AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಹ್ಮದ್ ಪಟೇಲ್​ ನಿಧನದಿಂದ ತೆರವಾದ AICC ಖಜಾಂಚಿ ಸ್ಥಾನಕ್ಕೆ ಪವನ್​ ಕುಮಾರ್​ ಬನ್ಸಲ್​ ನೇಮಕ

ಹಿರಿಯ ಕಾಂಗ್ರೆಸ್​ ನಾಯಕ ಅಹ್ಮದ್ ಪಟೇಲ್​ ನಿಧನದಿಂದ ತೆರವಾಗಿದ್ದ AICC ಖಜಾಂಚಿ ಸ್ಥಾನಕ್ಕೆ ರಾಜ್ಯಸಭಾ ಮಾಜಿ ಸಂಸದ ಪವನ್​ ಕುಮಾರ್​ ಬನ್ಸಲ್​ರನ್ನು ಮಧ್ಯಂತರ ಅವಧಿಗೆ ನೇಮಕ ಮಾಡಲಾಗಿದೆ.

ಅಹ್ಮದ್ ಪಟೇಲ್​ ನಿಧನದಿಂದ ತೆರವಾದ AICC ಖಜಾಂಚಿ ಸ್ಥಾನಕ್ಕೆ ಪವನ್​ ಕುಮಾರ್​ ಬನ್ಸಲ್​ ನೇಮಕ
ಪವನ್​ ಕುಮಾರ್​ ಬನ್ಸಲ್​
Lakshmi Hegde
| Edited By: |

Updated on: Nov 28, 2020 | 6:52 PM

Share

ದೆಹಲಿ: ಹಿರಿಯ ಕಾಂಗ್ರೆಸ್​ ನಾಯಕ ಅಹ್ಮದ್ ಪಟೇಲ್​ ನಿಧನದಿಂದ ತೆರವಾಗಿದ್ದ AICC ಖಜಾಂಚಿ ಸ್ಥಾನಕ್ಕೆ ರಾಜ್ಯಸಭಾ ಮಾಜಿ ಸಂಸದ ಪವನ್​ ಕುಮಾರ್​ ಬನ್ಸಲ್​ರನ್ನು ಮಧ್ಯಂತರ ಅವಧಿಗೆ ನೇಮಕ ಮಾಡಲಾಗಿದೆ.

ಪವನ್​ ಕುಮಾರ್ ಚಂಡೀಗಢ​​​ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಚುನಾಯಿತರಾಗಿದ್ದವರು ಹಾಗೂ ಅಂದಿನ ಪ್ರಧಾನಿಯಾಗಿದ್ದ ಮನಮೋಹನ್​ ಸಿಂಗ್​ ಸರ್ಕಾರದಲ್ಲಿ ಸಚಿವರಾಗಿದ್ದರು. ಜೊತೆಗೆ, ಒಂದು ಬಾರಿ ಪಂಜಾಬ್​ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಅಷ್ಟೇ ಅಲ್ಲ, AICCಯ ರಾಷ್ಟ್ರೀಯ ವಕ್ತಾರ ಹಾಗೂ ಪಕ್ಷದ ರಿಸರ್ಚ್​ ಮತ್ತು ರೆಫರೆನ್ಸ್​ ಕೋಶದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

AICCಯ ಮಧ್ಯಂತರ ಖಜಾಂಚಿಯಾಗಿ ತಮ್ಮನ್ನು ನೇಮಕ ಮಾಡಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಬನ್ಸಲ್​, ನನ್ನ ಮೇಲೆ ನಂಬಿಕೆಯಿಟ್ಟು ಅಧಿಕಾರ ನೀಡಿದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರಿಗೆ ಧನ್ಯವಾದಗಳು. ಈ ಹುದ್ದೆಯಲ್ಲಿ ನಾನು ಸಂಪೂರ್ಣ ಜವಾಬ್ದಾರಿಯೊಂದಿಗೆ ಕಾರ್ಯ ನಿರ್ವಹಿಸುತ್ತೇನೆ ಎಂದಿದ್ದಾರೆ. ದಿವಂಗತ ಅಹ್ಮದ್ ಪಟೇಲ್ 2018ರಿಂದಲೂ AICC ಖಜಾಂಚಿಯಾಗಿದ್ದರು. ಕೊರೊನಾ ಸೋಂಕಿಗೆ ತುತ್ತಾಗಿ ಹರಿಯಾಣದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನವೆಂಬರ್​ 25ರಂದು ಬಹುಅಂಗಾಂಗ ವೈಫಲ್ಯದಿಂದ ನಿಧನರಾದರು.

Follow Us
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ