AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Veer Gatha Project: ವೀರ ಗಾಥಾ ಯೋಜನೆ 3.0: 1.36 ಕೋಟಿಗೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಭಾಗಿ

Veer Gatha Project: ವೀರ್ ಗಾಥಾ ಯೋಜನೆಯ 3 ನೇ ಆವೃತ್ತಿಯಲ್ಲಿ 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 1.36 ಕೋಟಿಗೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು ಎಂದು ಶಿಕ್ಷಣ ಸಚಿವಾಲಯ ಪ್ರಕಟಣೆ ಹೊರಡಿಸಲಾಗಿದೆ. ಪ್ರತಿ ವಿಜೇತರಿಗೆ ರೂ. ಹತ್ತು ಸಾವಿರ ರೂ. ಬಹುಮಾನ ನೀಡಲಾಗುತ್ತಿದೆ. 

Veer Gatha Project: ವೀರ ಗಾಥಾ ಯೋಜನೆ 3.0: 1.36 ಕೋಟಿಗೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಭಾಗಿ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Oct 05, 2023 | 8:50 PM

Share

ಹೊಸದೆಹಲಿ, ಅಕ್ಟೋಬರ್​​ 05: ವೀರ್ ಗಾಥಾ ಯೋಜನೆಯ (Veer Gatha Project) 3 ನೇ ಆವೃತ್ತಿಯಲ್ಲಿ 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 1.36 ಕೋಟಿಗೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದಾರೆ. ಈ ಕುರಿತಾಗಿ ಶಿಕ್ಷಣ ಸಚಿವಾಲಯ ಪ್ರಕಟಣೆ ಹೊರಡಿಸಿದ್ದು, ಸಶಸ್ತ್ರ ಪಡೆ ಅಧಿಕಾರಿಗಳು, ಸಿಬ್ಬಂದಿಗಳ ಶೌರ್ಯ ಹಾಗೂ ತ್ಯಾಗವನ್ನು ವಿದ್ಯಾರ್ಥಿಗಳು ಕವಿತೆಗಳು, ವರ್ಣಚಿತ್ರಗಳು, ಪ್ರಬಂಧಗಳು ಮತ್ತು ವಿಡಿಯೋಗಳ ಮುಖಾಂತರ ಗೌರವಿಸಿದ್ದಾರೆ ಎಂದು ತಿಳಿಸಿದೆ.

ವೀರ್ ಗಾಥಾ ಯೋಜನೆಯನ್ನು 2021 ರಲ್ಲಿ ಶೌರ್ಯ ಪ್ರಶಸ್ತಿಗಳ ಪೋರ್ಟಲ್ (ಜಿಎಪಿ) ಅಡಿಯಲ್ಲಿ ಸ್ಥಾಪಿಸಲಾಗಿದೆ. ಇದು ಶೌರ್ಯ ಪ್ರಶಸ್ತಿ ಪುರಸ್ಕೃತರ ವಿವರಗಳನ್ನು ಮತ್ತು ಅವರ ಧೈರ್ಯಶಾಲಿ ಜೀವನ ಕಥೆಗಳನ್ನು ವಿದ್ಯಾರ್ಥಿಗಳಲ್ಲಿ ದೇಶಭಕ್ತಿಯ ಉತ್ಸಾಹವನ್ನು ಹೆಚ್ಚಿಸಲು ಮತ್ತು ಹುಟ್ಟುಹಾಕುವ ಗುರಿಯನ್ನು ಹೊಂದಿದೆ. ಜೊತೆಗೆ ನಾಗರಿಕ ಪ್ರಜ್ಞೆಯ ಮೌಲ್ಯಗಳನ್ನು ಸಹ ಹೊಂದಿದೆ. ಶೌರ್ಯ ಪ್ರಶಸ್ತಿ ವಿಜೇತರ ಆಧಾರದ ಮೇಲೆ ಸೃಜನಶೀಲ ಯೋಜನೆಗಳು, ಚಟುವಟಿಕೆಗಳನ್ನು ಮಾಡಲು ಶಾಲಾ ವಿದ್ಯಾರ್ಥಿಗಳಿಗೆ ವೇದಿಕೆಯನ್ನು ಒದಗಿಸುವ ಉದ್ದೇಶ ವೀರ್ ಗಾಥಾ ಯೋಜನೆ ಹೊಂದಿದೆ.

ಇದನ್ನೂ ಓದಿ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ಎರಡು ಮನೆಗಳಿಗೆ ಬೆಂಕಿ

ವೀರ್ ಗಾಥಾ ಯೋಜನೆಯ ಎರಡು ಆವೃತ್ತಿಗಳನ್ನು ಈಗಾಗಲೇ ಕ್ರಮವಾಗಿ 2021 ಮತ್ತು 2022 ರಲ್ಲಿ ನಡೆಸಲಾಗಿದೆ. ವೀರ್ ಗಾಥಾ ಯೋಜನೆ 3.0 ಅಡಿಯಲ್ಲಿ, ಈ ಕೆಳಗಿನ ಚಟುವಟಿಕೆಗಳನ್ನು ಇಲ್ಲಿಯವರೆಗೆ ನಡೆಸಲಾಗಿದೆ.

ಶಾಲಾ ಹಂತದಲ್ಲಿನ ಚಟುವಟಿಕೆಗಳು

ಶಾಲೆಗಳಲ್ಲಿ ವಿವಿಧ ಯೋಜನೆಗಳು, ಚಟುವಟಿಕೆಗಳನ್ನು ನಡೆಸಲಾಗಿದೆ. ಪ್ರತಿ ಶಾಲೆಯಿಂದ ಒಟ್ಟು 04 ಅತ್ಯುತ್ತಮ ನಮೂದುಗಳನ್ನು MyGov ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಏಕಕಾಲದಲ್ಲಿ, ನಮ್ಮ ದೇಶದ ಶೌರ್ಯ ಪ್ರಶಸ್ತಿ ವಿಜೇತರ ಬಗ್ಗೆ ಶಾಲಾ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು, ರಕ್ಷಣಾ ಸಚಿವಾಲಯವು ತನ್ನ ಕ್ಷೇತ್ರ ಸಂಸ್ಥೆಗಳು ಅಥವಾ ಸೇನೆ, ನೌಕಾಪಡೆ, ವಾಯುಪಡೆಯ ಮೂಲಕ ಶಾಲೆಗಳಿಗೆ ವರ್ಚುವಲ್​, ಮುಖಾಮುಖಿ ಜಾಗೃತಿ ಕಾರ್ಯಕ್ರಮಗಳು, ಅಧಿವೇಶನಗಳನ್ನು ಆಯೋಜಿಸಿತ್ತು.

ಇದನ್ನೂ ಓದಿ: 100 ರೂ. ತುಂಬಾ ಚಿಕ್ಕ ಲಂಚ: ಭ್ರಷ್ಟಾಚಾರ ಆರೋಪ ಹೊತ್ತ ಅಧಿಕಾರಿಗೆ ಬಾಂಬೆ ಹೈಕೋರ್ಟ್​ ರಿಲೀಫ್

ವೀರ್​ ಗಾಥಾ ಯೋಜನೆ ಮೊದಲ ಆವೃತ್ತಿಯಲ್ಲಿ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರೆ, 19 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಎರಡನೇ ಆವೃತ್ತಿ ಭಾಗವಹಿಸಿದ್ದರು.

ವೀರ್ ಗಾಥಾ ಯೋಜನೆಯ ಮೂರನೇ ಆವೃತ್ತಿಯಲ್ಲಿ 100 ವಿಜೇತರನ್ನು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಮಾಡಲಾಗುತ್ತದೆ. ಶಿಕ್ಷಣ ಸಚಿವಾಲಯ ಮತ್ತು ನವದೆಹಲಿಯ ರಕ್ಷಣಾ ಸಚಿವಾಲಯವು ಜಂಟಿಯಾಗಿ ಮಾಡಲಾಗುತ್ತದೆ ವಿಜೇತರನ್ನು ಸನ್ಮಾನಿಸಲಿದೆ. ಜೊತೆಗೆ ಪ್ರತಿ ವಿಜೇತರಿಗೆ ರೂ. ಹತ್ತು ಸಾವಿರ ರೂ. ಬಹುಮಾನ ನೀಡಲಾಗುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!