AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಞಾನವಾಪಿ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ವಾರಣಾಸಿ ನ್ಯಾಯಾಧೀಶ ರವಿಕುಮಾರ್ ದಿವಾಕರ್ ವರ್ಗಾವಣೆ

ನ್ಯಾಯಾಧೀಶ ದಿವಾಕರ್ ಅವರ ವರ್ಗಾವಣೆಯು ವಾಡಿಕೆಯ ಪ್ರಕ್ರಿಯೆ ಆಗಿದ್ದು ಹೊಸ ಪೋಸ್ಟಿಂಗ್‌ಗೂ ಜ್ಞಾನವಾಪಿ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ವರದಿಗಳು ತಿಳಿಸಿವೆ.

ಜ್ಞಾನವಾಪಿ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ವಾರಣಾಸಿ ನ್ಯಾಯಾಧೀಶ ರವಿಕುಮಾರ್ ದಿವಾಕರ್ ವರ್ಗಾವಣೆ
ರವಿ ಕುಮಾರ್ ದಿವಾಕರ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jun 21, 2022 | 10:33 PM

Share

ವಾರಣಾಸಿ: ಜ್ಞಾನವಾಪಿ ಮಸೀದಿ ಪ್ರಕರಣದ (Gyanvapi mosque case) ವಿಚಾರಣೆ ನಡೆಸುತ್ತಿದ್ದ ಮತ್ತು ಮಸೀದಿಯ ವಿಡಿಯೊ ಸಮೀಕ್ಷೆಗೆ ಆದೇಶಿಸಿದ್ದ ವಾರಣಾಸಿ ಸಿವಿಲ್ ನ್ಯಾಯಾಧೀಶ (ಹಿರಿಯ ವಿಭಾಗ) ರವಿಕುಮಾರ್ ದಿವಾಕರ್(Ravi Kumar Diwakar) ಅವರನ್ನು ಬರೇಲಿಗೆ (Bareilly)ವರ್ಗಾವಣೆ ಮಾಡಲಾಗಿದೆ. ಏತನ್ಮಧ್ಯೆ, ನ್ಯಾಯಾಧೀಶ ದಿವಾಕರ್ ಅವರ ವರ್ಗಾವಣೆಯು ವಾಡಿಕೆಯ ಪ್ರಕ್ರಿಯೆ ಆಗಿದ್ದು ಹೊಸ ಪೋಸ್ಟಿಂಗ್‌ಗೂ ಜ್ಞಾನವಾಪಿ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ವರದಿಗಳು ತಿಳಿಸಿವೆ. ಜೂನ್ 20 ರಂದು ಅಲಹಾಬಾದ್ ಹೈಕೋರ್ಟ್ 121 ಸಿವಿಲ್ ನ್ಯಾಯಾಧೀಶರನ್ನು ಉತ್ತರ ಪ್ರದೇಶದ ವಿವಿಧ ನ್ಯಾಯಾಲಯಗಳಿಗೆ ವರ್ಗಾಯಿಸಿತು. ವರ್ಗಾವಣೆಗೊಂಡ ನ್ಯಾಯಾಧೀಶರು ಜುಲೈ 4 ರೊಳಗೆ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಹಿಂದೆ ಸಿವಿಲ್ ನ್ಯಾಯಾಧೀಶರಿಗೆ ‘ಇಸ್ಲಾಮಿಕ್ ಅಘಾಜ್ ಮೂವ್‌ಮೆಂಟ್’ ಎಂಬ ಸಂಘಟನೆಯಿಂದ ಬೆದರಿಕೆ ಪತ್ರ ಬಂದಿತ್ತು, ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರ ನ್ಯಾಯಾಧೀಶ ದಿವಾಕರ್ ಅವರ ಭದ್ರತೆಯನ್ನು ಹೆಚ್ಚಿಸಿತ್ತು.

ಬೆದರಿಕೆ ಪತ್ರವನ್ನು ಸಿಕ್ಕಿದ  ನಂತರ ನ್ಯಾಯಾಧೀಶರು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ), ಪೊಲೀಸ್ ಮಹಾನಿರ್ದೇಶಕರು ಮತ್ತು ವಾರಣಾಸಿ ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿದ್ದು, ಶೀಘ್ರ ಕ್ರಮ ಕೈಗೊಂಡ ವಾರಣಾಸಿ ಪೊಲೀಸರು ಬೆದರಿಕೆ ಪತ್ರ ಪ್ರಕರಣದ ತನಿಖೆಗೆ ಆದೇಶಿಸಿದ್ದರು.

“ಹಲವು ಅಟ್ಯಾಚ್​​ಮೆಂಟ್​​ಗಳನ್ನು ಹೊಂದಿರುವ ಪತ್ರದ ಬಗ್ಗೆ ಸಿವಿಲ್ ನ್ಯಾಯಾಧೀಶರು ಎಚ್ಚರಿಸಿದ ನಂತರ, ಈ ಬಗ್ಗೆ ತನಿಖೆ ನಡೆಸಲು ಪೊಲೀಸ್ ಉಪ ಕಮಿಷನರ್ (ವರುಣಾ ವಲಯ) ಅವರನ್ನು ನಿಯೋಜಿಸಲಾಗಿದೆ” ಎಂದು ವಾರಣಾಸಿ ಪೊಲೀಸ್ ಕಮಿಷನರ್ ಎ ಸತೀಶ್ ಗಣೇಶ್ ಹೇಳಿದ್ದಾರೆ. ಬೆದರಿಕೆ ಹಿನ್ನಲೆಯಲ್ಲಿ ವಾರಣಾಸಿಯಲ್ಲಿ ಸಿವಿಲ್ ನ್ಯಾಯಾಧೀಶರಿಗೆ ಮತ್ತು ಲಖನೌದಲ್ಲಿರುವ ಅವರ ತಾಯಿಗೆ ಪೊಲೀಸರು ಸೂಕ್ತ ಭದ್ರತೆ ಒದಗಿಸಿದ್ದಾರೆ.

ಬೆದರಿಕೆ ಪತ್ರವನ್ನು ಪೋಸ್ಟ್ ಮೂಲಕ ಕಳುಹಿಸಲಾಗಿದೆ ಮತ್ತು ಅದರಲ್ಲಿ ಕಾಸಿಫ್ ಅಹ್ಮದ್ ಸಿದ್ದಿಕಿ ಎಂಬ ಹೆಸರಿದ್ದು, ಈತ ‘ಇಸ್ಲಾಮಿಕ್ ಅಘಾಜ್ ಮೂವ್‌ಮೆಂಟ್’ ಅಧ್ಯಕ್ಷ ಎಂದು ಹೇಳಿಕೊಂಡಿದ್ದಾರೆ. ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ವಿರುದ್ಧ ಅವಹೇಳನಕಾರಿ ಕಾಮೆಂಟ್‌ಗಳನ್ನು  ಮಾಡಲಾಗಿತ್ತು.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್