AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala: ಟಿಕೆಟ್ ಇಲ್ಲದೇ ವಂದೇ ಭಾರತ್ ರೈಲು ಏರಿ, ವಾಶ್​ ರೂಂನಲ್ಲಿ ಲಾಕ್​ ಮಾಡಿ ಕುಳಿತ ಯುವಕ, ಬಾಗಿಲು ಮುರಿದು ಹೊರಗೆಳೆದ ಅಧಿಕಾರಿಗಳು

ಕೇರಳದ ವಂದೇ ಭಾರತ್ ರೈಲಿನಲ್ಲಿ ಭಾನುವಾರ ವಿಚಿತ್ರ ಘಟನೆಯೊಂದು ನಡೆದಿದೆ. ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಟಿಕೆಟ್ ಇಲ್ಲದೇ ವಂದೇ ಭಾರತ್ ಎಕ್ಸ್‌ಪ್ರೆಸ್ ಹತ್ತಿದ ಯುವಕನೊಬ್ಬ ರೈಲಿನ ವಾಶ್‌ರೂಮ್‌ಗೆ ಹೋಗಿ ಚಿಲಕ ಹಾಕಿಕೊಂಡು ಹೊರಗೆ ಬರಲು ನಿರಾಕರಿಸಿದ ಘಟನೆ ನಡೆದಿದೆ.

Kerala: ಟಿಕೆಟ್ ಇಲ್ಲದೇ ವಂದೇ ಭಾರತ್ ರೈಲು ಏರಿ, ವಾಶ್​ ರೂಂನಲ್ಲಿ ಲಾಕ್​ ಮಾಡಿ ಕುಳಿತ ಯುವಕ, ಬಾಗಿಲು ಮುರಿದು ಹೊರಗೆಳೆದ ಅಧಿಕಾರಿಗಳು
ವಂದೇ ಭಾರತ್ ಎಕ್ಸ್​ಪ್ರೆಸ್​
ನಯನಾ ರಾಜೀವ್
|

Updated on: Jun 26, 2023 | 9:55 AM

Share

ಕೇರಳದ ವಂದೇ ಭಾರತ್ ರೈಲಿನಲ್ಲಿ ಭಾನುವಾರ ವಿಚಿತ್ರ ಘಟನೆಯೊಂದು ನಡೆದಿದೆ. ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಟಿಕೆಟ್ ಇಲ್ಲದೇ ವಂದೇ ಭಾರತ್ ಎಕ್ಸ್‌ಪ್ರೆಸ್(Vande Bharat Express) ಹತ್ತಿದ ಯುವಕನೊಬ್ಬ ರೈಲಿನ ವಾಶ್‌ರೂಮ್‌ಗೆ ಹೋಗಿ ಚಿಲಕ ಹಾಕಿಕೊಂಡು ಹೊರಗೆ ಬರಲು ನಿರಾಕರಿಸಿದ ಘಟನೆ ನಡೆದಿದೆ. ಅಧಿಕಾರಿಗಳ ಪ್ರಕಾರ, ವಂದೇ ಭಾರತ್ ಎಕ್ಸ್‌ಪ್ರೆಸ್ ಹತ್ತಿದ ಈ ಯುವಕ ವಾಶ್ ರೂಂನಲ್ಲಿ ಹೋಗಿ ಲಾಕ್ ಮಾಡಿಕೊಂಡು ಕುಳಿತಿದ್ದ.

ರೈಲು ಪಾಲಕ್ಕಾಡ್‌ನ ಶೋರನೂರ್ ರೈಲು ನಿಲ್ದಾಣವನ್ನು ತಲುಪಿದಾಗ, ವಾಶ್‌ರೂಮ್‌ನ ಬಾಗಿಲು ಮುರಿದು ವ್ಯಕ್ತಿಯನ್ನು ಹೊರತೆಗೆಯಲಾಯಿತು ಎನ್ನುವ ಮಾಹಿತಿ ಲಭ್ಯವಾಗಿದೆ.

ವಾಶ್ ರೂಂನಿಂದ ಹೊರಗೆ ಕರೆದೊಯ್ದ ನಂತರ ರೈಲ್ವೆ ರಕ್ಷಣಾ ಪಡೆ ಅಧಿಕಾರಿಗಳು ಯುವಕನನ್ನು ವಿಚಾರಣೆ ನಡೆಸಿದ್ದಾರೆ. ರೈಲ್ವೆ ಅಧಿಕಾರಿಗಳ ಪ್ರಕಾರ, ಮೊದಲಿಗೆ ಯುವಕ ಮಹಾರಾಷ್ಟ್ರದ ನಿವಾಸಿ ಎಂದು ಹೇಳಿದ್ದಾನೆ. ಯುವಕ ಹಿಂದಿಯಲ್ಲಿ ಮಾತನಾಡುತ್ತಿದ್ದ. ಬಳಿಕ ತಾನು ಕಾಸರಗೋಡು ನಿವಾಸಿ ಎಂದು ತಿಳಿಸಿದ್ದಾನೆ.

ಮತ್ತಷ್ಟು ಓದಿ: Vande Bharat Express: ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲು ಸಂಚಾರ ಜೂನ್​ 27ರಿಂದ ಆರಂಭ; ಇಲ್ಲಿದೆ ವೇಳಾಪಟ್ಟಿ

ಟಿಕೆಟ್ ಇಲ್ಲದೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವಕ ಯುವಕನ ಗುರುತು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯುವಕ ಟಿಕೆಟ್ ತೆಗೆದುಕೊಳ್ಳದೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ. ವಿಚಾರಣೆ ವೇಳೆ ಯುವಕ ತನ್ನನ್ನು ಯಾರೋ ಹಿಂಬಾಲಿಸಿಕೊಂಡು ಬರುತ್ತಿದ್ದು, ಆತನಿಂದ ತಪ್ಪಿಸಿಕೊಳ್ಳಲು ಮೊದಲು ವಾಶ್‌ರೂಮ್‌ಗೆ ಹೋಗಿ ಕುಳಿತುಕೊಂಡಿರುವುದಾಗಿ ತಿಳಿಸಿದ್ದಾನೆ.

ಅಧಿಕಾರಿಗಳು ಪದೇ ಪದೇ ಸೂಚನೆ ನೀಡಿದರೂ ಕೋಳಿಗೋಡು ಮತ್ತು ಕಣ್ಣೂರಿನಲ್ಲಿ ರೈಲು ನಿಂತಾಗ ಹೊರಗೆ ಬರುವಂತೆ ಹೇಳಿದರೂ, ಆತ ಉದ್ದೇಶಪೂರ್ವಕವಾಗಿ ವಾಶ್ ರೂಂನಲ್ಲಿ ಕುಳಿತುಕೊಂಡಿದ್ದ. ಹೀಗಾಗಿ ಅನಿವಾರ್ಯವಾಗಿ ವಾಶ್​ರೂಂ ಲಾಕ್​ ಮುರಿದು ಅಧಿಕಾರಿಗಳು ಒಳಗೆ  ತೆರಳಿ ಆತನನ್ನು ಹೊರಗೆ ಕರೆತಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​