AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಹ್ಮದ್ ಪಟೇಲ್​ ನಿಧನದಿಂದ ತೆರವಾದ AICC ಖಜಾಂಚಿ ಸ್ಥಾನಕ್ಕೆ ಪವನ್​ ಕುಮಾರ್​ ಬನ್ಸಲ್​ ನೇಮಕ

ಹಿರಿಯ ಕಾಂಗ್ರೆಸ್​ ನಾಯಕ ಅಹ್ಮದ್ ಪಟೇಲ್​ ನಿಧನದಿಂದ ತೆರವಾಗಿದ್ದ AICC ಖಜಾಂಚಿ ಸ್ಥಾನಕ್ಕೆ ರಾಜ್ಯಸಭಾ ಮಾಜಿ ಸಂಸದ ಪವನ್​ ಕುಮಾರ್​ ಬನ್ಸಲ್​ರನ್ನು ಮಧ್ಯಂತರ ಅವಧಿಗೆ ನೇಮಕ ಮಾಡಲಾಗಿದೆ.

ಅಹ್ಮದ್ ಪಟೇಲ್​ ನಿಧನದಿಂದ ತೆರವಾದ AICC ಖಜಾಂಚಿ ಸ್ಥಾನಕ್ಕೆ ಪವನ್​ ಕುಮಾರ್​ ಬನ್ಸಲ್​ ನೇಮಕ
ಪವನ್​ ಕುಮಾರ್​ ಬನ್ಸಲ್​
Lakshmi Hegde
| Updated By: KUSHAL V|

Updated on: Nov 28, 2020 | 6:52 PM

Share

ದೆಹಲಿ: ಹಿರಿಯ ಕಾಂಗ್ರೆಸ್​ ನಾಯಕ ಅಹ್ಮದ್ ಪಟೇಲ್​ ನಿಧನದಿಂದ ತೆರವಾಗಿದ್ದ AICC ಖಜಾಂಚಿ ಸ್ಥಾನಕ್ಕೆ ರಾಜ್ಯಸಭಾ ಮಾಜಿ ಸಂಸದ ಪವನ್​ ಕುಮಾರ್​ ಬನ್ಸಲ್​ರನ್ನು ಮಧ್ಯಂತರ ಅವಧಿಗೆ ನೇಮಕ ಮಾಡಲಾಗಿದೆ.

ಪವನ್​ ಕುಮಾರ್ ಚಂಡೀಗಢ​​​ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಚುನಾಯಿತರಾಗಿದ್ದವರು ಹಾಗೂ ಅಂದಿನ ಪ್ರಧಾನಿಯಾಗಿದ್ದ ಮನಮೋಹನ್​ ಸಿಂಗ್​ ಸರ್ಕಾರದಲ್ಲಿ ಸಚಿವರಾಗಿದ್ದರು. ಜೊತೆಗೆ, ಒಂದು ಬಾರಿ ಪಂಜಾಬ್​ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಅಷ್ಟೇ ಅಲ್ಲ, AICCಯ ರಾಷ್ಟ್ರೀಯ ವಕ್ತಾರ ಹಾಗೂ ಪಕ್ಷದ ರಿಸರ್ಚ್​ ಮತ್ತು ರೆಫರೆನ್ಸ್​ ಕೋಶದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

AICCಯ ಮಧ್ಯಂತರ ಖಜಾಂಚಿಯಾಗಿ ತಮ್ಮನ್ನು ನೇಮಕ ಮಾಡಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಬನ್ಸಲ್​, ನನ್ನ ಮೇಲೆ ನಂಬಿಕೆಯಿಟ್ಟು ಅಧಿಕಾರ ನೀಡಿದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರಿಗೆ ಧನ್ಯವಾದಗಳು. ಈ ಹುದ್ದೆಯಲ್ಲಿ ನಾನು ಸಂಪೂರ್ಣ ಜವಾಬ್ದಾರಿಯೊಂದಿಗೆ ಕಾರ್ಯ ನಿರ್ವಹಿಸುತ್ತೇನೆ ಎಂದಿದ್ದಾರೆ. ದಿವಂಗತ ಅಹ್ಮದ್ ಪಟೇಲ್ 2018ರಿಂದಲೂ AICC ಖಜಾಂಚಿಯಾಗಿದ್ದರು. ಕೊರೊನಾ ಸೋಂಕಿಗೆ ತುತ್ತಾಗಿ ಹರಿಯಾಣದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನವೆಂಬರ್​ 25ರಂದು ಬಹುಅಂಗಾಂಗ ವೈಫಲ್ಯದಿಂದ ನಿಧನರಾದರು.

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್