Ram Mandir Inauguration: ಗೋಧ್ರಾ ಹತ್ಯಾಕಾಂಡದಲ್ಲಿ ಸಾವನ್ನಪ್ಪಿದ್ದ 19 ಕರಸೇವಕರ ಕುಟುಂಬ ಸದಸ್ಯರಿಗೆ ರಾಮ ಮಂದಿರಕ್ಕೆ ಆಹ್ವಾನ

ಗುಜರಾತ್​ನಲ್ಲಿ 2002ರಲ್ಲಿ ನಡೆದ ಗೋಧ್ರಾ ಹತ್ಯಾಕಾಂಡದಲ್ಲಿ ಸಾವನ್ನಪ್ಪಿದ್ದ 59 ಕರಸೇವಕರ ಪೈಕಿ 19 ಮಂದಿಯ ಕುಟುಂಬ ಸದಸ್ಯರಿಗೆ ಜನವರಿ 22ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ.

Ram Mandir Inauguration: ಗೋಧ್ರಾ ಹತ್ಯಾಕಾಂಡದಲ್ಲಿ ಸಾವನ್ನಪ್ಪಿದ್ದ 19 ಕರಸೇವಕರ ಕುಟುಂಬ ಸದಸ್ಯರಿಗೆ ರಾಮ ಮಂದಿರಕ್ಕೆ ಆಹ್ವಾನ
ಗೋಧ್ರಾ

Updated on: Jan 21, 2024 | 12:23 PM

ಗುಜರಾತ್​ನಲ್ಲಿ 2002ರಲ್ಲಿ ನಡೆದ ಗೋಧ್ರಾ ಹತ್ಯಾಕಾಂಡದಲ್ಲಿ ಸಾವನ್ನಪ್ಪಿದ್ದ 59 ಕರಸೇವಕರ ಪೈಕಿ 19 ಮಂದಿಯ ಕುಟುಂಬ ಸದಸ್ಯರಿಗೆ ಜನವರಿ 22ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ.

ಈ ಕುರಿತು ವಿಶ್ವ ಹಿಂದೂ ಪರಿಷತ್​ನ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಗುಜರಾತ್​ನ ಇತರೆ ಆಹ್ವಾನಿತರಲ್ಲಿ 320 ಸಂತರು ಮತ್ತು 105 ಗಣ್ಯರು ಸೇರಿದ್ದಾರೆ. ಈ ಕರಸೇವಕರು ಅಯೋಧ್ಯೆಯಿಂದ ಅಹಮದಾಬಾದ್​ಗೆ ಸಾಬರಮತಿ ರೈಲಿನಲ್ಲಿ ಹಿಂದಿರುಗುತ್ತಿದ್ದರು.

ವಿಎಚ್​ಪಿಯು 20 ಕರಸೇವಕರ ಕುಟುಂಬಗಳನ್ನು ಸಂಪರ್ಕಿಸಲು ಸಾಧ್ಯವಾಯಿತು, ಅವರಲ್ಲಿ 19 ಮಂದಿ ಅಯೋಧ್ಯೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಮ ಮಂದಿರ ನಿರ್ಮಾಣಕ್ಕಾಗಿ ವಿಎಚ್​ಪಿ 225 ಕೋಟಿ ರೂ. ಸಂಗ್ರಹಿಸಿತ್ತು.

2002ರ ಫೆಬ್ರವರಿ 27ರಂದು ರೈಲಿಗೆ ಬೆಂಕಿ ಬಿದ್ದಿದ್ದರಿಂದ 59 ಕರಸೇವಕರು ಸಜೀವದಹನವಾಗಿದ್ದರು. ಇದು ಗುಜರಾತ್​ನ ಇತಿಹಾಸದಲ್ಲೇ ಭೀಕರ ಕೋಮುಗಲಭೆಗೆ ಕಾರಣವಾಗಿತ್ತು. ಗೋಧ್ರಾ ರೈಲ್ವೆ ನಿಲ್ದಾಣದಲ್ಲಿ ಭಾತುಕ್ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ, ಬೋಗಿಗಳ ಮೇಲೆ ಕಲ್ಲು ತೂರಾಟ ನಡೆಸಿ ಪೆಟ್ರೋಲ್ ಸುರಿದಿದ್ದ, ಬಳಿಕ ಇತರೆ ಆರೋಪಿಗಳು ಬೆಂಕಿ ಹಚ್ಚಿದ್ದರು.

ಮತ್ತಷ್ಟು ಓದಿ: Ram Mandir Inauguration: ಅಯೋಧ್ಯೆಯ ರಾಮ ಮಂದಿರಕ್ಕೆ ಅಫ್ಘಾನಿಸ್ತಾನದಿಂದಲೂ ಬಂತು ವಿಶೇಷ ಉಡುಗೊರೆ

ಗೋಧ್ರಾದಿಂದ ಪರಾರಿಯಾದ ಮೇಲೆ ದೆಹಲಿಯಲ್ಲಿ ಈತ ರೈಲ್ವೆ ನಿಲ್ದಾಣಗಳಲ್ಲಿ ಮತ್ತು ಕಟ್ಟಡ ನಿರ್ಮಾಣದ ಸ್ಥಳಗಳಲ್ಲಿ ಕೆಲಸ ಮಾಡುತ್ತಿದ್ದ. ರಫೀಕ್ ಹುಸೇನ್ ಭಾತುಕ್​ನನ್ನೇ ಹತ್ಯಾಕಾಂಡದ ಪ್ರಮುಖ ಆರೋಪಿ ಎನ್ನಲಾಗಿದೆ.

ಸಬರಮತಿ ಕೋಚ್‌ಗಳಲ್ಲಿ ಗೋಧ್ರಾ ರೈಲಿನಲ್ಲಿ ಸುಟ್ಟ 19 ಕರಸೇವಕರ ಸಂಬಂಧಿಕರು ರಾಮ ಮಂದಿರ ಕಾರ್ಯಕ್ರಮಕ್ಕೆ ಆಹ್ವಾನ ಸ್ವೀಕರಿಸಿದರು. 39 ಕರಸೇವಕರ ಪೈಕಿ 20 ಮಂದಿ ಕರಸೇವಕರ ಸಂಪರ್ಕ ವಿವರಗಳು ಲಭ್ಯವಿರುವ ಕುಟುಂಬ ಸದಸ್ಯರನ್ನು ಸಂಪರ್ಕಿಸಬಹುದು ಎಂದು ವಿಎಚ್‌ಪಿ ಹೇಳಿದೆ. ಅವರಲ್ಲಿ, 19 ಮಂದಿ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಭಾಗವಹಿಸಲು ದೃಢಪಡಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us