AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ದೆಹಲಿಯಲ್ಲಿ ಬಸ್​​ ಹರಿದು ಫುಡ್​​​ ಡೆಲಿವರಿ ಬಾಯ್ ಸ್ಥಿತಿ ಗಂಭೀರ, ವೀಡಿಯೊ ವೈರಲ್​​

ದೆಹಲಿಯ ಮಜು ಕಾ ತಿಲಾ ಪ್ರದೇಶದಲ್ಲಿ ಫುಡ್​​​ ಡೆಲಿವರಿ ಬಾಯ್​​​ಗೆ ಬಸ್​​ ಡಿಕ್ಕಿ ಹೊಡೆದು ನೋಡಿಯೂ ನೋಡುದಂತೆ ಆತನ ಮೇಲೆ ಹರಿದು ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Video: ದೆಹಲಿಯಲ್ಲಿ ಬಸ್​​ ಹರಿದು ಫುಡ್​​​ ಡೆಲಿವರಿ ಬಾಯ್ ಸ್ಥಿತಿ ಗಂಭೀರ, ವೀಡಿಯೊ ವೈರಲ್​​
ವೈರಲ್​​ ವೀಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on:Jun 06, 2023 | 6:59 PM

Share

ದೆಹಲಿ: ದೆಹಲಿಯಲ್ಲಿ ಮಾನವೀಯತೆ ಮರೆತ ಘಟನೆಯೊಂದು ನಡೆದಿದೆ. ದೇಶದಲ್ಲಿ ಇಂತಹ ಅನೇಕ ಘಟನೆ ನಡೆಯುತ್ತಿದೆ. ಇಲ್ಲಿ ಜೀವಗಳಿಗೆ ಬೆಲೆಯೇ ಇಲ್ಲವೇ ಎಂದು ಅನಿಸುವಷ್ಟರ ಮಟ್ಟಿಗೆ ಜನ ವರ್ತಿಸುತ್ತಾರೆ. ಹೌದು ದೆಹಲಿಯ ಮಜು ಕಾ ತಿಲಾ ಪ್ರದೇಶದಲ್ಲಿ ಫುಡ್​​​ ಡೆಲಿವರಿ ಬಾಯ್​​​ಗೆ ಬಸ್​​ ಡಿಕ್ಕಿ ಹೊಡೆದು ನೋಡಿಯೂ ನೋಡುದಂತೆ ಆತನ ಮೇಲೆ ಹರಿದು ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತದ ಬಳಿಕ ಸ್ಥಳದಿಂದ ಪರಾರಿಯಾಗಿದ್ದ ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯೂ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದರಿಂದ ಬಸ್​​ ಚಾಲಕನನ್ನು ಬಂಧಿಸಲು ನೆರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಡೆಲಿವರಿ ಬಾಯ್​​ ಜೀಬ್ರಾ ಕ್ರಾಸಿಂಗ್​​ ರಸ್ತೆಯನ್ನು ದಾಟುತ್ತಿದ್ದ ವೇಳೆ ವೇಗವಾಗಿ ಬಂದ ನೀಲಿ ಮತ್ತು ಹಸಿರು ಬಸ್ ಆತನಿಗೆ ಡಿಕ್ಕಿ ಹೊಡೆದು ಆತನ ಮೇಲೆ ಬಸ್​​ ಹರಿದ ಹೋಗುವುದನ್ನು ಈ ವೀಡಿಯೊದಲ್ಲಿ ನೋಡಬಹುದು.

ಡೆಲಿವರಿ ಬಾಯ್‌ನನ್ನು ರಾಷ್ಟ್ರ ರಾಜಧಾನಿಯ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದ 27 ವರ್ಷದ ಧನ್ವೀರ್ ಸಿಂಗ್ ಎಂದು ಗುರುತಿಸಲಾಗಿದೆ. ಶನಿವಾರ ನಡೆದ ಘಟನೆಯ ದೃಶ್ಯಾವಳಿಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ:ಕೇರಳದ ಪಾಲಕ್ಕಾಡ್​ನಲ್ಲಿ ಭೀಕರ ಅಪಘಾತ; ಸರ್ಕಾರಿ ಬಸ್​​ಗೆ ಶಾಲಾ ಮಕ್ಕಳಿದ್ದ ಬಸ್​ ಡಿಕ್ಕಿ ಹೊಡೆದು 9 ಜನ ಸಾವು

ಆರೋಪಿ ಬಸ್ ಚಾಲಕನನ್ನು ಉತ್ತರ ಪ್ರದೇಶದ ಅಮ್ರೋಹಾ ನಿವಾಸಿ ಫಿರೋಜ್ ಖಾನ್ ಎಂದು ಗುರುತಿಸಲಾಗಿದೆ. ಬಂಧನದ ನಂತರ ಫಿರೋಜ್ ಖಾನ್ ಜೂನ್ 3 ರಂದು ಬೆಳಿಗ್ಗೆ 5:30 ರ ಸುಮಾರಿಗೆ ಉತ್ತರಾಖಂಡದಿಂದ ಬಸ್ ಓಡಿಸುತ್ತಿದ್ದ ಎಂದು ಪೊಲೀಸರಿಗೆ ತಿಳಿಸಿದರು.

ಪೊಲೀಸರ ಪ್ರಕಾರ ಬಸ್ ಐಎಸ್‌ಬಿಟಿ ಮೋರಿ ಗೇಟ್‌ನಿಂದ ಆಗಮಿಸಿ ಇಂದ್ರಪ್ರಸ್ಥ ಕಾಲೇಜು ಬಳಿ ಯು-ಟರ್ನ್ ತೆಗೆದುಕೊಂಡಿದೆ. ದೆಹಲಿಯ ಐಎಸ್‌ಬಿಟಿ ಕಾಶ್ಮೀರಿ ಗೇಟ್‌ನಲ್ಲಿ ಇಳಿಸಬೇಕಿದ್ದ, ಆದರೆ ಅಲ್ಲಿ ಇಳಿಸದೇ ತುಂಬಾ ಮುಂದೆ ಹೋಗಿ ನಿಲ್ಲಿಸಿದ್ದಾರೆ. ಇದು ಉತ್ತರ ಪ್ರದೇಶದ ನಂಬರ್ ಪ್ಲೇಟ್ ಹೊಂದಿದ್ದ ಬಸ್​​ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:49 pm, Tue, 6 June 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು