AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿ.ಜಿ.ಸಿದ್ಧಾರ್ಥ್ ಪತ್ನಿ ಮಾಳವಿಕಾ ’ಕಾಫಿ ಡೇ‘ಗೆ ಹೊಸ ಸಿಇಒ

ಕಾಫಿ ಡೇ ಎಂಟರ್​ಪ್ರೈಸಸ್​ ಲಿಮಿಟೆಡ್​ನ (ಸಿಡಿಇಎಲ್) ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ದಿವಂಗತ ವಿ.ಜಿ.ಸಿದ್ಧಾರ್ಥ ಅವರ ಪತ್ನಿ ಮಾಳವಿಕಾ ಹೆಗ್ಡೆ ಅವರನ್ನು ನೇಮಿಸಲಾಗಿದೆ. ಕೆಫೆ ಕಾಫಿ ಡೇ ರೆಸ್ಟೊರೆಂಟ್​ ಸರಣಿಗೆ ಸಿಡಿಇಲ್​ ಮಾತೃಸಂಸ್ಥೆ.

ವಿ.ಜಿ.ಸಿದ್ಧಾರ್ಥ್ ಪತ್ನಿ ಮಾಳವಿಕಾ ’ಕಾಫಿ ಡೇ‘ಗೆ ಹೊಸ ಸಿಇಒ
ಮಾಳವಿಕಾ ಹೆಗ್ಡೆ
Follow us
Ghanashyam D M | ಡಿ.ಎಂ.ಘನಶ್ಯಾಮ
| Updated By: Skanda

Updated on:Dec 07, 2020 | 9:51 PM

ನವದೆಹಲಿ: ಕಾಫಿ ಡೇ ಎಂಟರ್​ಪ್ರೈಸಸ್​ ಲಿಮಿಟೆಡ್​ನ (ಸಿಡಿಇಎಲ್) ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ದಿವಂಗತ ವಿ.ಜಿ.ಸಿದ್ಧಾರ್ಥ ಅವರ ಪತ್ನಿ ಮಾಳವಿಕಾ ಹೆಗ್ಡೆ ಅವರನ್ನು ನೇಮಿಸಲಾಗಿದೆ. ಕೆಫೆ ಕಾಫಿ ಡೇ ರೆಸ್ಟೊರೆಂಟ್​ ಸರಣಿಗೆ ಸಿಡಿಇಲ್​ ಮಾತೃಸಂಸ್ಥೆ.

ಸಂಸ್ಥೆಯ ನಿರ್ದೇಶಕಿಯಾಗಿದ್ದ ಮಾಳವಿಕಾ ಅವರನ್ನು ಡಿಸೆಂಬರ್ 7ರಿಂದ ಜಾರಿಗೆ ಬರುವಂತೆ ಸಿಇಒ ಆಗಿ ನೇಮಿಸಲಾಗಿದೆ ಎಂದು ಸಿಡಿಇಲ್ ಶಾಸನಬದ್ಧ ಮಾಹಿತಿಯಲ್ಲಿ ತಿಳಿಸಿದೆ.

ಸಿ.ಎಚ್.ವಸುಂಧರಾ ದೇವಿ, ಗಿರಿ ದೇವನೂರು ಮತ್ತು ಮೋಹನ್ ರಾಘವೇಂದ್ರ ಕೊಂಡಿ ಅವರನ್ನು ಸ್ವತಂತ್ರ ನಿರ್ದೇಶಕರನ್ನಾಗಿ ನೇಮಿಸಲು ಸೋಮವಾರ ನಡೆದ ಆಡಳಿತ ಮಂಡಳಿ ಸಭೆ ಸಮ್ಮತಿ ಸೂಚಿಸಿತು. ಡಿಸೆಂಬರ್ 31ರಿಂದ ಐದು ವರ್ಷಗಳ ಅವಧಿಗೆ ಇವರ ಅಧಿಕಾರ ಅವಧಿ ನಿಗದಿಯಾಗಿದೆ.

ಈ ಮೂಲಕ ಕಾಫಿ ಡೇ ಸಂಸ್ಥೆಯು ಸೆಬಿ ನಿಯಮಾವಳಿಗಳ ಪ್ರಕಾರ ನೇಮಿಸಬೇಕಿದ್ದ ಮಹಿಳಾ ಸ್ವತಂತ್ರ ನಿರ್ದೇಶಕರ ನೇಮಕಾತಿಯನ್ನೂ ಪೂರ್ಣಗೊಳಿಸದಂತೆ ಆಗಿದೆ.

2019ರ ಜುಲೈ 29ರಂದು ಸಿದ್ದಾರ್ಥ ಹೆಗ್ಡೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಂತರದ ದಿನಗಳಲ್ಲಿ ಕಾಫಿ ಡೇ ಗ್ರೂಪ್​ ಮೇಲೆ ಸಾಲ ಮರುಪಾವತಿಯ ಒತ್ತಡ ಹೆಚ್ಚಾಗಿತ್ತು. ಸಾಲ ಮರುಪಾವತಿಗಾಗಿ ಆಸ್ತಿಗಳನ್ನು ಮಾರಾಟ ಮಾಡಲು ಕಾಫಿ ಡೇ ಮುಂದಾಗಿತ್ತು.

ಸಾಲ ವಸೂಲಾತಿ ನಿರ್ವಹಣೆ ಮತ್ತು ಸಮಾಲೋಚನೆಯ ಉಸ್ತುವಾರಿಗಾಗಿ ಕಳೆದ ಆಗಸ್ಟ್​ನಲ್ಲಿ ಕಾಫಿ ಡೇ ಗ್ರೂಪ್​ ಕರ್ನಾಟಕ ಹೈಕೋರ್ಟ್​ನ ಮಾಜಿ ನ್ಯಾಯಧೀಶರಾದ ನ್ಯಾಯಮೂರ್ತಿ ಕೆ.ಎಲ್​.ಮಂಜುನಾಥ್ ಅವರನ್ನು ನೇಮಿಸಿತ್ತು.

ಕಾಫಿ ಡೇ ಗ್ರೂಪ್​ನ ಮಾತೃಸಂಸ್ಥೆ ಸಿಡಿಇಎಲ್ ಒಟ್ಟು 49 ಅಧೀನ ಸಂಸ್ಥೆಗಳನ್ನು ನಿರ್ವಹಿಸುತ್ತಿದೆ. ಕಳೆದ ಸೆಪ್ಟೆಂಬರ್​ನಲ್ಲಿ ಸಿಡಿಇಎಲ್ ಬೆಂಗಳೂರಿನಲ್ಲಿದ್ದ ಗ್ಲೋಬಲ್ ವಿಲೇಜ್ ಟೆಕ್​ ಪಾರ್ಕ್​ ಅನ್ನು ಜಾಗತಿಕ ಹೂಡಿಕೆ ಕಂಪನಿ ಬ್ಲಾಕ್​ಸ್ಟೋನ್ ಮತ್ತು ರಿಯಾಲ್ಟಿ ಫರ್ಮ್ ಸಲಾರ್​ಪುರಿಯಾ ಸತ್ವ ಕಂಪನಿಗೆ ₹ 2700 ಕೋಟಿಗೆ ಮಾರಾಟ ಮಾಡಿತ್ತು.

ಮೈಂಡ್​ಟ್ರೀ ಐಟಿ ಕಂಪನಿಯಲ್ಲಿದ್ದ ತನ್ನ ಪಾಲನ್ನು ಸಿಡಿಇಎಲ್ ಈ ಹಿಂದೆ ಎಲ್​ ಅಂಡ್ ಟಿ ಇನ್​ಫೊಟೆಕ್​ಗೆ ಮಾರಾಟ ಮಾಡಿತ್ತು.

ಮಾಳವಿಕಾ ಸಿದ್ದಾರ್ಥ್ ಹೆಗ್ಡೆಗೆ ಸಿಕ್ತು ಬಿಗ್ ರಿಲೀಫ್! ಏನದು?

ಇನ್ನಷ್ಟು.. ಆಡಳಿತ ಪಕ್ಷಕ್ಕೆ ಮುಜುಗರ; ಎಸ್.ವಿ‌. ರಂಗನಾಥ್ ಬದಲಾವಣೆಗೆ ಪಟ್ಟುಹಿಡಿದ ಹೆಚ್.ವಿಶ್ವನಾಥ್.. ಕಾರಣ ಏನು? ಕಾಫಿ ಡೇ ಮಾಲೀಕ ದಿ. ಸಿದ್ಧಾರ್ಥ್ ಪತ್ನಿಗೆ ಬಂಧನ ಭೀತಿ

Published On - 9:31 pm, Mon, 7 December 20

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ