AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲಿನಲ್ಲಿ ನೀಡಲಾದ ಆಹಾರದಲ್ಲಿ ಜಿರಳೆ ಪತ್ತೆ, ಕ್ಷಮೆಯಾಚಿಸಿದ ಐಆರ್​ಸಿಟಿಸಿ

ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು(Vande Bharat Express Train) ದೇಶದ ಹಲವು ಮಾರ್ಗಗಳಲ್ಲಿ ಸಂಚರಿಸುತ್ತಿದೆ. ಕಳೆದ ತಿಂಗಳು ರಾಣಿ ಕಮಲಪತಿ ಹಾಗೂ ಹಜರತ್ ನಿಜಾಮುದ್ದೀನ್ ನಡುವೆ ಪ್ರಾರಂಭವಾಗಿತ್ತು.

ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲಿನಲ್ಲಿ ನೀಡಲಾದ ಆಹಾರದಲ್ಲಿ ಜಿರಳೆ ಪತ್ತೆ, ಕ್ಷಮೆಯಾಚಿಸಿದ ಐಆರ್​ಸಿಟಿಸಿ
ಊಟದಲ್ಲಿ ಜಿರಳೆ
ನಯನಾ ರಾಜೀವ್
|

Updated on:Jul 28, 2023 | 9:02 AM

Share

ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು(Vande Bharat Express Train) ದೇಶದ ಹಲವು ಮಾರ್ಗಗಳಲ್ಲಿ ಸಂಚರಿಸುತ್ತಿದೆ. ಕಳೆದ ತಿಂಗಳು ರಾಣಿ ಕಮಲಪತಿ ಹಾಗೂ ಹಜರತ್ ನಿಜಾಮುದ್ದೀನ್ ನಡುವೆ ಪ್ರಾರಂಭವಾಗಿತ್ತು. ಆದರೆ ತಿಂಗಳೊಳಗೆ ದೂರೊಂದು ಕೇಳಿ ಬಂದಿದೆ. IRCTC ಪ್ರಯಾಣಿಕರಿಗೆ ನೀಡಿದ ಆಹಾರದಲ್ಲಿ ಜಿರಳೆ ಕಂಡುಬಂದಿದೆ. ಇದರಿಂದ ಕೋಪಗೊಂಡ ಪ್ರಯಾಣಿಕ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ, ಅದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕ್ಷಮೆಯಾಚಿಸಿದ ಐಆರ್​ಸಿಟಿಸಿ ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲಿನಲ್ಲಿ ನೀಡಲಾದ ಆಹಾರದಲ್ಲಿ ಹುಳು ಪತ್ತೆಯಾಗಿರುವ ಕುರಿತು ಪುಂಡೂಕ್ ಎಂಬ ಟ್ವಿಟ್ಟರ್ ಖಾತೆಯಿಂದ ಫೋಟೊವನ್ನು ಹಂಚಿಕೊಳ್ಳಲಾಗಿದೆ. ಐಆರ್​ಸಿಟಿಸಿಯನ್ನು ಟ್ಯಾಗ್ ಮಾಡಲಾಗಿದೆ. ಪ್ರಯಾಣಿಕರ ಕೆಟ್ಟ ಅನುಭವಕ್ಕಾಗಿ ಐಆರ್​ಸಿಟಿಸಿ ಕ್ಷಮೆ ಯಾಚಿಸಿದೆ.

ಮತ್ತಷ್ಟು ಓದಿ: Best Local Food: ರೈಲಿನಲ್ಲಿ ಪ್ರಯಾಣಿಸಿದರೆ ,ಈ 5 ರೈಲ್ವೇ ನಿಲ್ದಾಣಗಳ ಪುಡ್ ಸವಿಯಲು ಮರೆಯದಿರಿ

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುತ್ತೇವೆ, ಭಾರಿ ದಂಡ ವಿಧಿಸುವುದರ ಜತೆಗೆ ಆಹಾರ ತಯಾರಿಕೆ ಸಮಯದಲ್ಲಿ ಎಲ್ಲಾ ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳುವಂತೆ ಎಚ್ಚರಿಕೆ ನಿಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಈ ಘಟನೆ ಕುರಿತು ಟ್ವಿಟ್ಟರ್​ನಲ್ಲಿ ಮಾಹಿತಿ ನೀಡಿರುವ ಭೋಪಾಲ್​ನ ವಿಭಾಗೀಯ ರೈಲ್ವೆ ಮ್ಯಾನೇಜರ್ ಈ ಕೆಟ್ಟ ಅನುಭವದಿಂದ ತೊಂದರೆಗೊಳಗಾದ ಪ್ರಯಾಣಿಕರಿಗೆ ಪರ್ಯಾಯ ಆಹಾರ ವ್ಯವಸ್ಥೆ ಮಾಡಲಾಗಿತ್ತು, ಸೂಕ್ತ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ರಾಜಧಾನಿ ಮತ್ತು ಶತಾಬ್ದಿಗಳು ಸೇರಿದಂತೆ ಭಾರತೀಯ ರೈಲ್ವೇ ತಮ್ಮ ರೈಲುಗಳಲ್ಲಿ ಗುಣಮಟ್ಟದ ಗುಣಮಟ್ಟದ ಆಹಾರಕ್ಕಾಗಿ ಆಗಾಗ ಟೀಕೆಗೆ ಒಳಗಾಗಿದೆ. ಆದರೆ ಈಗ ಅಂತಹ ಪ್ರಕರಣಗಳು ವಂದೇ ಭಾರತ್‌ ರೈಲಿನಲ್ಲಿಯೂ ಸಂಭವಿಸುತ್ತಿವೆ. ಇತ್ತೀಚೆಗೆ ಪ್ರಯಾಣಿಕರೊಬ್ಬರು ಭೋಪಾಲ್‌ನಿಂದ ಗ್ವಾಲಿಯರ್‌ಗೆ ಪ್ರಯಾಣಿಸುವಾಗ ಪರೋಟದಲ್ಲಿ ಜಿರಳೆ ಕಂಡು ಆಹಾರದ ಫೋಟೋಗಳನ್ನು ಟ್ವೀಟ್ ಮಾಡಿದ್ದರು.

ತನ್ನ ಟ್ವೀಟ್‌ನಲ್ಲಿ, ಪ್ರಯಾಣಿಕ ಸುಬೋಧ್ ಪಹಲಾಜನ್ ಪರೋಟದಲ್ಲಿ ಜಿರಳೆ ಕಾಣುವ ಹಲವಾರು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ದೆಹಲಿ ಮತ್ತು ಭೋಪಾಲ್ ನಡುವೆ 700 ಕಿಮೀಗಳನ್ನು ಕ್ರಮಿಸಲು 7 ಗಂಟೆ 30 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:01 am, Fri, 28 July 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ