AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ದೆಹಲಿಯಲ್ಲಿ ಬಸ್​​ ಹರಿದು ಫುಡ್​​​ ಡೆಲಿವರಿ ಬಾಯ್ ಸ್ಥಿತಿ ಗಂಭೀರ, ವೀಡಿಯೊ ವೈರಲ್​​

ದೆಹಲಿಯ ಮಜು ಕಾ ತಿಲಾ ಪ್ರದೇಶದಲ್ಲಿ ಫುಡ್​​​ ಡೆಲಿವರಿ ಬಾಯ್​​​ಗೆ ಬಸ್​​ ಡಿಕ್ಕಿ ಹೊಡೆದು ನೋಡಿಯೂ ನೋಡುದಂತೆ ಆತನ ಮೇಲೆ ಹರಿದು ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Video: ದೆಹಲಿಯಲ್ಲಿ ಬಸ್​​ ಹರಿದು ಫುಡ್​​​ ಡೆಲಿವರಿ ಬಾಯ್ ಸ್ಥಿತಿ ಗಂಭೀರ, ವೀಡಿಯೊ ವೈರಲ್​​
ವೈರಲ್​​ ವೀಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on:Jun 06, 2023 | 6:59 PM

Share

ದೆಹಲಿ: ದೆಹಲಿಯಲ್ಲಿ ಮಾನವೀಯತೆ ಮರೆತ ಘಟನೆಯೊಂದು ನಡೆದಿದೆ. ದೇಶದಲ್ಲಿ ಇಂತಹ ಅನೇಕ ಘಟನೆ ನಡೆಯುತ್ತಿದೆ. ಇಲ್ಲಿ ಜೀವಗಳಿಗೆ ಬೆಲೆಯೇ ಇಲ್ಲವೇ ಎಂದು ಅನಿಸುವಷ್ಟರ ಮಟ್ಟಿಗೆ ಜನ ವರ್ತಿಸುತ್ತಾರೆ. ಹೌದು ದೆಹಲಿಯ ಮಜು ಕಾ ತಿಲಾ ಪ್ರದೇಶದಲ್ಲಿ ಫುಡ್​​​ ಡೆಲಿವರಿ ಬಾಯ್​​​ಗೆ ಬಸ್​​ ಡಿಕ್ಕಿ ಹೊಡೆದು ನೋಡಿಯೂ ನೋಡುದಂತೆ ಆತನ ಮೇಲೆ ಹರಿದು ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತದ ಬಳಿಕ ಸ್ಥಳದಿಂದ ಪರಾರಿಯಾಗಿದ್ದ ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯೂ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದರಿಂದ ಬಸ್​​ ಚಾಲಕನನ್ನು ಬಂಧಿಸಲು ನೆರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಡೆಲಿವರಿ ಬಾಯ್​​ ಜೀಬ್ರಾ ಕ್ರಾಸಿಂಗ್​​ ರಸ್ತೆಯನ್ನು ದಾಟುತ್ತಿದ್ದ ವೇಳೆ ವೇಗವಾಗಿ ಬಂದ ನೀಲಿ ಮತ್ತು ಹಸಿರು ಬಸ್ ಆತನಿಗೆ ಡಿಕ್ಕಿ ಹೊಡೆದು ಆತನ ಮೇಲೆ ಬಸ್​​ ಹರಿದ ಹೋಗುವುದನ್ನು ಈ ವೀಡಿಯೊದಲ್ಲಿ ನೋಡಬಹುದು.

ಡೆಲಿವರಿ ಬಾಯ್‌ನನ್ನು ರಾಷ್ಟ್ರ ರಾಜಧಾನಿಯ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದ 27 ವರ್ಷದ ಧನ್ವೀರ್ ಸಿಂಗ್ ಎಂದು ಗುರುತಿಸಲಾಗಿದೆ. ಶನಿವಾರ ನಡೆದ ಘಟನೆಯ ದೃಶ್ಯಾವಳಿಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ:ಕೇರಳದ ಪಾಲಕ್ಕಾಡ್​ನಲ್ಲಿ ಭೀಕರ ಅಪಘಾತ; ಸರ್ಕಾರಿ ಬಸ್​​ಗೆ ಶಾಲಾ ಮಕ್ಕಳಿದ್ದ ಬಸ್​ ಡಿಕ್ಕಿ ಹೊಡೆದು 9 ಜನ ಸಾವು

ಆರೋಪಿ ಬಸ್ ಚಾಲಕನನ್ನು ಉತ್ತರ ಪ್ರದೇಶದ ಅಮ್ರೋಹಾ ನಿವಾಸಿ ಫಿರೋಜ್ ಖಾನ್ ಎಂದು ಗುರುತಿಸಲಾಗಿದೆ. ಬಂಧನದ ನಂತರ ಫಿರೋಜ್ ಖಾನ್ ಜೂನ್ 3 ರಂದು ಬೆಳಿಗ್ಗೆ 5:30 ರ ಸುಮಾರಿಗೆ ಉತ್ತರಾಖಂಡದಿಂದ ಬಸ್ ಓಡಿಸುತ್ತಿದ್ದ ಎಂದು ಪೊಲೀಸರಿಗೆ ತಿಳಿಸಿದರು.

ಪೊಲೀಸರ ಪ್ರಕಾರ ಬಸ್ ಐಎಸ್‌ಬಿಟಿ ಮೋರಿ ಗೇಟ್‌ನಿಂದ ಆಗಮಿಸಿ ಇಂದ್ರಪ್ರಸ್ಥ ಕಾಲೇಜು ಬಳಿ ಯು-ಟರ್ನ್ ತೆಗೆದುಕೊಂಡಿದೆ. ದೆಹಲಿಯ ಐಎಸ್‌ಬಿಟಿ ಕಾಶ್ಮೀರಿ ಗೇಟ್‌ನಲ್ಲಿ ಇಳಿಸಬೇಕಿದ್ದ, ಆದರೆ ಅಲ್ಲಿ ಇಳಿಸದೇ ತುಂಬಾ ಮುಂದೆ ಹೋಗಿ ನಿಲ್ಲಿಸಿದ್ದಾರೆ. ಇದು ಉತ್ತರ ಪ್ರದೇಶದ ನಂಬರ್ ಪ್ಲೇಟ್ ಹೊಂದಿದ್ದ ಬಸ್​​ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:49 pm, Tue, 6 June 23

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ