AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲು ನಿಲ್ದಾಣದಲ್ಲಿ ನಿಲುಗಡೆ ಮರೆತ ನಂತರ ವೇನಾಡ್ ಎಕ್ಸ್​​ಪ್ರೆಸ್​​ನ್ನು 700 ಮೀಟರ್ ರಿವರ್ಸ್ ಚಲಾಯಿಸಿದ ಲೋಕೋ ಪೈಲಟ್

ಮಾವೇಲಿಕ್ಕರ ಮತ್ತು ಚೆಂಗನ್ನೂರು ನಿಲ್ದಾಣಗಳ ನಡುವೆ ಇರುವ ಸಣ್ಣ ನಿಲ್ದಾಣವಾದ ಚೆರಿಯನಾಡ್ ನಿಲ್ದಾಣದಲ್ಲಿ ಬೆಳಿಗ್ಗೆ 7.45 ರ ಸುಮಾರಿಗೆ ಈ ಘಟನೆ ನಡೆದಿದೆ. ರೈಲ್ವೆ ಅಧಿಕಾರಿಗಳ ಪ್ರಕಾರ, ಪ್ರಯಾಣಿಕರಿಂದ ಯಾವುದೇ ದೂರುಗಳು ಬಂದಿಲ್ಲ

ರೈಲು ನಿಲ್ದಾಣದಲ್ಲಿ ನಿಲುಗಡೆ ಮರೆತ ನಂತರ ವೇನಾಡ್ ಎಕ್ಸ್​​ಪ್ರೆಸ್​​ನ್ನು 700 ಮೀಟರ್ ರಿವರ್ಸ್ ಚಲಾಯಿಸಿದ ಲೋಕೋ ಪೈಲಟ್
ವೇನಾಡ್ ಎಕ್ಸ್ ಪ್ರೆಸ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 22, 2023 | 3:09 PM

Share

ಪ್ರಯಾಣಿಕರು ಹತ್ತಲು ಕಾಯುತ್ತಿದ್ದ ರೈಲು ನಿಲ್ದಾಣದಲ್ಲಿ ನಿಲುಗಡೆ ಮಿಸ್ ಮಾಡಿದ ಕೇರಳದ (Kerala) ರೈಲೊಂದು 500 ಮೀಟರ್‌ಗೂ ಹೆಚ್ಚು ಹಿಮ್ಮುಖವಾಗಿ ಚಲಿಸಿದ ಘಟನೆ ನಡೆದಿದೆ. ಕೇರಳದ ಆಲಪ್ಪುಳ (Alappuzha) ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಶೋರನೂರ್‌ಗೆ ತೆರಳುತ್ತಿದ್ದ ವೇನಾಡ್ ಎಕ್ಸ್‌ಪ್ರೆಸ್‌ನ(Venad Express) ಲೋಕೋ ಪೈಲಟ್, ಚೆರಿಯನಾಡ್ ಎಂಬ ಸಣ್ಣ ರೈಲು ನಿಲ್ದಾಣದಲ್ಲಿ ನಿಲುಗಡೆ ಮಾಡಲು ಮರೆತಿದ್ದಾರೆ. ಈ ತಪ್ಪು ಅರಿವಿಗೆ ಬಂದ ಕೂಡಲೇ ಲೋಕೋ ಪೈಲಟ್ ನಿಲ್ದಾಣದಲ್ಲಿ ಕಾಯುತ್ತಿದ್ದ ಪ್ರಯಾಣಿಕರಿಗಾಗಿ ರೈಲನ್ನು 700 ಮೀಟರ್‌ ರಿವರ್ಸ್ ಚಲಾಯಿಸಿದ್ದಾರೆ.

ಮಾವೇಲಿಕ್ಕರ ಮತ್ತು ಚೆಂಗನ್ನೂರು ನಿಲ್ದಾಣಗಳ ನಡುವೆ ಇರುವ ಸಣ್ಣ ನಿಲ್ದಾಣವಾದ ಚೆರಿಯನಾಡ್ ನಿಲ್ದಾಣದಲ್ಲಿ ಬೆಳಿಗ್ಗೆ 7.45 ರ ಸುಮಾರಿಗೆ ಈ ಘಟನೆ ನಡೆದಿದೆ. ರೈಲ್ವೆ ಅಧಿಕಾರಿಗಳ ಪ್ರಕಾರ, ಪ್ರಯಾಣಿಕರಿಂದ ಯಾವುದೇ ದೂರುಗಳು ಬಂದಿಲ್ಲ. ಏಕೆಂದರೆ ಅವರಲ್ಲಿ ಯಾರೂ ಯಾವುದೇ ಅನಾನುಕೂಲತೆಯನ್ನು ಎದುರಿಸಲಿಲ್ಲ. ರೈಲು ಸರಿಯಾದ ಸಮಯಕ್ಕೆ ತನ್ನ ಗಮ್ಯಸ್ಥಾನವನ್ನು ತಲುಪಿತು.

ಇದನ್ನೂ ಓದಿ: ಕೇಂದ್ರ ಸರ್ಕಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಅವಮಾನಿಸಿದೆ: ಸರಣಿ ಟ್ವೀಟ್ ಮೂಲಕ ಕಿಡಿಕಾರಿದ ಖರ್ಗೆ

ಚೆರಿಯನಾಡು ನಿಲ್ದಾಣದಲ್ಲಿ ಸಿಗ್ನಲ್ ಅಥವಾ ಸ್ಟೇಷನ್ ಮಾಸ್ಟರ್ ಇಲ್ಲ. ಹಾಗಾಗಿ ಲೊಕೊ ಪೈಲಟ್‌ನ ನಿಲ್ಲಿಸದೇ ಹೋಗಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲೋಕೋ ಪೈಲಟ್‌ಗಳಿಂದ ವಿವರಣೆ ಕೇಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್