Vande Bharat Express: ಕೇರಳದ ವಂದೇ ಭಾರತ್ ಎಕ್ಸ್‌ಪ್ರೆಸ್ ಕಾಸರಗೋಡಿಗೂ ವಿಸ್ತರಣೆ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಣೆ

|

Updated on: Apr 18, 2023 | 8:12 PM

ಎರಡು ಹಂತಗಳಲ್ಲಿ ಹಳಿಗಳ ನವೀಕರಣ ನಡೆಯಲಿದ್ದು, ಒಂದೂವರೆ ವರ್ಷದೊಳಗೆ ಮೊದಲ ಹಂತ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಮೊದಲ ಹಂತದ ನಂತರ, ರೈಲು ಗಂಟೆಗೆ 110 ಕಿಮೀ ವೇಗವನ್ನು ಕ್ರಮಿಸುತ್ತದೆ.

Vande Bharat Express: ಕೇರಳದ ವಂದೇ ಭಾರತ್ ಎಕ್ಸ್‌ಪ್ರೆಸ್ ಕಾಸರಗೋಡಿಗೂ ವಿಸ್ತರಣೆ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಣೆ
ವಂದೇ ಭಾರತ್
Follow us on

ದೆಹಲಿ: ಕೇರಳದ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ಅನ್ನು ಈಗ ಕಾಸರಗೋಡಿಗೆ (Kasaragod) ವಿಸ್ತರಿಸಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಮಂಗಳವಾರ ಘೋಷಿಸಿದ್ದಾರೆ. ಆರಂಭದಲ್ಲಿ ಈ ಸೇವೆ ಕಣ್ಣೂರಿನಲ್ಲಿ ಕೊನೆಗೊಳಿಸಲು ನಿರ್ಧರಿಸಲಾಗಿತ್ತು. ಕೇಂದ್ರ ಸಚಿವ ವಿ ಮುರಳೀಧರನ್ ಅವರ ಮನವಿಯ ಮೇರೆಗೆ ಸೇವೆಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಸಚಿವರು ಹೇಳಿರುವುದಾಗಿ ಮಾತೃಭೂಮಿ ಪತ್ರಿಕೆ ವರದಿ ಮಾಡಿದೆ. ಎರಡು ಹಂತಗಳಲ್ಲಿ ಹಳಿಗಳ ನವೀಕರಣ ನಡೆಯಲಿದ್ದು, ಒಂದೂವರೆ ವರ್ಷದೊಳಗೆ ಮೊದಲ ಹಂತ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಮೊದಲ ಹಂತದ ನಂತರ, ರೈಲು ಗಂಟೆಗೆ 110 ಕಿಮೀ ವೇಗವನ್ನು ಕ್ರಮಿಸುತ್ತದೆ. ತಿರುವುಗಳನ್ನು ನೇರಗೊಳಿಸುವುದು ಮತ್ತು ಇತರ ಅಗತ್ಯ ಹೊಂದಾಣಿಕೆಗಳನ್ನು ಒಳಗೊಂಡಿರುವ ಎರಡನೇ ಹಂತವು ಪೂರ್ಣಗೊಳ್ಳಲು ಎರಡರಿಂದ ಮೂರೂವರೆ ವರ್ಷಗಳನ್ನು ತೆಗೆದುಕೊಳ್ಳುತ್ತದೆ. ಇದರ ನಂತರ, ರೈಲಿನ ವೇಗವನ್ನು ಗಂಟೆಗೆ 130 ಕಿಮೀಗೆ ಹೆಚ್ಚಿಸಲಾಗುತ್ತದೆ. ತಿರುವುಗಳಿರುವ ರೈಲು ಮಾರ್ಗಗಳವನ್ನು ನೇರಗೊಳಿಸಲು ಭೂಸ್ವಾಧೀನ ಅಗತ್ಯವಿದೆ ಎಂದು ಸಚಿವರು ಹೇಳಿದ್ದಾರೆ. ಕೇರಳದ ದಕ್ಷಿಣ ಜಿಲ್ಲೆಗಳಲ್ಲಿ ರೈಲ್ವೆ ಹಳಿಯಲ್ಲಿ 600 ಕ್ಕೂ ಹೆಚ್ಚು ತಿರುವುದಳು ಇವೆ.

ಸೋಮವಾರದ ಪ್ರಾಯೋಗಿಕ ಚಾಲನೆಯಲ್ಲಿ ಸರಾಸರಿ ವೇಗ ಗಂಟೆಗೆ 70 ಕಿ.ಮೀ.ಗಿಂತ ಕಡಿಮೆ ಇತ್ತು. ರಾಜ್ಯದ ಉತ್ತರ ಜಿಲ್ಲೆಗಳಲ್ಲಿ ರೈಲು ಗಂಟೆಗೆ 110 ಕಿಮೀ ತಲುಪಿದೆ ಎಂದು ಲೋಕೋ ಪೈಲಟ್ ಹೇಳಿದ್ದಾರೆ. ಭಾರತದ ಅತ್ಯಂತ ವೇಗವಾಗಿ ಓಡುತ್ತಿರುವ ರೈಲು, ವಂದೇ ಭಾರತ್ ಎಕ್ಸ್‌ಪ್ರೆಸ್, ಕಳೆದ ಎರಡು ವರ್ಷಗಳಿಂದ ದೇಶದಲ್ಲಿ ಸರಾಸರಿ 83 ಕಿಮೀ ವೇಗದಲ್ಲಿ ಚಲಿಸುತ್ತಿದೆ.

ವಂದೇ ಭಾರತ್ ಕೇರಳಕ್ಕೆ ಬರುವುದಿಲ್ಲ ಎಂದು ಹಲವರು ಅಪಪ್ರಚಾರ ಮಾಡಿದರು, ಈಗ ಏನು ಹೇಳುತ್ತೀರಿ? ಎಂದು ಅಶ್ವಿನಿ ವೈಷ್ಣವ್ ತಮ್ಮ ಪತ್ರಿಕಾಗೋಷ್ಠಿಯಲ್ಲಿ ವಿಪಕ್ಷಗಳನ್ನು ಕುಟುಕಿದ್ದಾರೆ.

ವಂದೇ ಭಾರತ್ ಎಕ್ಸ್‌ಪ್ರೆಸ್  ರೈಲಿಗೆ ಏಪ್ರಿಲ್ 25 ರಂದು ಮೋದಿ ಚಾಲನೆ ನೀಡಲಿದ್ದಾರೆ. ಆರಂಭಿಕ ಹಂತದಲ್ಲಿ, ವಂದೇ ಭಾರತ್ ಗಂಟೆಗೆ ಕೇವಲ 100 ಕಿಮೀ ವೇಗದಲ್ಲಿ ಪ್ರಯಾಣಿಸಲಿದೆ. ಒಂದು ವರ್ಷದ ಅವಧಿಯಲ್ಲಿ ವಂದೇ ಭಾರತ್ 130 ಕಿಮೀ ವೇಗದಲ್ಲಿ ಓಡಲಿದೆ ಎಂದು ಸಚಿವರು ಮಾಹಿತಿ ನೀಡಿದರು. ವೇಗದ ಗುರಿಗಳನ್ನು ತಲುಪಲು ರೈಲುಗೆ ಅನುಕೂಲವಾಗುವಂತೆ ಟ್ರ್ಯಾಕ್ ಜೋಡಣೆ ಸಮೀಕ್ಷೆಯು ಸಮಾನಾಂತರವಾಗಿ ನಡೆಯುತ್ತದೆ. ಈ ರೈಲಿನಲ್ಲಿ ಆರಂಭಿಕ ಸವಾರಿಗಾಗಿ 25 ಪ್ರಯಾಣಿಕರನ್ನು ಆಯ್ಕೆ ಮಾಡಲಾಗುತ್ತದೆ. ಪ್ರಧಾನಿ ಮೋದಿ ಅವರು ತಿರುವನಂತಪುರದಿಂದ ರೈಲಿಗೆ ಫ್ಲ್ಯಾಗ್‌ಆಫ್ ಮಾಡಲಿದ್ದಾರೆ.

ನಿನ್ನೆ, ವಂದೇ ಭಾರತ್ ತಿರುವನಂತಪುರಂನಿಂದ ಕಣ್ಣೂರಿಗೆ ಏಳು ಗಂಟೆಗೆ ತಲುಪುವ ಮೂಲಕ ಟ್ರಯಲ್ ರನ್ ನಡೆಸಿತ್ತು.

ಇದನ್ನೂ ಓದಿ: ಗುಡ್ಡು ಮುಸ್ಲಿಂ, ಅತಿಕ್ ಅಹ್ಮದ್ ಪತ್ನಿ ಶೈಸ್ತಾರನ್ನು ಶೀಘ್ರದಲ್ಲೇ ಬಂಧಿಸಲಾಗುವುದು: ಯುಪಿ ಪೊಲೀಸ್

ಸಿಲ್ವರ್‌ಲೈನ್ ಸೆಮಿ ಹೈಸ್ಪೀಡ್ ರೈಲು ಯೋಜನೆಯು ಮುಗಿದ ಅಧ್ಯಾಯವಲ್ಲ

ಕೇರಳ ಸರಕಾರದ ಮಹತ್ವಾಕಾಂಕ್ಷೆಯ ಸಿಲ್ವರ್‌ಲೈನ್ ಸೆಮಿ ಹೈಸ್ಪೀಡ್ ರೈಲು ಯೋಜನೆಯು ಮುಗಿದ ಅಧ್ಯಾಯವಲ್ಲ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮಂಗಳವಾರ ಹೇಳಿದ್ದಾರೆ. ಆದರೆ, ಯೋಜನೆಯ ಸ್ಥಿತಿಗತಿ ಕುರಿತು ಹೆಚ್ಚಿನ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದ್ದಾರೆ. ಇದು ಸಂಪೂರ್ಣವಾಗಿ ಪ್ರತ್ಯೇಕ ಚರ್ಚೆಯಾಗಿದೆ. ಆ ಕುರಿತು ಸಂಪೂರ್ಣ ಪತ್ರಿಕಾಗೋಷ್ಠಿ ನಡೆಸಿ ಚರ್ಚಿಸಬಹುದು ಎಂದು ಸಚಿವರು ಹೇಳಿದ್ದಾರೆ.

ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ ರೈಲ್ವೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿಗಳೊಂದಿಗೆ ಭರವಸೆ ನೀಡಿದ ಚರ್ಚೆ ಇನ್ನೂ ನಡೆಯಬೇಕಿದೆ. ಸಮಯವು ಸಮಸ್ಯೆಯಾಗಿದೆ. ಅದು ಸಂಭವಿಸುತ್ತದೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:44 pm, Tue, 18 April 23