ಉತ್ತರಾಖಂಡದ ನೈನಿತಾಲ್​ನಲ್ಲಿ ಕಂದಕಕ್ಕೆ ಉರುಳಿದ ವಾಹನ, 8 ಮಂದಿ ಸಾವು

ಉತ್ತರಾಖಂಡದ ನೈನಿತಾಲ್ ಜಿಲ್ಲೆಯಲ್ಲಿ ವಾಹನವು ಕಮರಿಗೆ ಉರುಳಿದ ಪರಿಣಾಮ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ನೈನಿತಾಲ್‌ನ ಬೇತಾಲ್‌ಘಾಟ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಉತ್ತರಾಖಂಡದ ನೈನಿತಾಲ್​ನಲ್ಲಿ ಕಂದಕಕ್ಕೆ ಉರುಳಿದ ವಾಹನ, 8 ಮಂದಿ ಸಾವು
ಅಪಘಾತ

Updated on: Apr 09, 2024 | 10:01 AM

ಉತ್ತರಾಖಂಡದ ನೈನಿತಾಲ್ ಜಿಲ್ಲೆಯಲ್ಲಿ ವಾಹನವು ಕಮರಿಗೆ ಉರುಳಿದ ಪರಿಣಾಮ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ನೈನಿತಾಲ್‌ನ ಬೇತಾಲ್‌ಘಾಟ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಮೃತರನ್ನು ವಿಶ್ರಮ್ ಚೌಧರಿ (50), ಧೀರಜ್ (45), ಅನಂತರಾಮ್ ಚೌಧರಿ (40), ವಿನೋದ್ ಚೌಧರಿ (38), ಉದಯರಾಮ್ ಚೌಧರಿ (55), ತಿಲಕ್ ಚೌಧರಿ (45) ಗೋಪಾಲ್ ಬಸ್ನಿಯಾತ್ (60) ಮತ್ತು ರಾಜೇಂದ್ರ ಕುಮಾರ್ ಎಂದು ಗುರುತಿಸಲಾಗಿದೆ.

ಮೃತರಲ್ಲಿ ಕುಮಾರ್ ಹೊರತುಪಡಿಸಿ ಉಳಿದವರು ನೇಪಾಳದವರು. ಗಾಯಗೊಂಡವರನ್ನು ಶಾಂತಿ ಚೌಧರಿ, ಛೋಟು ಚೌಧರಿ ಮತ್ತು ಪ್ರೇಮ್ ಬಹದ್ದೂರ್ ಎಂದು ಗುರುತಿಸಲಾಗಿದೆ.

ಮತ್ತಷ್ಟು ಓದಿ: ಬೆಳಗಾವಿಯಲ್ಲಿ ಹೆಚ್ಚಾದ ಅಪಘಾತ ಪ್ರಕರಣಗಳು; ಕೇವಲ ಮೂರು ದಿನದಲ್ಲಿ 25 ಸಾವು

ರಾತ್ರಿ 10.30 ರ ಸುಮಾರಿಗೆ ಬಸ್ಕೋಟ್ ಗ್ರಾಮದ ನಿವಾಸಿಯಾದ ಚಾಲಕ ರಾಜೇಂದ್ರ ಕುಮಾರ್ ವಾಹನದ ನಿಯಂತ್ರಣ ಕಳೆದುಕೊಂಡ ಪರಿಣಾಮ ವಾಹನ 200 ಮೀಟರ್ ಕಮರಿಗೆ ಉರುಳಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:06 am, Tue, 9 April 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us