಕವಾಗಿ ಮಾಡಿದೆ’ ಎಂದಿದ್ದರು.

Published On - 8:34 pm, Fri, 19 August 22

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?