AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat Express: ತಮಿಳುನಾಡಿನಲ್ಲಿ ಚೆನ್ನೈ-ಮೈಸೂರು ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ

Tamil Nadu: ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದ ಪಕ್ಕದಲ್ಲಿರುವ ಬೇಸಿನ್ ಬ್ರಿಡ್ಜ್ ನಿಲ್ದಾಣದ ಬಳಿ ಮೈಸೂರು-ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆಸಿದ್ದಾರೆ.

Vande Bharat Express: ತಮಿಳುನಾಡಿನಲ್ಲಿ ಚೆನ್ನೈ-ಮೈಸೂರು ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ
ಮೈಸೂರು-ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ
ಅಕ್ಷಯ್​ ಪಲ್ಲಮಜಲು​​
|

Updated on: Jul 14, 2023 | 1:59 PM

Share

ಚೆನ್ನೈ: ಇತ್ತೀಚೆಗಿನ ದಿನಗಳಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲಿನ ಮೇಲೆ ಕಲ್ಲು ತೂರಾಟ ಮಾಡುವ ಘಟನೆಗಳು ಹೆಚ್ಚಾಗಿದೆ, ಈ ರೈಲು ಶುರುವಾಗಿನಿಂದ ಅನೇಕ ಕಡೆ ಕಲ್ಲು ತೂರಾಟ ನಡೆಯುತ್ತಲೇ ಇದೆ. ನಮ್ಮ ಆಸ್ತಿಗೆ ನಾವೇ ಹಾನಿ ಮಾಡುವುದು ಸರಿಯಲ್ಲ. ಆ ಮನಸ್ಥಿತಿಯ ಜನರನ್ನು ಮೊದಲು ಮಟ್ಟ ಹಾಕಬೇಕು ಎಂದು ಪ್ರಯಾಣಿಕರೊಬ್ಬರು ಹೇಳಿರುವ ವೀಡಿಯೊ ಎಲ್ಲ ಕಡೆ ಸದ್ದು ಮಾಡಿತ್ತು. ಇದೀಗ ಮತ್ತೊಂದು ಘಟನೆ ಇಂದು (ಜುಲೈ.14) ತಮಿಳುನಾಡಿನಲ್ಲಿ ನಡೆದಿದೆ. ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದ ಪಕ್ಕದಲ್ಲಿರುವ ಬೇಸಿನ್ ಬ್ರಿಡ್ಜ್ ನಿಲ್ದಾಣದ ಬಳಿ ಮೈಸೂರು-ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆಸಿದ್ದರಿಂದ ರೈಲಿನ ಎರಡು ಗಾಜುಗಳು ಪುಡಿ ಪುಡಿಯಾಗಿದೆ. ಎಕ್ಸ್‌ಪ್ರೆಸ್ ರೈಲು ಮೈಸೂರಿನಿಂದ ಚೆನ್ನೈಗೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ.

2023 ಫೆಬ್ರವರಿಯಲ್ಲಿ ಬೆಂಗಳೂರಿನ ಕಂಟೋನ್ಮೆಂಟ್ ಸ್ಟೇಷನ್ ಬಳಿ ವಂದೇ ಭಾರತ್ ರೈಲಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಇದು ಕರ್ನಾಟಕದಲ್ಲಿ ನಡೆದ ಮೊದಲ ಕಲ್ಲು ತೂರಾಟ. ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್​​ನ್ನು ಕಳೆದ ವರ್ಷ ನವೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಹಸಿರು ನಿಶಾನೆ ತೋರಿಸಿದರು. ಇದು ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲು ಎಂಬ ಪ್ರಶಂಸೆಯನ್ನು ಪಡೆದಿತ್ತು.

ಇದನ್ನೂ ಓದಿ:ಚಿಕ್ಕಮಗಳೂರಿನಲ್ಲೂ ವಂದೇ ಭಾರತ್ ರೈಲಿಗೆ ಮತ್ತೆ ಕಲ್ಲೇಟು: ಸ್ಥಳಕ್ಕೆ ಪೊಲೀಸರ ಭೇಟಿ

ರಾಮನಗರದಲ್ಲಿ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ

ಇತ್ತಿಚೇಗಷ್ಟೇ ರಾಮನಗರದಲ್ಲಿ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ​​ನಡೆದಿತ್ತು, ಈ ಸಮಯದಲ್ಲಿ ರೈಲಿನಲ್ಲಿದ್ದ ಪ್ಯಾಸೆಂಜರ್ ಮೇಲೆ ಕಲ್ಲುಗಳು ಬಿದಿತ್ತು. ಈ ಘಟನೆಯಿಂದ ಸುಮಿತ್ರಾ ಎಂಬವರ ಕತ್ತಿನ ಭಾಗಕ್ಕೆ ಗಾಯವಾಗಿದೆ. ಹೀಗೆ ಅನೇಕ ಕಡೆಗಳಲ್ಲಿ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿನ ಮೇಲೆ ಕಲ್ಲು ಎಸೆದಿರುವ ಘಟನೆಗಳು ನಡೆಯುತ್ತಲೇ ಇದೆ. ಈ ಬಗ್ಗೆ ಅಧಿಕಾರಿಗಳು ದೂರು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು