AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂದೇ ಭಾರತ್ ರೈಲಿನಲ್ಲಿ ಹಳಸಿದ ಆಹಾರ ವಿತರಣೆ: ಆಕ್ರೋಶಗೊಂಡ ಪ್ರಯಾಣಿಕರು

Vande Bharat Express: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಹಾಳಾದ, ಹಳಸಿದ ಊಟವನ್ನು ನೀಡಲಾಗುತ್ತಿದೆ ಎಂದು ಪ್ರಯಾಣಿಕರು ಆಕ್ರೋಶಗೊಂಡಿದ್ದಾರೆ. ನವದೆಹಲಿಯಿಂದ ವಾರಣಾಸಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್​ನಲ್ಲಿ ಪ್ರಯಾಣ ಬೆಳೆಸಿದ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್​ ಆಗಿತ್ತು.

ವಂದೇ ಭಾರತ್ ರೈಲಿನಲ್ಲಿ ಹಳಸಿದ ಆಹಾರ ವಿತರಣೆ: ಆಕ್ರೋಶಗೊಂಡ ಪ್ರಯಾಣಿಕರು
ಆಹಾರ
ಗಂಗಾಧರ​ ಬ. ಸಾಬೋಜಿ
|

Updated on: Jan 13, 2024 | 10:14 PM

Share

ಆರಾಮದಾಯಕ ಮತ್ತು ತ್ವರಿತ ಪ್ರಯಾಣಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲು ಪ್ರತಿಯೊಬ್ಬರಿಗೂ ಸಹಕಾರಿಯಾಗಿದೆ. ಆದರೆ ದೂರದೂರಿಗೆ ಪ್ರಯಾಣಿಸುವ ಪ್ರಯಾಣಿಕರಿಂದ ಇಲ್ಲಿ ಸಿಗುವ ಆಹಾರದ ಗುಣಮಟ್ಟ ಕಳಪೆಯಾಗಿದೆ ಎಂಬ ದೂರುಗಳು ಹೆಚ್ಚಾಗಿ ಕೇಳಿ ಬರುತ್ತಿವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಹಾಳಾದ, ಹಳಸಿದ ಊಟವನ್ನು ನೀಡಲಾಗುತ್ತಿದೆ ಎಂದು ಪ್ರಯಾಣಿಕರು ಆಕ್ರೋಶಗೊಂಡಿದ್ದಾರೆ. ನವದೆಹಲಿಯಿಂದ ವಾರಣಾಸಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್​ನಲ್ಲಿ ಪ್ರಯಾಣ ಬೆಳೆಸಿದ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್​ ಆಗಿತ್ತು.

ಆಕಾಶ್​ ಕೇಶಾರಿ ಎಂಬ ಪ್ರಯಾಣಿಕರೊಬ್ಬರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ನೀಡಲಾದ ಕಳಪೆ ಆಹಾರದ ಬಗ್ಗೆ ದೂರಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ನಾನು ಎನ್​ಡಿಎಲ್​ಎಸ್​ ನಿಂದ ಬಿಎಸ್​ಬಿಗೆ 22416 ರೈಲಿನಲ್ಲಿ ಪ್ರಯಾಣ ನಡೆಸಿದ್ದೆ. ಈ ವೇಳೆ ನೀಡಲಾದ ಆಹಾರವು ವಾಸನೆ ಮತ್ತು ಅತ್ಯಂತ ಕಳಪೆ ಗುಣಮಟ್ಟವಾಗಿದೆ. ದಯವಿಟ್ಟು ನನ್ನ ಎಲ್ಲಾ ಹಣವನ್ನು ಮರುಪಾವತಿ ಮಾಡಿ. ಈ ಮಾರಾಟಗಾರರು ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಬ್ರಾಂಡ್ ಹೆಸರನ್ನು ಹಾಳು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಪ್ರಯಾಣಿಕ ಆಕಾಶ್​ ಕೇಶಾರಿ ಟ್ವೀಟ್​​ 

ವಿಡಿಯೋ ಕೂಡ ಹಂಚಿಕೊಂಡಿರುವ ಆಕಾಶ್​ ಕೇಶಾರಿ, ಪ್ರಯಾಣಿಕರು ಆಹಾರವನ್ನು ತೆಗೆದುಕೊಂಡು ಹೋಗುವಂತೆ ರೈಲ್ವೆ ಸಿಬ್ಬಂದಿಗೆ ಹೇಳುವುದನ್ನು ಕಾಣಬಹುದಾಗಿದೆ. ಪಲ್ಯ ವಾಸನೆ ಬರುತ್ತಿದೆ ಮತ್ತು ದಾಲ್ ಹಾಳಾಗಿದೆ ಎಂದು ವ್ಯಕ್ತಿಯೊಬ್ಬರು ಹೇಳುವುದನ್ನು ಕೇಳಬಹುದಾಗಿದೆ.

ಇದನ್ನೂ ಓದಿ: ಕೆಲವೇ ದಿನಗಳಲ್ಲಿ ಬೆಂಗಳೂರು, ಹೈದರಾಬಾದ್ ವಂದೇ ಭಾರತ್ ರೈಲು ಸಂಚಾರ ಆರಂಭ; ಎಲ್ಲೆಲ್ಲಿ ನಿಲುಗಡೆ? ಇಲ್ಲಿದೆ ವಿವರ

ಈ ಪೋಸ್ಟ್​ನ್ನು ಜನವರಿ 7 ರಂದು ಹಂಚಿಕೊಳ್ಳಲಾಗಿದ್ದು, ಇವರೆಗೂ 1,000 ಕ್ಕೂ ಹೆಚ್ಚು ಜನರು ನೋಡಿದ್ದು, ವಿವಿಧ ಕಾಮೆಂಟ್‌ಗಳು ಸಹ ಬಂದಿವೆ. ಈ ಆಹಾರ ಮಾರಾಟಗಾರರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಮತ್ತು ಕೆಲಸದಿಂದ ತೆಗೆದುಹಾಕಬೇಕು. ಈ ಕೆಟ್ಟ ಮತ್ತು ನಿರ್ಲಜ್ಜ ಮಾರಾಟಗಾರರು ನಿಜವಾಗಿಯೂ ನಮ್ಮ ಅತ್ಯಂತ ಪ್ರೀತಿಯ ವಂದೇ ಭಾರತ್ ಬ್ರ್ಯಾಂಡ್ ಹೆಸರನ್ನು ಹಾಳು ಮಾಡುತ್ತಿದ್ದಾರೆ. ಅವರನ್ನು ಕೆಲಸದಿಂದ ತೆಗೆದುಹಾಕ ಎಂದು ಕಾಮೆಂಟ್​ ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ ಇಂದು ಪ್ರಧಾನಿ ಮೋದಿಯಿಂದ ಚಾಲನೆ

ಮತ್ತೊಬ್ಬರು ರಾಜಧಾನಿಯಲ್ಲಿಯೂ ಅದೇ ಸ್ಥಿತಿಯಾಗಿದೆ. ಅದಕ್ಕಾಗಿ ನೀವು ಪ್ಲಾಟ್‌ಫಾರ್ಮ್‌ನಲ್ಲಿ ನಿಂತಿದ್ದರೆ ಮತ್ತು ಯಾವುದೇ ಮೇಲ್ ಎಕ್ಸ್‌ಪ್ರೆಸ್ ರೈಲು ಅದರ ಮೂಲಕ ಹಾದು ಹೋದರೆ, ಅದು ಪ್ಲಾಟ್‌ಫಾರ್ಮ್‌ನಲ್ಲಿ ಬಿಡುವ ದುರ್ವಾಸನೆ ಅಸಹನೀಯವಾಗಿರುತ್ತದೆ. ರೈಲುಗಳು ಕೊಳಕಾಗಿದ್ದು, ಶುಚಿಗೊಳಿಸಲಾಗುವುದಿಲ್ಲ ಮತ್ತು ನಾವು ಸ್ವಚ್ಛತೆಯ ಕುರಿತು ಉಪನ್ಯಾಸಗಳನ್ನು ನೀಡುತ್ತೇವೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ