Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಪಡೆದ ಇಬ್ಬರು ಮೃತಪಟ್ಟಿದ್ದಾರೆ, ಆದರೆ ಇದಕ್ಕೆ ಔಷಧ ಕಾರಣವಲ್ಲ: ಕೇಂದ್ರ ಸರ್ಕಾರ

ಲಸಿಕೆಯಿಂದ ಅನಾರೋಗ್ಯಕ್ಕೆ ತುತ್ತಾದ 580 ಜನರ ಮೇಲೆ ನಿಗಾ ಇಡಲಾಗಿದೆ. 7 ಜನರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಸಿಕೆ ಪಡೆದ ಇಬ್ಬರು ಮೃತಪಟ್ಟಿದ್ದಾರೆ. ಆದರೆ, ಲಸಿಕೆ ತೆಗೆದುಕೊಂಡಿದ್ದು ಇದಕ್ಕೆ ಕಾರಣವಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ಕೊರೊನಾ ಲಸಿಕೆ ಪಡೆದ ಇಬ್ಬರು ಮೃತಪಟ್ಟಿದ್ದಾರೆ, ಆದರೆ ಇದಕ್ಕೆ ಔಷಧ ಕಾರಣವಲ್ಲ: ಕೇಂದ್ರ ಸರ್ಕಾರ
ಕೊವಿಶೀಲ್ಡ್​ ಲಸಿಕೆ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 18, 2021 | 9:46 PM

ನವದೆಹಲಿ: ಅಗತ್ಯ ಸೇವೆ ನೀಡುವವರಿಗೆ ಕೊರೊನಾ ವೈರಸ್​ ಲಸಿಕೆ ನೀಡುವ ಪ್ರಕ್ರಿಯೆ ಆರಂಭಗೊಂಡು ಮೂರು ದಿನ ಕಳೆದಿದೆ. ಇಲ್ಲಿಯವರೆಗೆ ದೇಶದಲ್ಲಿ ಒಟ್ಟು 3.80 ಲಕ್ಷ ಜನರಿಗೆ ಕೊರೊನಾ ಲಸಿಕೆ ನೀಡಲಾಗಿದ್ದು, 580 ಜನರಿಗೆ ಸಮಸ್ಯೆ ಉಂಟಾಗಿದೆ ಎಂದು ಸರ್ಕಾರ ತಿಳಿಸಿದೆ.

ಲಸಿಕೆಯಿಂದ ಅನಾರೋಗ್ಯಕ್ಕೆ ತುತ್ತಾದ 580 ಜನರ ಮೇಲೆ ನಿಗಾ ಇಡಲಾಗಿದೆ. 7 ಜನರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಸಿಕೆ ಪಡೆದ ಇಬ್ಬರು ಮೃತಪಟ್ಟಿದ್ದಾರೆ. ಆದರೆ, ಲಸಿಕೆ ತೆಗೆದುಕೊಂಡಿದ್ದು ಇದಕ್ಕೆ ಕಾರಣವಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ಉತ್ತರ ಪ್ರದೇಶದ ಮೊರದಾಬಾದ್​ನಲ್ಲಿ ಭಾನುವಾರ ರಾತ್ರಿ ಮಹಿಪಾಲ್​ ಸಿಂಗ್ ಎಂಬುವವರು​ ಮೃತಪಟ್ಟಿದ್ದಾರೆ. ಶನಿವಾರ ಇವರಿಗೆ ಕೊರೊನಾ ಲಸಿಕೆ ನೀಡಲಾಗಿತ್ತು. ಆದರೆ, ಕೊರೊನಾ ವೈರಸ್​ ಔಷಧ ಪಡೆದಿದ್ದಕ್ಕೇ ಆತ ಮೃತಪಟ್ಟಿದ್ದಾನೆ ಎನ್ನುವುದು ಸುಳ್ಳು. ಆತನಿಗೆ ಹೃದಯಾಘಾತವಾಗಿತ್ತು ಎಂದು ವೈದ್ಯರು ತಿಳಿಸಿದ್ದಾರೆ.

ಬಳ್ಳಾರಿಯ 43 ವರ್ಷದ ವ್ಯಕ್ತಿ ಕೊರೊನಾ ಲಸಿಕೆ ಪಡೆದ ನಂತರ ಮೃತಪಟ್ಟಿದ್ದರು. ಅವರು ಮೃತಪಡಲು ಕಾರಣ ಹೃದಯಾಘಾತ ಎಂದು ಸರ್ಕಾರ ತಿಳಿಸಿದೆ. ಇನ್ನು, ಕೊರೊನಾ ಔಷಧ ತೆಗೆದುಕೊಂಡ ನಂತರ ತೀವ್ರ ಆರೋಗ್ಯ ಸಮಸ್ಯೆಯಿಂದ ದೆಹಲಿಯಲ್ಲಿ ಮೂವರು, ಕರ್ನಾಟಕದಲ್ಲಿ ಇಬ್ಬರು, ಉತ್ತರಾಖಂಡ ಹಾಗೂ ಚತ್ತೀಸ್​ಗಢದಲ್ಲಿ ಒಬ್ಬರು ಆಸ್ಪತ್ರೆ ಸೇರಿದ್ದಾರೆ. ಈ ಪೈಕಿ ಮೂವರು ಆಸ್ಪತ್ರೆಯಿಂದ ಹೊರ ಬಂದಿದ್ದಾರೆ ಎಂದು ಕೇಂದ್ರ ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

‘ಥಟ್​ ಅಂತ’ ಕೊರೊನಾ ಲಸಿಕೆ ಹಾಕಿಸಿಕೊಂಡು, ಧೈರ್ಯ ತುಂಬಿದ ಡಾ. ಸೋಮೇಶ್ವರ ನಾರಪ್ಪ!

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ