Vande Bharat Express: ಬಂಗಾಳದಲ್ಲಿ ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ, ರೈಲಿನ ಕಿಟಕಿ ಗಾಜುಗಳು ಪುಡಿಪುಡಿ

| Updated By: ಅಕ್ಷಯ್​ ಪಲ್ಲಮಜಲು​​

Updated on: Jan 03, 2023 | 12:31 PM

ಪಶ್ಚಿಮ ಬಂಗಾಳದ ಹೌರಾದಿಂದ ನ್ಯೂ ಜಲ್ಪೈಗುರಿಗೆ ಸಂಪರ್ಕ ಕಲ್ಪಿಸುವ ರೈಲಿಗೆ ಕಲ್ಲು ಹೊಡೆದಿದ್ದಾರೆ. ಇದರಿಂದ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಕಿಟಕಿ ಗಾಜುಗಳು ಮುರಿದು ಬಿದ್ದಿವೆ ಎಂದು ಭಾರತೀಯ ರೈಲ್ವೆ ತಿಳಿಸಿದೆ. ಮಾಲ್ಡಾ ಸ್ಟೇಷನ್ ಬಳಿ ಈ ಘಟನೆ ನಡೆದಿದೆ.

Vande Bharat Express: ಬಂಗಾಳದಲ್ಲಿ ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ, ರೈಲಿನ ಕಿಟಕಿ ಗಾಜುಗಳು ಪುಡಿಪುಡಿ
Vande Bharat Express
Image Credit source: google image
Follow us on

ಕೋಲ್ಕತ್ತಾ: ಇತ್ತೀಚೆಗೆ ಪ್ರಧಾನಿ ಮೋದಿ ಅವರು ಪಶ್ಚಿಮ ಬಂಗಳಾದಲ್ಲಿ (West Bengal) ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲುನ್ನು (Vande Bharat Express) ಉದ್ಟಾಟನೆ ಮಾಡಿದ್ದರು. ಇದೀಗ ಹೌರಾದಿಂದ ನ್ಯೂ ಜಲ್ಪೈಗುರಿಗೆ ಸಂಪರ್ಕ ಕಲ್ಪಿಸುವ ರೈಲಿಗೆ ಕಲ್ಲು ಹೊಡೆದಿದ್ದಾರೆ. ಇದರಿಂದ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಕಿಟಕಿ ಗಾಜುಗಳು ಮುರಿದು ಬಿದ್ದಿವೆ ಎಂದು ಭಾರತೀಯ ರೈಲ್ವೆ ತಿಳಿಸಿದೆ. ಮಾಲ್ಡಾ ಸ್ಟೇಷನ್ ಬಳಿ ಈ ಘಟನೆ ನಡೆದಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಯಾವುದೇ ಪ್ರಯಾಣಿಕರು ಗಾಯಗೊಂಡಿಲ್ಲ ಎಂದು ಭಾರತೀಯ ರೈಲ್ವೆ ತಿಳಿಸಿದೆ.

ಅಪರಿಚಿತ ವ್ಯಕ್ತಿಗಳ ವಿರುದ್ಧ ರೈಲ್ವೇ ಕಾಯಿದೆಯ u/s 154 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಪಶ್ಚಿಮ ಬಂಗಾಳವು ಡಿಸೆಂಬರ್ 30 ರಂದು ತನ್ನ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಸ್ವಾಗತಿಸಿತು. ಪ್ರಧಾನಿ ನರೇಂದ್ರ ಮೋದಿ ಅವರು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹೌರಾ ಮತ್ತು ನ್ಯೂ ಜಲ್ಪೈಗುರಿ (NJP) ನಡುವಿನ ಸೆಮಿ-ಹೈ-ಸ್ಪೀಡ್ ರೈಲಿಗೆ ಫ್ಲ್ಯಾಗ್ ಆಫ್ ಮಾಡಿದರು. ಇದು ರಾಷ್ಟ್ರದ ಏಳನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು.

ರೈಲು ಸುಮಾರು 550 ಕಿಮೀ ದೂರವನ್ನು ಕ್ರಮಿಸುತ್ತದೆ ಮತ್ತು ಹೌರಾ – ಎನ್‌ಜೆಪಿ ನಡುವೆ ಕೇವಲ ಮೂರು ನಿಲುಗಡೆಗಳೊಂದಿಗೆ ತನ್ನ ಗಮ್ಯಸ್ಥಾನವನ್ನು ತಲುಪಲು ಏಳೂವರೆ ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಶತಾಬ್ದಿ ಎಕ್ಸ್‌ಪ್ರೆಸ್ ಕೂಡ ಎರಡು ಟರ್ಮಿನಲ್‌ಗಳ ನಡುವೆ ಚಲಿಸುತ್ತದೆ.

ಇದನ್ನು ಓದಿ:ಜಾನುವಾರಿಗೆ ಡಿಕ್ಕಿಯಾದ ಮೈಸೂರು – ಚೆನ್ನೈ ವಂದೇ ಭಾರತ್ ಎಕ್ಸ್​ಪ್ರೆಸ್​; ಹಾನಿ

ವಂದೇ ಭಾರತ್ ಬುಧವಾರ ಹೊರತುಪಡಿಸಿ ವಾರದಲ್ಲಿ ಆರು ದಿನಗಳು ಓಡುತ್ತವೆ. ರೈಲು ಹೌರಾದಿಂದ ಬೆಳಗ್ಗೆ 5.50ಕ್ಕೆ ಹೊರಟು ಮಧ್ಯಾಹ್ನ 1.25ಕ್ಕೆ ಎನ್‌ಜೆಪಿ ತಲುಪಲಿದೆ. NJP ಯಿಂದ, ರೈಲು ಮಧ್ಯಾಹ್ನ 3.05 ಕ್ಕೆ ಹೊರಟು ರಾತ್ರಿ 10.35 ಕ್ಕೆ ಹೌರಾ ತಲುಪುತ್ತದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ