AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಫಾರಿ ಪಾರ್ಕ್‌ನಲ್ಲಿ ಸೀತಾ ಮತ್ತು ಅಕ್ಬರ್ ಹೆಸರಿನ ಸಿಂಹಗಳನ್ನು ಒಟ್ಟಿಗೆ ಇರಿಸಿದ್ದೇಕೆ?; ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ವಿಎಚ್‌ಪಿ

ಭಗವಾನ್ ಶ್ರೀರಾಮನ ಪತ್ನಿಯಾದ 'ಸೀತಾ’ ಹೆಸರನ್ನು ಸಿಂಹಿಣಿಗೆ ಇಡಲಾಗಿದೆ. ಪ್ರಪಂಚದಾದ್ಯಂತದ ಎಲ್ಲಾ ಹಿಂದೂಗಳಿಗೆ ಅವಳು ಪವಿತ್ರ ದೇವತೆಯಾಗಿದ್ದಾಳೆ. ಇದು  ಧರ್ಮನಿಂದೆ. ಹಾಗಾಗಿ ಸಿಂಹಿಣಿಯ ಹೆಸರನ್ನು ಬದಲಾಯಿಸುವಂತೆ ವಿಶ್ವ ಹಿಂದೂ ಪರಿಷತ್ ಕೋರಿದೆ ಎಂದು ಬಾರ್ ಆಂಡ್ ಬೆಂಚ್ ವರದಿ ಮಾಡಿದೆ.

ಸಫಾರಿ ಪಾರ್ಕ್‌ನಲ್ಲಿ ಸೀತಾ ಮತ್ತು ಅಕ್ಬರ್ ಹೆಸರಿನ ಸಿಂಹಗಳನ್ನು ಒಟ್ಟಿಗೆ ಇರಿಸಿದ್ದೇಕೆ?; ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ವಿಎಚ್‌ಪಿ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 17, 2024 | 9:01 PM

Share

ಕೊಲ್ಕತ್ತಾ ಫೆಬ್ರುವರಿ 17: ಪಶ್ಚಿಮ ಬಂಗಾಳದ (West Bengal) ಸಿಲಿಗುರಿಯ ಸಫಾರಿ ಪಾರ್ಕ್‌ನಲ್ಲಿ (Siliguri safari park) ಅಕ್ಬರ್ ಎಂಬ ಸಿಂಹ ಮತ್ತು ಸೀತಾ (Sita)ಎಂಬ ಸಿಂಹಿಣಿಯನ್ನು ಒಂದೇ ಆವರಣದಲ್ಲಿ ಇರಿಸಲಾಗಿದೆ ಎಂದು ಅರಣ್ಯ ಇಲಾಖೆಯ ವಿರುದ್ಧ ವಿಶ್ವ ಹಿಂದೂ ಪರಿಷತ್ತಿನ (VHP) ಪಶ್ಚಿಮ ಬಂಗಾಳ ವಿಭಾಗವು ಕಲ್ಕತ್ತಾ ಹೈಕೋರ್ಟ್‌ನ ಜಲಪೈಗುರಿ ಸರ್ಕ್ಯೂಟ್ ಬೆಂಚ್‌ಗೆ ಅರ್ಜಿ ಸಲ್ಲಿಸಿದೆ ಎಂದು ಲೈವ್ ಲಾ ಶನಿವಾರ ವರದಿ ಮಾಡಿದೆ. “ಅಕ್ಬರ್” ಎಂಬುದು 1556 ರಿಂದ 1605 ರವರೆಗೆ ಆಳ್ವಿಕೆ ನಡೆಸಿದ ಮೂರನೇ ಮೊಘಲ್ ಚಕ್ರವರ್ತಿಯ ಹೆಸರು, ಆದರೆ “ಸೀತಾ” ರಾಮಾಯಣ ಮಹಾಕಾವ್ಯದಲ್ಲಿ ಭಗವಾನ್ ಶ್ರೀರಾಮನ ಪತ್ನಿ, ಜನಕ ರಾಜನ ಮಗಳು.

ಫೆಬ್ರವರಿ 13 ರಂದು ಅರಣ್ಯ ಅಧಿಕಾರಿಗಳು ಏಳು ವರ್ಷದ ಅಕ್ಬರ್ ಎಂಬ ಹೆಸರಿನ ಸಿಂಹ ಮತ್ತು ಐದು ವರ್ಷದ ಸೀತಾ ಹೆಸರಿನ ಸಿಂಹಿಣಿಯನ್ನು ತ್ರಿಪುರಾದ ಸೆಪಹಿಜಾಲಾ ಝೂಲಾಜಿಕಲ್ ಪಾರ್ಕ್‌ನಿಂದ ಸಿಲಿಗುರಿಯ ಬೆಂಗಾಲ್ ಸಫಾರಿ ಪಾರ್ಕ್‌ಗೆ ಕರೆತಂದರು ಎಂದು ದಿ ಸ್ಟೇಟ್ಸ್‌ಮನ್ ವರದಿ ಮಾಡಿದೆ.

ಇದರ ಬೆನ್ನಲ್ಲೇ ವಿಶ್ವ ಹಿಂದೂ ಪರಿಷತ್, ಸೀತೆಯನ್ನು ಅಕ್ಬರ್ ಜೊತೆ ಇಡುವುದು ಹಿಂದೂ ಧರ್ಮಕ್ಕೆ ಮಾಡಿದ ಅವಮಾನ ಎಂದು ಹೇಳಿತ್ತು. “ಶ್ರೀರಾಮನ ಪತ್ನಿಯಾದ ‘ಸೀತಾ’ ಹೆಸರನ್ನು ಸಿಂಹಿಣಿಗೆ ಇಡಲಾಗಿದೆ. ಪ್ರಪಂಚದಾದ್ಯಂತದ ಎಲ್ಲಾ ಹಿಂದೂಗಳಿಗೆ ಅವಳು ಪವಿತ್ರ ದೇವತೆಯಾಗಿದ್ದಾಳೆ ಎಂದು ವಿಶ್ವ ಹಿಂದೂ ಪರಿಷತ್ತು ತಮ್ಮ ಅರ್ಜಿಯಲ್ಲಿ ಹೇಳಿರುವುದಾಗಿ ಬಾರ್ ಆಂಡ್ ಬೆಂಚ್ ವರದಿ ಮಾಡಿದೆ. ಇದು  ಧರ್ಮನಿಂದೆ. ಹಾಗಾಗಿ ಸಿಂಹಿಣಿಯ ಹೆಸರನ್ನು ಬದಲಾಯಿಸುವಂತೆ ವಿಹಿಂಪ ಕೋರಿದೆ.

ವಿಎಚ್​​ಪಿ ಪ್ರಕಾರ, ಅದರ ಪ್ರತಿನಿಧಿಗಳು ರಾಜ್ಯ ಅರಣ್ಯ ಅಧಿಕಾರಿಗಳನ್ನು ಅನೇಕ ಬಾರಿ ಭೇಟಿ ಮಾಡಿದ್ದು  ಹೆಸರುಗಳ ವಿರುದ್ಧ ಪ್ರತಿಭಟಿಸಿದ್ದಾರೆ. “ಸಿಂಹಿಣಿಗೆ ಸೀತೆ ಎಂದೂ ಸಿಂಹಕ್ಕೆ ಅಕ್ಬರ್ ಎಂದೂ ಹೆಸರಿಟ್ಟಿದ್ದಾರೆ. ಇದು ಹೇಗೆ ಸಾಧ್ಯ? ಇದರಿಂದ ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲವೇ? ಅರಣ್ಯ ಇಲಾಖೆಯ ಒಂದು ಕಚೇರಿಯಿಂದ ಇನ್ನೊಂದು ಕಚೇರಿಗೆ ಹೋದೆವು. ಯಾರೂ ನಮಗೆ ಕಿವಿಗೊಡಲಿಲ್ಲ, ಆದ್ದರಿಂದ ನಾವು ನ್ಯಾಯಾಲಯದ ಮೊರೆ ಹೋಗಬೇಕಾಯಿತು ಎಂದು ವಿಎಚ್‌ಪಿಯ ಜಲ್ಪೈಗುರಿ ಘಟಕದ ಮುಖ್ಯಸ್ಥ ದುಲಾಲ್ ಚಂದ್ರ ರಾಯ್ ಹೇಳಿದರು.

ಫೆಬ್ರವರಿ 16 ರಂದು ನ್ಯಾಯಮೂರ್ತಿ ಸೌಗತ ಭಟ್ಟಾಚಾರ್ಯ ಅವರ ಪೀಠದ ಮುಂದೆ ಅರ್ಜಿಯನ್ನು ಸಲ್ಲಿಸಲಾಗಿದ್ದು , ಫೆಬ್ರವರಿ 20 ರಂದು ವಿಚಾರಣೆ ನಡೆಯಲಿದೆ.

ಶನಿವಾರದಂದು ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಪಶ್ಚಿಮ ಬಂಗಾಳದ ಅರಣ್ಯ ಸಚಿವ ಮತ್ತು ಟಿಎಂಸಿ ಶಾಸಕ ಬಿರ್ಬಹಾ ಹನ್ಸ್ಡಾ,” ಪ್ರಾಣಿಗಳಿಗೆ ತ್ರಿಪುರಾ ಮೃಗಾಲಯದಿಂದ ಹೆಸರುಗಳನ್ನು ನೀಡಲಾಗಿದೆ ಎಂದು ಹೇಳಿದ್ದು ವಿಎಚ್​​ಪಿ ಕೊಳಕು  ರಾಜಕೀಯ ಮಾಡುತ್ತಿದೆ” ಎಂದು ಆರೋಪಿಸಿದರು.

ಇದನ್ನೂ ಓದಿ:ಪವಡಿಸು ಪರಮಾತ್ಮ; ಬಾಲ ರಾಮನಿಗೆ ಬೇಕು ವಿಶ್ರಾಂತಿ: ಇನ್ನು ಅಯೋಧ್ಯೆ ಮಂದಿರವನ್ನು 1 ಗಂಟೆ ಕಾಲ ಮುಚ್ಚಲಾಗುವುದು  

“ಅವರು ಮಾಡುತ್ತಿರುವುದು ಕೊಳಕು ರಾಜಕೀಯ. ತ್ರಿಪುರಾ ಮೃಗಾಲಯದಿಂದ ಬಂದ ಪ್ರಾಣಿಗಳಿಗೆ ನಾವು ಹೆಸರಿಟ್ಟಿಲ್ಲ. ನಾವು ಹೆಸರುಗಳನ್ನು ನೀಡಿದ್ದೇವೆ ಎಂದು ಹೇಳುವುದು  ತಪ್ಪು. ಪ್ರಾಣಿಗಳಿಗೆ ಔಪಚಾರಿಕವಾಗಿ ಹೆಸರು ಇಡುವವರು ನಮ್ಮ ಮುಖ್ಯಮಂತ್ರಿ. ಪ್ರಾಣಿಗಳು ತ್ರಿಪುರಾದ ಮೃಗಾಲಯದಿಂದ ಬಂದಿವೆ, ಬಹುಶಃ ಅವರು ಅಲ್ಲಿ ಕೆಲವು ಹೆಸರುಗಳನ್ನು ನೀಡಿದ್ದಾರೆ” ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!