AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಮ್ಮೆ ಯೋಗಿ ಸರ್ಕಾರದ ವಿರುದ್ಧ ತಿರುಗಿಬಿದ್ದ ಬಿಜೆಪಿ ಸಂಸದ ವರುಣ್​ ಗಾಂಧಿ !

ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ವಿಡಿಯೋ ಶೇರ್​ ಮಾಡಿಕೊಂಡು ಸರ್ಕಾರದ ವಿರುದ್ಧ ವರುಣ್​ ಗಾಂಧಿ ಎರಡು ಟ್ವೀಟ್​ ಮಾಡಿದ್ದರು. ಅದಾದ ನಂತರ ವರುಣ್​ ಗಾಂಧಿ ಮತ್ತು ಅವರ ತಾಯಿ ಮನೇಕಾ ಗಾಂಧಿಯವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಕೈಬಿಡಲಾಗಿದೆ. 

ಮತ್ತೊಮ್ಮೆ ಯೋಗಿ ಸರ್ಕಾರದ ವಿರುದ್ಧ ತಿರುಗಿಬಿದ್ದ ಬಿಜೆಪಿ ಸಂಸದ ವರುಣ್​ ಗಾಂಧಿ !
ವರುಣ್​ ಗಾಂಧಿ
TV9 Web
| Updated By: Lakshmi Hegde|

Updated on:Oct 22, 2021 | 11:23 AM

Share

ಲಖನೌ: ಪಿಲಿಭಿತ್​ನ  ಬಿಜೆಪಿ ಸಂಸದ ವರುಣ್​ ಗಾಂಧಿ (BJP MP Varun Gandhi) ಈಗೀಗ ಯೋಗಿ ಆದಿತ್ಯನಾಥ್​ ಸರ್ಕಾರ (Yogi Adityanath Government)ದ ವಿರುದ್ಧ ಜಾಸ್ತಿ ಮಾತನಾಡುತ್ತಿದ್ದಾರೆ. ಇತ್ತೀಚೆಗೆ ಉತ್ತರಪ್ರದೇಶದ ಲಖಿಂಪುರ ಖೇರಿ(Lakhimpur Kheri)ಯಲ್ಲಿ ರೈತರ ಮೇಲೆ ನಡೆದ ಹಿಂಸಾಚಾರವನ್ನು ಖಂಡಿಸಿ, ರೈತರ ಪರ ಮಾತನಾಡಿದ್ದರು. ಸರ್ಕಾರವನ್ನು ಪರೋಕ್ಷವಾಗಿಯೇ ವಿರೋಧಿಸಿದ್ದರು. ಇದೀಗ ಪಿಲಿಭಿತ್​ ಮತ್ತು ಬರೇಲಿಗಳಲ್ಲಿ ವಿಪರೀತ ಮಳೆ ಸುರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇದರ ಬಗ್ಗೆಯೂ ಈಗ ವರುಣ್​ ಗಾಂಧಿ ಸರ್ಕಾರದ ವಿರುದ್ಧ ಮಾತನಾಡಿದ್ದಾರೆ.  

ಫಿಲಿಬಿತ್ ಮತ್ತು ಬರೇಲಿಗಳಲ್ಲಿ ಬಹುತೇಕ ಕೆಳ ಪ್ರದೇಶಗಳಲ್ಲಿ ನೀರು ತುಂಬಿ ನಿಂತಿದೆ. ಈ ವಿಪತ್ತು ಮುಗಿಯುವವರಿಗೆ ಯಾರೂ ಹಸಿವಿನಿಂದ ಇರಬಾರದು ಎಂದು ರೇಶನ್​​ಗಳನ್ನು ನೀಡಲಾಗುತ್ತಿದೆ. ಸಂಕಷ್ಟದಲ್ಲಿರುವ ಸಾಮಾನ್ಯ ಜನರು ವ್ಯವಸ್ಥೆಯಿಂದ ಸಹಾಯವನ್ನು ಬಯಸುತ್ತಾರೆ..ಆದರೆ ಅವರು ತಮ್ಮ ರಕ್ಷಣೆಗೆ ತಾವೇ ಗುದ್ದಾಡುವ ಪರಿಸ್ಥಿತಿ ಇದೆ. ಹೀಗೆ ವೈಯಕ್ತಿಕವಾಗಿಯೇ ಎಲ್ಲವನ್ನೂ ಮಾಡಿಕೊಳ್ಳಬೇಕು ಎಂದಾದರೆ ಆಡಳಿತ ಇರುವುದು ಯಾತಕ್ಕೆ? ಅದರ ಅರ್ಥವೇನು? ಎಂದು ವರುಣ್​ ಗಾಂಧಿ ಟ್ವೀಟ್​ ಮಾಡಿದ್ದಾರೆ.  ಎರಡೂ ಜಿಲ್ಲೆಗಳಲ್ಲಿ ವಿಪರೀತ ಮಳೆಯಿಂದಾಗಿ ಮೂವರು ಮೃತಪಟ್ಟಿದ್ದಾರೆ. 100ಕ್ಕೂ ಹೆಚ್ಚು ಜನರು ಸಂಕಷ್ಟಕ್ಕೀಡಾಗಿದ್ದಾರೆ.  ಶಾರದಾ ಮತ್ತು ದೇವೋಹ ನದಿಗಳು ತುಂಬಿ ಹರಿಯುತ್ತಿದ್ದು, ನದಿ ದಡದ ಜನರ ಸ್ಥಳಾಂತರವಾಗಿದೆ. ಈ ಹೊತ್ತಲ್ಲೇ ವರುಣ್​ ಗಾಂಧಿ ಆಡಳಿತವನ್ನು ಟೀಕಿಸಿ ಟ್ವೀಟ್​ ಮಾಡಿದ್ದಾರೆ. ಪ್ರವಾಹದಿಂದ ಸಂಕಷ್ಟಕ್ಕೀಡಾದ ಜನರಿಗೆ ಪರಿಹಾರ ನೀಡಲು ಯೋಗಿ ಆದಿತ್ಯನಾಥ್​​ರನ್ನು ಆಗ್ರಹಿಸಿದ್ದಾರೆ.

ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ವಿಡಿಯೋ ಶೇರ್​ ಮಾಡಿಕೊಂಡು ಸರ್ಕಾರದ ವಿರುದ್ಧ ವರುಣ್​ ಗಾಂಧಿ ಎರಡು ಟ್ವೀಟ್​ ಮಾಡಿದ್ದರು. ಅದಾದ ನಂತರ ವರುಣ್​ ಗಾಂಧಿ ಮತ್ತು ಅವರ ತಾಯಿ ಮನೇಕಾ ಗಾಂಧಿಯವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಕೈಬಿಡಲಾಗಿದೆ.  ಉತ್ತರಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ. ಆದರೆ ಈ ಬೆನ್ನಲ್ಲೇ ವರುಣ್​ ಗಾಂಧಿ ಪದೇಪದೆ ಬಿಜೆಪಿ ಸರ್ಕಾರದ ವಿರುದ್ಧ ಮಾತನಾಡುತ್ತಿರುವುದು ಅನುಮಾನ ಹುಟ್ಟಿಸಿದೆ.

ಇದನ್ನೂ ಓದಿ: ಭಾರತದಲ್ಲಿ ಕೊವಿಡ್‌ಗೆ 50 ಲಕ್ಷ ಜನ ಬಲಿ, ಆದ್ರೆ 100 ಕೋಟಿ ಡೋಸ್ ನೀಡಿದ್ದಕ್ಕೆ ಸಂಭ್ರಮಿಸುತ್ತಿದ್ದಾರೆ: ಸಿದ್ದರಾಮಯ್ಯ ವ್ಯಂಗ್ಯ

ಭಾರತದಲ್ಲಿ ಕೊವಿಡ್‌ಗೆ 50 ಲಕ್ಷ ಜನ ಬಲಿ, ಆದ್ರೆ 100 ಕೋಟಿ ಡೋಸ್ ನೀಡಿದ್ದಕ್ಕೆ ಸಂಭ್ರಮಿಸುತ್ತಿದ್ದಾರೆ: ಸಿದ್ದರಾಮಯ್ಯ ವ್ಯಂಗ್ಯ

Published On - 11:22 am, Fri, 22 October 21

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?