AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಪಡೆದ ಇಬ್ಬರು ಮೃತಪಟ್ಟಿದ್ದಾರೆ, ಆದರೆ ಇದಕ್ಕೆ ಔಷಧ ಕಾರಣವಲ್ಲ: ಕೇಂದ್ರ ಸರ್ಕಾರ

ಲಸಿಕೆಯಿಂದ ಅನಾರೋಗ್ಯಕ್ಕೆ ತುತ್ತಾದ 580 ಜನರ ಮೇಲೆ ನಿಗಾ ಇಡಲಾಗಿದೆ. 7 ಜನರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಸಿಕೆ ಪಡೆದ ಇಬ್ಬರು ಮೃತಪಟ್ಟಿದ್ದಾರೆ. ಆದರೆ, ಲಸಿಕೆ ತೆಗೆದುಕೊಂಡಿದ್ದು ಇದಕ್ಕೆ ಕಾರಣವಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ಕೊರೊನಾ ಲಸಿಕೆ ಪಡೆದ ಇಬ್ಬರು ಮೃತಪಟ್ಟಿದ್ದಾರೆ, ಆದರೆ ಇದಕ್ಕೆ ಔಷಧ ಕಾರಣವಲ್ಲ: ಕೇಂದ್ರ ಸರ್ಕಾರ
ಕೊವಿಶೀಲ್ಡ್​ ಲಸಿಕೆ
ರಾಜೇಶ್ ದುಗ್ಗುಮನೆ
| Edited By: |

Updated on: Jan 18, 2021 | 9:46 PM

Share

ನವದೆಹಲಿ: ಅಗತ್ಯ ಸೇವೆ ನೀಡುವವರಿಗೆ ಕೊರೊನಾ ವೈರಸ್​ ಲಸಿಕೆ ನೀಡುವ ಪ್ರಕ್ರಿಯೆ ಆರಂಭಗೊಂಡು ಮೂರು ದಿನ ಕಳೆದಿದೆ. ಇಲ್ಲಿಯವರೆಗೆ ದೇಶದಲ್ಲಿ ಒಟ್ಟು 3.80 ಲಕ್ಷ ಜನರಿಗೆ ಕೊರೊನಾ ಲಸಿಕೆ ನೀಡಲಾಗಿದ್ದು, 580 ಜನರಿಗೆ ಸಮಸ್ಯೆ ಉಂಟಾಗಿದೆ ಎಂದು ಸರ್ಕಾರ ತಿಳಿಸಿದೆ.

ಲಸಿಕೆಯಿಂದ ಅನಾರೋಗ್ಯಕ್ಕೆ ತುತ್ತಾದ 580 ಜನರ ಮೇಲೆ ನಿಗಾ ಇಡಲಾಗಿದೆ. 7 ಜನರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಸಿಕೆ ಪಡೆದ ಇಬ್ಬರು ಮೃತಪಟ್ಟಿದ್ದಾರೆ. ಆದರೆ, ಲಸಿಕೆ ತೆಗೆದುಕೊಂಡಿದ್ದು ಇದಕ್ಕೆ ಕಾರಣವಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ಉತ್ತರ ಪ್ರದೇಶದ ಮೊರದಾಬಾದ್​ನಲ್ಲಿ ಭಾನುವಾರ ರಾತ್ರಿ ಮಹಿಪಾಲ್​ ಸಿಂಗ್ ಎಂಬುವವರು​ ಮೃತಪಟ್ಟಿದ್ದಾರೆ. ಶನಿವಾರ ಇವರಿಗೆ ಕೊರೊನಾ ಲಸಿಕೆ ನೀಡಲಾಗಿತ್ತು. ಆದರೆ, ಕೊರೊನಾ ವೈರಸ್​ ಔಷಧ ಪಡೆದಿದ್ದಕ್ಕೇ ಆತ ಮೃತಪಟ್ಟಿದ್ದಾನೆ ಎನ್ನುವುದು ಸುಳ್ಳು. ಆತನಿಗೆ ಹೃದಯಾಘಾತವಾಗಿತ್ತು ಎಂದು ವೈದ್ಯರು ತಿಳಿಸಿದ್ದಾರೆ.

ಬಳ್ಳಾರಿಯ 43 ವರ್ಷದ ವ್ಯಕ್ತಿ ಕೊರೊನಾ ಲಸಿಕೆ ಪಡೆದ ನಂತರ ಮೃತಪಟ್ಟಿದ್ದರು. ಅವರು ಮೃತಪಡಲು ಕಾರಣ ಹೃದಯಾಘಾತ ಎಂದು ಸರ್ಕಾರ ತಿಳಿಸಿದೆ. ಇನ್ನು, ಕೊರೊನಾ ಔಷಧ ತೆಗೆದುಕೊಂಡ ನಂತರ ತೀವ್ರ ಆರೋಗ್ಯ ಸಮಸ್ಯೆಯಿಂದ ದೆಹಲಿಯಲ್ಲಿ ಮೂವರು, ಕರ್ನಾಟಕದಲ್ಲಿ ಇಬ್ಬರು, ಉತ್ತರಾಖಂಡ ಹಾಗೂ ಚತ್ತೀಸ್​ಗಢದಲ್ಲಿ ಒಬ್ಬರು ಆಸ್ಪತ್ರೆ ಸೇರಿದ್ದಾರೆ. ಈ ಪೈಕಿ ಮೂವರು ಆಸ್ಪತ್ರೆಯಿಂದ ಹೊರ ಬಂದಿದ್ದಾರೆ ಎಂದು ಕೇಂದ್ರ ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

‘ಥಟ್​ ಅಂತ’ ಕೊರೊನಾ ಲಸಿಕೆ ಹಾಕಿಸಿಕೊಂಡು, ಧೈರ್ಯ ತುಂಬಿದ ಡಾ. ಸೋಮೇಶ್ವರ ನಾರಪ್ಪ!

Follow Us
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?