AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀರ್ ಬಾಲ್ ದಿವಸ್: ನಮ್ಮ ಪರಂಪರೆಯ ಬಗ್ಗೆ ಇತರ ದೇಶಗಳು ಗೌರವಿಸುತ್ತಿದೆ: ಪ್ರಧಾನಿ ಮೋದಿ

Veer Bal Divas: ದೆಹಲಿಯ ಭಾರತ್ ಮಂಟಪದಲ್ಲಿ "ವೀರ್ ಬಾಲ್ ದಿವಸ್" ಕಾರ್ಯಕ್ರಮದಲ್ಲಿ ಭಾಗವಹಿಸಿದರು. ದೆಹಲಿಯಲ್ಲಿ ಯುವಕರ ಮಾರ್ಚ್-ಪಾಸ್ಟ್​​​ಗೆ ಹಸಿರು ನಿಶಾನೆ ತೋರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ವೀರ್ ಬಲ್ ದಿವಸ್ ಭಾರತೀಯತೆಯ ರಕ್ಷಣೆ ಹಂತದ ಸಂಕೇತವಾಗಿದೆ ಎಂದು ಹೇಳಿದರು.

ವೀರ್ ಬಾಲ್ ದಿವಸ್: ನಮ್ಮ ಪರಂಪರೆಯ ಬಗ್ಗೆ ಇತರ ದೇಶಗಳು ಗೌರವಿಸುತ್ತಿದೆ: ಪ್ರಧಾನಿ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on:Dec 26, 2023 | 12:53 PM

Share

ದೆಹಲಿ, ಡಿ.26: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು (ಡಿ.26) ದೆಹಲಿಯ ಭಾರತ್ ಮಂಟಪದಲ್ಲಿ “ವೀರ್ ಬಾಲ್ ದಿವಸ್” (Veer Baal Diwas) ಕಾರ್ಯಕ್ರಮದಲ್ಲಿ ಭಾಗವಹಿಸಿದರು. ದೆಹಲಿಯಲ್ಲಿ ಯುವಕರ ಮಾರ್ಚ್-ಪಾಸ್ಟ್​​​ಗೆ ಹಸಿರು ನಿಶಾನೆ ತೋರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ವೀರ್ ಬಲ್ ದಿವಸ್ ಭಾರತೀಯತೆಯ ರಕ್ಷಣೆ ಹಂತದ ಸಂಕೇತವಾಗಿದೆ ಎಂದು ಹೇಳಿದರು. ಈ ವರ್ಷ ಅಮೇರಿಕಾ, ಬ್ರಿಟನ್, ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಯುಎಇ ಮತ್ತು ಗ್ರೀಸ್ ಕೂಡ ‘ವೀರ್ ಬಾಲ್ ದಿವಸ್’ ಕಾರ್ಯಕ್ರಮಗಳನ್ನು ಆಯೋಜಿಸಿವೆ ಎಂದು ಹೇಳಿದರು.

ಭಾರತ ಅತಿ ಹೆಚ್ಚು ಯುವ ಶಕ್ತಿ ಹೊಂದಿರುವ ರಾಷ್ಟ್ರ ಮತ್ತು ದೇಶದ ಭವಿಷ್ಯದ ಅಭಿವೃದ್ಧಿಗೆ ಅವರ ಪಾತ್ರ ದೊಡ್ಡದು ಎಂದು ಹೇಳಿದರು. ನಾವು ಇಂದು ದೇಶದ ಅಮೃತ ಕಾಲದಲ್ಲಿದ್ದೇವೆ. ಅನೇಕ ವಿಚಾರಗಳಿಂದ ಭಾರತ ಭವಿಷ್ಯದ ಭವ್ಯವಾದ ಅಧ್ಯಾಯವನ್ನು ಬರೆಯುತ್ತಿವೆ. ನಮ್ಮ ದೇಶದಲ್ಲಿ ಅತಿ ಹೆಚ್ಚು ಯುವ ಸಂಖ್ಯೆ ಇದೆ. ಈ ಯುವ ಶಕ್ತಿ ಭಾರತವನ್ನು ಎತ್ತರಕ್ಕೆ ಕೊಂಡೊಯ್ಯಬಲ್ಲದು ಎಂದು ಹೇಳಿದರು.

ಇಲ್ಲಿ ಯುವ ಶಕ್ತಿಯ ಹುಟ್ಟು, ಪ್ರದೇಶಗಳನ್ನು ನೋಡದೆ ಕೆಲಸ ಮಾಡಬೇಕಿದೆ. ಹಾಗೂ ಪ್ರತಿಯೊಬ್ಬ ಯುವಕ-ಯುವತಿಯು ನಮ್ಮ ದೇಶದ ಅಭಿವೃದ್ಧಿಗಾಗಿ ಕೆಲಸ ಮಾಡಬೇಕಿದೆ ಎಂದು ಹೇಳಿದರು. ಈ ಕಲ್ಪನೆಯನ್ನು ನಮ್ಮ ಸರ್ಕಾರ ಯುವಶಕ್ತಿಗಳಿಗೆ ನೀಡಿದೆ. ಇನ್ನು ಇದನ್ನು ಮುನ್ನಡೆಸುವ ಕೆಲಸ ಈ ಯುವ ಸಮಾಜದ್ದು. ಹಾಗೂ ನಮ್ಮ ದೇಶದ ಆರ್ಥಿಕತೆಯಲ್ಲೂ ಬಲವರ್ಧನೆಯನ್ನು ಹೊಂದಿದೆ.

ನಮ್ಮ ಇಂದಿನ ಯುವ ಶಕ್ತಿ ಆರೋಗ್ಯವಾಗಿರಬೇಕು. ತಮ್ಮ ಫಿಟ್​​​ ಬಗ್ಗೆ ಹೆಚ್ಚು ಗಮನ ನೀಡಬೇಕು. ಕೆಟ್ಟ ಅಭ್ಯಾಸಗಳಲ್ಲಿ ತೋಡಗಿಸಿಕೊಳ್ಳಬಾರದು. ಆಧುನಿಕತೆ ಕಡೆಗೆ ಹೋಗಬೇಕು. ಆದರೆ ಅದರಲ್ಲಿ ಕೆಟ್ಟದು ಯಾವುದು. ಒಳ್ಳೆಯದು ಯಾವುದು ಎಂದು ತಿಳಿದುಕೊಳ್ಳಬೇಕು. ಡಿಜಿಟಲ್​​​​ ಬಗ್ಗೆ ಹೆಚ್ಚು ತಿಳಿದುಕೊಳ್ಳಬೇಕು. ಈ ಸಮಯದಲ್ಲಿ ಮಾದಕ ವಸ್ತುಗಳ ವಿರುದ್ಧ ಆಂದೋಲನ ನಡೆಸುವಂತೆ ಧಾರ್ಮಿಕ ಮುಖಂಡರು ಮತ್ತು ಸಾಮಾಜಿಕ ಸಂಘಟನೆಗಳಿಗೆ ಮೋದಿ ಮನವಿ ಮಾಡಿದರು.

ಇದನ್ನೂ ಓದಿ: ಸಬ್​ಕಾ ಸಾಥ್, ಸಬ್​ಕಾ ವಿಕಾಸ್ ಲೋಕ ಕಲ್ಯಾಣಕ್ಕೆ ಮಾರ್ಗದರ್ಶಿ ಸೂತ್ರವಾಗಬಹುದು: ಮೋದಿ

ಇಂದು ನಾವು ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಪಡುತ್ತಿರುವಾಗ ಜಗತ್ತು ನಮ್ಮ ನೋಡುತ್ತಿದೆ. ಹಾಗೂ ನಮ್ಮನ್ನು ಅನುಸರಿಸುತ್ತಿದ್ದಾರೆ. ಭಾರತ ಈಗ ತುಂಬಾ ವಿಭಿನ್ನವಾಗಿದೆ. ಇಂದಿನ ಭಾರತವು ತನ್ನದೇ ಆದ ಜನರು, ಸಾಮರ್ಥ್ಯ ಮತ್ತು ಸ್ಫೂರ್ತಿಗಳಲ್ಲಿ ವಿಶ್ವಾಸವನ್ನು ಹೊಂದಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಇತರ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

ಗುರು ಗೋಬಿಂದ್ ಸಿಂಗ್ ಅವರ ಪುತ್ರರಾದ ಸಾಹಿಬ್‌ಜಾದಾಸ್ ಬಾಬಾ ಜೊರಾವರ್ ಸಿಂಗ್ ಮತ್ತು ಬಾಬಾ ಫತೇ ಸಿಂಗ್ ಅವರ ಹುತಾತ್ಮರ ನೆನಪಿಗಾಗಿ ಡಿಸೆಂಬರ್ 26ನ್ನು ‘ವೀರ್ ಬಾಲ್ ದಿವಸ್’ ಎಂದು ಆಚರಿಸಲಾಗುವುದು ಎಂದು ಕಳೆದ ವರ್ಷ ಪ್ರಧಾನಿ ಮೋದಿ ಘೋಷಿಸಿದರು .

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:08 pm, Tue, 26 December 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ