AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲು ನಿಲ್ದಾಣದಲ್ಲಿ ನಿಲುಗಡೆ ಮರೆತ ನಂತರ ವೇನಾಡ್ ಎಕ್ಸ್​​ಪ್ರೆಸ್​​ನ್ನು 700 ಮೀಟರ್ ರಿವರ್ಸ್ ಚಲಾಯಿಸಿದ ಲೋಕೋ ಪೈಲಟ್

ಮಾವೇಲಿಕ್ಕರ ಮತ್ತು ಚೆಂಗನ್ನೂರು ನಿಲ್ದಾಣಗಳ ನಡುವೆ ಇರುವ ಸಣ್ಣ ನಿಲ್ದಾಣವಾದ ಚೆರಿಯನಾಡ್ ನಿಲ್ದಾಣದಲ್ಲಿ ಬೆಳಿಗ್ಗೆ 7.45 ರ ಸುಮಾರಿಗೆ ಈ ಘಟನೆ ನಡೆದಿದೆ. ರೈಲ್ವೆ ಅಧಿಕಾರಿಗಳ ಪ್ರಕಾರ, ಪ್ರಯಾಣಿಕರಿಂದ ಯಾವುದೇ ದೂರುಗಳು ಬಂದಿಲ್ಲ

ರೈಲು ನಿಲ್ದಾಣದಲ್ಲಿ ನಿಲುಗಡೆ ಮರೆತ ನಂತರ ವೇನಾಡ್ ಎಕ್ಸ್​​ಪ್ರೆಸ್​​ನ್ನು 700 ಮೀಟರ್ ರಿವರ್ಸ್ ಚಲಾಯಿಸಿದ ಲೋಕೋ ಪೈಲಟ್
ವೇನಾಡ್ ಎಕ್ಸ್ ಪ್ರೆಸ್
ರಶ್ಮಿ ಕಲ್ಲಕಟ್ಟ
|

Updated on: May 22, 2023 | 3:09 PM

Share

ಪ್ರಯಾಣಿಕರು ಹತ್ತಲು ಕಾಯುತ್ತಿದ್ದ ರೈಲು ನಿಲ್ದಾಣದಲ್ಲಿ ನಿಲುಗಡೆ ಮಿಸ್ ಮಾಡಿದ ಕೇರಳದ (Kerala) ರೈಲೊಂದು 500 ಮೀಟರ್‌ಗೂ ಹೆಚ್ಚು ಹಿಮ್ಮುಖವಾಗಿ ಚಲಿಸಿದ ಘಟನೆ ನಡೆದಿದೆ. ಕೇರಳದ ಆಲಪ್ಪುಳ (Alappuzha) ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಶೋರನೂರ್‌ಗೆ ತೆರಳುತ್ತಿದ್ದ ವೇನಾಡ್ ಎಕ್ಸ್‌ಪ್ರೆಸ್‌ನ(Venad Express) ಲೋಕೋ ಪೈಲಟ್, ಚೆರಿಯನಾಡ್ ಎಂಬ ಸಣ್ಣ ರೈಲು ನಿಲ್ದಾಣದಲ್ಲಿ ನಿಲುಗಡೆ ಮಾಡಲು ಮರೆತಿದ್ದಾರೆ. ಈ ತಪ್ಪು ಅರಿವಿಗೆ ಬಂದ ಕೂಡಲೇ ಲೋಕೋ ಪೈಲಟ್ ನಿಲ್ದಾಣದಲ್ಲಿ ಕಾಯುತ್ತಿದ್ದ ಪ್ರಯಾಣಿಕರಿಗಾಗಿ ರೈಲನ್ನು 700 ಮೀಟರ್‌ ರಿವರ್ಸ್ ಚಲಾಯಿಸಿದ್ದಾರೆ.

ಮಾವೇಲಿಕ್ಕರ ಮತ್ತು ಚೆಂಗನ್ನೂರು ನಿಲ್ದಾಣಗಳ ನಡುವೆ ಇರುವ ಸಣ್ಣ ನಿಲ್ದಾಣವಾದ ಚೆರಿಯನಾಡ್ ನಿಲ್ದಾಣದಲ್ಲಿ ಬೆಳಿಗ್ಗೆ 7.45 ರ ಸುಮಾರಿಗೆ ಈ ಘಟನೆ ನಡೆದಿದೆ. ರೈಲ್ವೆ ಅಧಿಕಾರಿಗಳ ಪ್ರಕಾರ, ಪ್ರಯಾಣಿಕರಿಂದ ಯಾವುದೇ ದೂರುಗಳು ಬಂದಿಲ್ಲ. ಏಕೆಂದರೆ ಅವರಲ್ಲಿ ಯಾರೂ ಯಾವುದೇ ಅನಾನುಕೂಲತೆಯನ್ನು ಎದುರಿಸಲಿಲ್ಲ. ರೈಲು ಸರಿಯಾದ ಸಮಯಕ್ಕೆ ತನ್ನ ಗಮ್ಯಸ್ಥಾನವನ್ನು ತಲುಪಿತು.

ಇದನ್ನೂ ಓದಿ: ಕೇಂದ್ರ ಸರ್ಕಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಅವಮಾನಿಸಿದೆ: ಸರಣಿ ಟ್ವೀಟ್ ಮೂಲಕ ಕಿಡಿಕಾರಿದ ಖರ್ಗೆ

ಚೆರಿಯನಾಡು ನಿಲ್ದಾಣದಲ್ಲಿ ಸಿಗ್ನಲ್ ಅಥವಾ ಸ್ಟೇಷನ್ ಮಾಸ್ಟರ್ ಇಲ್ಲ. ಹಾಗಾಗಿ ಲೊಕೊ ಪೈಲಟ್‌ನ ನಿಲ್ಲಿಸದೇ ಹೋಗಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲೋಕೋ ಪೈಲಟ್‌ಗಳಿಂದ ವಿವರಣೆ ಕೇಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ