AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೋನಿ ತೋಟದಲ್ಲಿ ಬೆಳೆದ ಕ್ಯಾಬೇಜ್​, ಟೊಮ್ಯಾಟೋಕ್ಕೆ ಭರ್ಜರಿ ಬೇಡಿಕೆ..; ಶೀಘ್ರವೇ ದುಬೈಗೆ ರಫ್ತು!

ಧೋನಿ ಫಾರ್ಮ್​ಹೌಸ್​ನ ತಾಜಾ ತರಕಾರಿ, ಹಣ್ಣುಗಳನ್ನು ರಾಂಚಿಯಿಂದ ಯುಎಇಗೆ ಕಳಿಸುವ ಹೊಣೆಯನ್ನು ಝಾರ್ಕಂಡ್ ಕೃಷಿ ಇಲಾಖೆ ವಹಿಸಿಕೊಂಡಿದ್ದಾಗಿಯೂ ಮಾಹಿತಿ ಲಭ್ಯವಾಗಿದ್ದು, ಕೆಲವು ಮಾಧ್ಯಮಗಳೂ ವರದಿ ಮಾಡಿವೆ.

ಧೋನಿ ತೋಟದಲ್ಲಿ ಬೆಳೆದ ಕ್ಯಾಬೇಜ್​, ಟೊಮ್ಯಾಟೋಕ್ಕೆ ಭರ್ಜರಿ ಬೇಡಿಕೆ..; ಶೀಘ್ರವೇ ದುಬೈಗೆ ರಫ್ತು!
ಮಹೇಂದ್ರ ಸಿಂಗ್ ಧೋನಿ ಫಾರ್ಮ್​ಹೌಸ್​
Follow us
Lakshmi Hegde
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 04, 2021 | 7:59 PM

ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ ಒಂದಲ್ಲ ಒಂದು ಟ್ರೆಂಡ್​ ಸೃಷ್ಟಿಸುತ್ತಲೇ ಇದ್ದಾರೆ. ಮೊದಲು ಅವರ ಹೇರ್​ಸ್ಟೈಲ್​ ಟ್ರೆಂಡ್ ಆಗಿತ್ತು. ನಂತರ ಅವರ ಆಟದ ವಿಭಿನ್ನ ಶೈಲಿಯಿಂದ ಸುದ್ದಿಯಾದರು. ಹಾಗೇ.. ಆಗಸ್ಟ್ 15ರಂದೇ ನಿವೃತ್ತಿ ಘೋಷಿಸಿ ಮತ್ತೊಮ್ಮೆ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಸೃಷ್ಟಿಸಿದರು.

ಇದೀಗ ಇನ್ನೊಂದು ಕಾರಣಕ್ಕೆ ಎಂ.ಎಸ್​. ಧೋನಿ ಮತ್ತೆ ಸುದ್ದಿಯಾಗಿದ್ದಾರೆ. ನಿವೃತ್ತಿ ಬಳಿಕ ಧೋನಿ ರಾಂಚಿಯ ತಮ್ಮ ಫಾರ್ಮ್​ಹೌಸ್​ನಲ್ಲಿ ಸಾವಯವ ಕೃಷಿಯಲ್ಲಿ ತೊಡಗಿಕೊಂಡಿರುವುದು ಹಳೇ ಸುದ್ದಿ. ಆದರೆ ಈಗ ಅವರು ಬೆಳೆದ ತರಕಾರಿ ಶೀಘ್ರವೇ ದುಬೈಗೆ ರಫ್ತಾಗಲಿದೆ ಎಂಬುದು ಹೊಸ ಸುದ್ದಿ.. !

ರಾಂಚಿಯಲ್ಲಿ 43 ಎಕರೆ ಪ್ರದೇಶದಲ್ಲಿ ಫಾರ್ಮ್​ಹೌಸ್ ಹೊಂದಿರುವ ಧೋನಿ, ಸುಮಾರು 10 ಎಕರೆ ಜಾಗದಲ್ಲಿ ವಿವಿಧ ಹಣ್ಣು, ತರಕಾರಿಗಳನ್ನು ಬೆಳೆದಿದ್ದಾರೆ. ಅದರಲ್ಲಿ ಕ್ಯಾಬೇಜ್​, ಟೊಮ್ಯಾಟೋ, ಬಟಾಣಿ, ಕೋಸುಗಡ್ಡೆ ಸ್ಟ್ರಾಬೆರಿಹಣ್ಣು, ಪಪ್ಪಾಯಾಗಳು ಪ್ರಮುಖವಾಗಿವೆ. ಧೋನಿ ಫಾರ್ಮ್​ಹೌಸ್​ನಲ್ಲಿ ಬೆಳೆದ ಕ್ಯಾಬೇಜ್, ಬಟಾಣಿ ಮತ್ತು ಟೊಮ್ಯಾಟೋಗಳಿಗೆ ರಾಂಚಿ ಸ್ಥಳೀಯ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಇದೆ.

ಜಾಗತಿಕ ಮಾರುಕಟ್ಟೆ ಪ್ರವೇಶಕ್ಕೆ ಸಿದ್ಧತೆ ಇಷ್ಟುದಿನ ಸ್ಥಳೀಯವಾಗಿ ತಮ್ಮ ತರಕಾರಿ, ಹಣ್ಣು ಮಾರಾಟ ಮಾಡುತ್ತಿದ್ದ ಧೋನಿ ಇದೀಗ ಅಂತಾರಾಷ್ಟ್ರೀಯ ಮಾರುಕಟ್ಟೆ ಪ್ರವೇಶ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ ಎಂಬ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಧೋನಿ ಬೆಳೆದ ಸಾವಯವ ತರಕಾರಿಗಳು ದುಬೈಗೆ ರಫ್ತಾಗಲಿವೆ.. ಫಾರ್ಮ್​ ಫ್ರೆಶ್​ ಏಜೆನ್ಸಿ (Farm Fresh Agency) ಧೋನಿ ಫಾರ್ಮ್​ಹೌಸ್​ನ ತರಕಾರಿ, ಹಣ್ಣುಗಳನ್ನು ಯುಎಇದಲ್ಲಿ ಮಾರಾಟ ಮಾಡಲು ಒಪ್ಪಿಕೊಂಡಿದೆ. ಬರೀ ದುಬೈ ಮಾತ್ರವಲ್ಲ.. ಇನ್ನಿತರ ಗಲ್ಫ್​ ರಾಷ್ಟ್ರಗಳಿಗೂ ಮಾರಾಟ ಮಾಡುವ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯೊಂದು ವೈರಲ್ ಆಗುತ್ತಿದೆ.

ಅಷ್ಟೇ ಅಲ್ಲ, ಧೋನಿ ಫಾರ್ಮ್​ಹೌಸ್​ನ ತಾಜಾ ತರಕಾರಿ, ಹಣ್ಣುಗಳನ್ನು ರಾಂಚಿಯಿಂದ ಯುಎಇಗೆ ಕಳಿಸುವ ಹೊಣೆಯನ್ನು ಝಾರ್ಕಂಡ್ ಕೃಷಿ ಇಲಾಖೆ ವಹಿಸಿಕೊಂಡಿದ್ದಾಗಿಯೂ ಮಾಹಿತಿ ಲಭ್ಯವಾಗಿದ್ದು, ಕೆಲವು ಮಾಧ್ಯಮಗಳೂ ವರದಿ ಮಾಡಿವೆ. ಮಹೇಂದ್ರ ಸಿಂಗ್ ಧೋನಿ ಫಾರ್ಮ್​ ಹೌಸ್​ ರಾಂಚಿಯ ಸೆಂಬೋ ಗ್ರಾಮದ ರಿಂಗ್​ರೋಡ್​ನಲ್ಲಿ ಇದೆ.

India vs Australia Test Series | ಬ್ರಿಸ್ಬೇನ್​ನಲ್ಲಿ ಟೀಮ್ ಇಂಡಿಯಾ ಆಡಲು ನಿರಾಕರಿಸಿರುವ ಬಗ್ಗೆ ಅಧಿಕೃತ ಮಾಹಿತಿಯಿಲ್ಲ: ಹಾಕ್ಲೀ

ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್