AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಹ್ಮದ್ ಪಟೇಲ್​ ನಿಧನದಿಂದ ತೆರವಾದ AICC ಖಜಾಂಚಿ ಸ್ಥಾನಕ್ಕೆ ಪವನ್​ ಕುಮಾರ್​ ಬನ್ಸಲ್​ ನೇಮಕ

ಹಿರಿಯ ಕಾಂಗ್ರೆಸ್​ ನಾಯಕ ಅಹ್ಮದ್ ಪಟೇಲ್​ ನಿಧನದಿಂದ ತೆರವಾಗಿದ್ದ AICC ಖಜಾಂಚಿ ಸ್ಥಾನಕ್ಕೆ ರಾಜ್ಯಸಭಾ ಮಾಜಿ ಸಂಸದ ಪವನ್​ ಕುಮಾರ್​ ಬನ್ಸಲ್​ರನ್ನು ಮಧ್ಯಂತರ ಅವಧಿಗೆ ನೇಮಕ ಮಾಡಲಾಗಿದೆ.

ಅಹ್ಮದ್ ಪಟೇಲ್​ ನಿಧನದಿಂದ ತೆರವಾದ AICC ಖಜಾಂಚಿ ಸ್ಥಾನಕ್ಕೆ ಪವನ್​ ಕುಮಾರ್​ ಬನ್ಸಲ್​ ನೇಮಕ
ಪವನ್​ ಕುಮಾರ್​ ಬನ್ಸಲ್​
Lakshmi Hegde
| Edited By: |

Updated on: Nov 28, 2020 | 6:52 PM

Share

ದೆಹಲಿ: ಹಿರಿಯ ಕಾಂಗ್ರೆಸ್​ ನಾಯಕ ಅಹ್ಮದ್ ಪಟೇಲ್​ ನಿಧನದಿಂದ ತೆರವಾಗಿದ್ದ AICC ಖಜಾಂಚಿ ಸ್ಥಾನಕ್ಕೆ ರಾಜ್ಯಸಭಾ ಮಾಜಿ ಸಂಸದ ಪವನ್​ ಕುಮಾರ್​ ಬನ್ಸಲ್​ರನ್ನು ಮಧ್ಯಂತರ ಅವಧಿಗೆ ನೇಮಕ ಮಾಡಲಾಗಿದೆ.

ಪವನ್​ ಕುಮಾರ್ ಚಂಡೀಗಢ​​​ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಚುನಾಯಿತರಾಗಿದ್ದವರು ಹಾಗೂ ಅಂದಿನ ಪ್ರಧಾನಿಯಾಗಿದ್ದ ಮನಮೋಹನ್​ ಸಿಂಗ್​ ಸರ್ಕಾರದಲ್ಲಿ ಸಚಿವರಾಗಿದ್ದರು. ಜೊತೆಗೆ, ಒಂದು ಬಾರಿ ಪಂಜಾಬ್​ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಅಷ್ಟೇ ಅಲ್ಲ, AICCಯ ರಾಷ್ಟ್ರೀಯ ವಕ್ತಾರ ಹಾಗೂ ಪಕ್ಷದ ರಿಸರ್ಚ್​ ಮತ್ತು ರೆಫರೆನ್ಸ್​ ಕೋಶದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

AICCಯ ಮಧ್ಯಂತರ ಖಜಾಂಚಿಯಾಗಿ ತಮ್ಮನ್ನು ನೇಮಕ ಮಾಡಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಬನ್ಸಲ್​, ನನ್ನ ಮೇಲೆ ನಂಬಿಕೆಯಿಟ್ಟು ಅಧಿಕಾರ ನೀಡಿದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರಿಗೆ ಧನ್ಯವಾದಗಳು. ಈ ಹುದ್ದೆಯಲ್ಲಿ ನಾನು ಸಂಪೂರ್ಣ ಜವಾಬ್ದಾರಿಯೊಂದಿಗೆ ಕಾರ್ಯ ನಿರ್ವಹಿಸುತ್ತೇನೆ ಎಂದಿದ್ದಾರೆ. ದಿವಂಗತ ಅಹ್ಮದ್ ಪಟೇಲ್ 2018ರಿಂದಲೂ AICC ಖಜಾಂಚಿಯಾಗಿದ್ದರು. ಕೊರೊನಾ ಸೋಂಕಿಗೆ ತುತ್ತಾಗಿ ಹರಿಯಾಣದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನವೆಂಬರ್​ 25ರಂದು ಬಹುಅಂಗಾಂಗ ವೈಫಲ್ಯದಿಂದ ನಿಧನರಾದರು.

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?