AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂ ಕೋರ್ಟ್ ರಾಷ್ಟ್ರಪತಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ; ಉಪರಾಷ್ಟ್ರಪತಿ ಜಗದೀಪ್ ಧಂಖರ್ ಆಕ್ಷೇಪ

ನ್ಯಾಯಾಲಯಗಳು ರಾಷ್ಟ್ರಪತಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಉಪರಾಷ್ಟ್ರಪತಿ ಜಗದೀಪ್ ಧಂಖರ್ ಇಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಳೆದ ವಾರ, ಸುಪ್ರೀಂ ಕೋರ್ಟ್ ಮೊದಲ ಬಾರಿಗೆ ರಾಜ್ಯಪಾಲರು ಅಥವಾ ರಾಷ್ಟ್ರಪತಿಗಳು ಮಸೂದೆಗಳನ್ನು ಸ್ವೀಕರಿಸಿದ ದಿನಾಂಕದಿಂದ 3 ತಿಂಗಳೊಳಗೆ ಅವುಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂಬ ಮಹತ್ವದ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಉಪರಾಷ್ಟ್ರಪತಿ ಧಂಖರ್ ಪ್ರತಿಕ್ರಿಯಿಸಿದ್ದಾರೆ.

ಸುಪ್ರೀಂ ಕೋರ್ಟ್ ರಾಷ್ಟ್ರಪತಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ; ಉಪರಾಷ್ಟ್ರಪತಿ ಜಗದೀಪ್ ಧಂಖರ್ ಆಕ್ಷೇಪ
Jagdeep Dhankar
Follow us
ಸುಷ್ಮಾ ಚಕ್ರೆ
|

Updated on: Apr 17, 2025 | 9:21 PM

ನವದೆಹಲಿ, ಏಪ್ರಿಲ್, 17: ಉಪ ರಾಷ್ಟ್ರಪತಿ ಜಗದೀಪ್ ಧಂಖರ್ (Jagdeep Dhankhar) ಇಂದು (ಏಪ್ರಿಲ್ 17) ಭಾರತೀಯ ನ್ಯಾಯಾಂಗವನ್ನು ಬಹಿರಂಗವಾಗಿ ಟೀಕಿಸಿದ್ದಾರೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ಸಾಂವಿಧಾನಿಕ ಸುಧಾರಣೆಗಳಿಗೆ ಅವರು ಕರೆ ನೀಡಿದ್ದಾರೆ. ಉಪರಾಷ್ಟ್ರಪತಿ ಧಂಖರ್ ಅವರು ಸಾಂವಿಧಾನಿಕ ಕಾನೂನಿನ ಗಣನೀಯ ಪ್ರಶ್ನೆಗಳನ್ನು ನಿರ್ಧರಿಸಲು ಪೀಠದ ಸಂಯೋಜನೆಯೊಂದಿಗೆ ವ್ಯವಹರಿಸುವ ಆರ್ಟಿಕಲ್ 145(3) ಅನ್ನು ತಿದ್ದುಪಡಿ ಮಾಡಲು ಪ್ರಸ್ತಾಪಿಸಿದರು. “ನೀವು ಭಾರತದ ರಾಷ್ಟ್ರಪತಿಗಳಿಗೆ ನಿರ್ದೇಶಿಸುವ ಪರಿಸ್ಥಿತಿಯನ್ನು ಒಪ್ಪಲು ಸಾಧ್ಯವಿಲ್ಲ. ಅದು ಯಾವ ಆಧಾರದ ಮೇಲೆ ಎಂಬುದು ಮುಖ್ಯ. ಸಂವಿಧಾನದ ಅಡಿಯಲ್ಲಿ ನೀವು ಹೊಂದಿರುವ ಏಕೈಕ ವಿಶೇಷ ಅಧಿಕಾರವೆಂದರೆ ಆರ್ಟಿಕಲ್ 145(3) ನೇ ವಿಧಿಯ ಅಡಿಯಲ್ಲಿ ಸಂವಿಧಾನವನ್ನು ವ್ಯಾಖ್ಯಾನಿಸುವುದು. ಅಲ್ಲಿ ಐದು ಅಥವಾ ಹೆಚ್ಚಿನ ನ್ಯಾಯಾಧೀಶರು ಇರಬೇಕು” ಎಂದು ಅವರು ಹೇಳಿದ್ದಾರೆ.

“ನಮ್ಮಲ್ಲಿ ಶಾಸನ ರಚಿಸುವ, ಕಾರ್ಯಕಾರಿ ಕಾರ್ಯಗಳನ್ನು ನಿರ್ವಹಿಸುವ, ಸೂಪರ್ ಪಾರ್ಲಿಮೆಂಟ್ ಆಗಿ ಕಾರ್ಯನಿರ್ವಹಿಸುವ ನ್ಯಾಯಾಧೀಶರು ಇದ್ದಾರೆ ಮತ್ತು ಅವರಿಗೆ ಯಾವುದೇ ಹೊಣೆಗಾರಿಕೆ ಇಲ್ಲ. ಏಕೆಂದರೆ ಈ ನೆಲದ ಕಾನೂನು ಅವರಿಗೆ ಅನ್ವಯಿಸುವುದಿಲ್ಲ” ಎಂದು ಅವರು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ
Image
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
Image
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
Image
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು
Image
ಮದುವೆ ಮನೆಗಳಲ್ಲಿ ಇನ್ಮುಂದೆ ನೀರಿನ ಪ್ಲಾಸ್ಟಿಕ್ ಬಾಟಲಿ ಬಳಕೆ ಮಾಡುವಂತಿಲ್ಲ

ಇದನ್ನೂ ಓದಿ: ಕರ್ನಾಟಕದ ಶೇ. 4 ಮುಸ್ಲಿಂ ಮೀಸಲಾತಿ ಮಸೂದೆಯನ್ನು ರಾಷ್ಟ್ರಪತಿಗೆ ಕಳುಹಿಸಿದ ರಾಜ್ಯಪಾಲ ಗೆಹ್ಲೋಟ್

ರಾಷ್ಟ್ರಪತಿಗಳಿಗೆ ವರ್ಚುವಲ್ ಆಗಿ ಆದೇಶ ಹೊರಡಿಸಿದ ಮತ್ತು ಅದು ದೇಶದ ಕಾನೂನಾಗುತ್ತದೆ ಎಂಬ ಸನ್ನಿವೇಶವನ್ನು ಪ್ರಸ್ತುತಪಡಿಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಸಂವಿಧಾನದ ಶಕ್ತಿಯನ್ನು ಮರೆತಿದ್ದಾರೆ. ಭಾರತದ ರಾಷ್ಟ್ರಪತಿಗಳು ಬಹಳ ಉನ್ನತ ಸ್ಥಾನದಲ್ಲಿದ್ದಾರೆ ಎಂಬುದನ್ನು ಮರೆಯಬಾರದು. ರಾಷ್ಟ್ರಪತಿಗಳು ಸಂವಿಧಾನವನ್ನು ಸಂರಕ್ಷಿಸುವುದಾಗಿ, ಸಮರ್ಥಿಸಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಆದರೆ ಉಪ ರಾಷ್ಟ್ರಪತಿಗಳು ಸೇರಿದಂತೆ ಸಚಿವರು, ಸಂಸದರು ಮತ್ತು ನ್ಯಾಯಾಧೀಶರು ಸಂವಿಧಾನವನ್ನು ಪಾಲಿಸುವುದಾಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಹೀಗಿದ್ದಾಗ ಸುಪ್ರೀಂ ಕೋರ್ಟ್ ಯಾವುದರ ಆಧಾರದಲ್ಲಿ ರಾಷ್ಟ್ರಪತಿಗೆ ನಿರ್ದೇಶನ ನೀಡುತ್ತದೆ? ಎಂದು ಜಗದೀಪ್ ಧಂಖರ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ವಕ್ಫ್ ತಿದ್ದುಪಡಿ ಕಾಯ್ದೆಗೆ ಧನ್ಯವಾದ ಸಲ್ಲಿಸಲು ಪ್ರಧಾನಿ ಮೋದಿಯನ್ನು ಭೇಟಿಯಾದ ಮುಸ್ಲಿಮರ ನಿಯೋಗ

ಈ ವೇಳೆ ಪಾರದರ್ಶಕತೆಯ ಮಹತ್ವವನ್ನು ಒತ್ತಿಹೇಳಿದ ಉಪರಾಷ್ಟ್ರಪತಿ, ಲೋಕಪಾಲ್ ಪೀಠವು ಹೈಕೋರ್ಟ್ ನ್ಯಾಯಾಧೀಶರ ವಿರುದ್ಧದ ಭ್ರಷ್ಟಾಚಾರ ದೂರುಗಳನ್ನು ತನಿಖೆ ಮಾಡುವ ಅಧಿಕಾರವನ್ನು ಹೊಂದಿದೆ ಎಂಬ ತೀರ್ಪನ್ನು ಉಲ್ಲೇಖಿಸಿದರು. ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಾಂಗದ ಸ್ವಾತಂತ್ರ್ಯದ ಆಧಾರದ ಮೇಲೆ ಆದೇಶವನ್ನು ತಡೆಹಿಡಿದಿದೆ ಎಂದು ಅವರು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
‘ಅವರು ಇದ್ದಿದ್ರೆ...’ ಅಂಬರೀಶ್ ಹುಟ್ಟುಹಬ್ಬದಂದು ಸುಮಲತಾ ಭಾವುಕ
‘ಅವರು ಇದ್ದಿದ್ರೆ...’ ಅಂಬರೀಶ್ ಹುಟ್ಟುಹಬ್ಬದಂದು ಸುಮಲತಾ ಭಾವುಕ
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಒಂದೇ ವಾರದಲ್ಲಿ ಹೃದಯಾಘಾತದಿಂದ ಮೂವರ ಸಾವು; ತಜ್ಞರು ಹೇಳಿದ್ದೇನು ನೋಡಿ
ಒಂದೇ ವಾರದಲ್ಲಿ ಹೃದಯಾಘಾತದಿಂದ ಮೂವರ ಸಾವು; ತಜ್ಞರು ಹೇಳಿದ್ದೇನು ನೋಡಿ
VIDEO: ಮೈದಾನದಲ್ಲೇ ಹೊಡೆದಾಟ... ಬಾಂಗ್ಲಾ ಆಟಗಾರನಿಗೆ ಪಂಚ್
VIDEO: ಮೈದಾನದಲ್ಲೇ ಹೊಡೆದಾಟ... ಬಾಂಗ್ಲಾ ಆಟಗಾರನಿಗೆ ಪಂಚ್
ಗದಗ: ಶಾಲೆ ಆರಂಭದ ದಿನವೇ ಶಾಲಾ ವಾಹನ ಪಲ್ಟಿ, ತಪ್ಪಿದ ದುರಂತ
ಗದಗ: ಶಾಲೆ ಆರಂಭದ ದಿನವೇ ಶಾಲಾ ವಾಹನ ಪಲ್ಟಿ, ತಪ್ಪಿದ ದುರಂತ
ರಸ್ತೆಯಲ್ಲಿ ನೀರು, ಮಳೆ ಹೊರತಾಗಿಯೂ ಓಡಾಡುತ್ತಿರುವ ವಾಹನ ಮತ್ತು ಜನ
ರಸ್ತೆಯಲ್ಲಿ ನೀರು, ಮಳೆ ಹೊರತಾಗಿಯೂ ಓಡಾಡುತ್ತಿರುವ ವಾಹನ ಮತ್ತು ಜನ
ಮಂಗಳೂರು: ರಹಿಮಾನ್ ಶವಯಾತ್ರೆಯ ವೇಳೆ ಯುವಕರ ದಾಂಧಲೆ, ವೀಡಿಯೋ ವೈರಲ್
ಮಂಗಳೂರು: ರಹಿಮಾನ್ ಶವಯಾತ್ರೆಯ ವೇಳೆ ಯುವಕರ ದಾಂಧಲೆ, ವೀಡಿಯೋ ವೈರಲ್