AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ದೆಹಲಿಯಲ್ಲಿ ಬಸ್​​ ಹರಿದು ಫುಡ್​​​ ಡೆಲಿವರಿ ಬಾಯ್ ಸ್ಥಿತಿ ಗಂಭೀರ, ವೀಡಿಯೊ ವೈರಲ್​​

ದೆಹಲಿಯ ಮಜು ಕಾ ತಿಲಾ ಪ್ರದೇಶದಲ್ಲಿ ಫುಡ್​​​ ಡೆಲಿವರಿ ಬಾಯ್​​​ಗೆ ಬಸ್​​ ಡಿಕ್ಕಿ ಹೊಡೆದು ನೋಡಿಯೂ ನೋಡುದಂತೆ ಆತನ ಮೇಲೆ ಹರಿದು ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Video: ದೆಹಲಿಯಲ್ಲಿ ಬಸ್​​ ಹರಿದು ಫುಡ್​​​ ಡೆಲಿವರಿ ಬಾಯ್ ಸ್ಥಿತಿ ಗಂಭೀರ, ವೀಡಿಯೊ ವೈರಲ್​​
ವೈರಲ್​​ ವೀಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on:Jun 06, 2023 | 6:59 PM

Share

ದೆಹಲಿ: ದೆಹಲಿಯಲ್ಲಿ ಮಾನವೀಯತೆ ಮರೆತ ಘಟನೆಯೊಂದು ನಡೆದಿದೆ. ದೇಶದಲ್ಲಿ ಇಂತಹ ಅನೇಕ ಘಟನೆ ನಡೆಯುತ್ತಿದೆ. ಇಲ್ಲಿ ಜೀವಗಳಿಗೆ ಬೆಲೆಯೇ ಇಲ್ಲವೇ ಎಂದು ಅನಿಸುವಷ್ಟರ ಮಟ್ಟಿಗೆ ಜನ ವರ್ತಿಸುತ್ತಾರೆ. ಹೌದು ದೆಹಲಿಯ ಮಜು ಕಾ ತಿಲಾ ಪ್ರದೇಶದಲ್ಲಿ ಫುಡ್​​​ ಡೆಲಿವರಿ ಬಾಯ್​​​ಗೆ ಬಸ್​​ ಡಿಕ್ಕಿ ಹೊಡೆದು ನೋಡಿಯೂ ನೋಡುದಂತೆ ಆತನ ಮೇಲೆ ಹರಿದು ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತದ ಬಳಿಕ ಸ್ಥಳದಿಂದ ಪರಾರಿಯಾಗಿದ್ದ ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯೂ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದರಿಂದ ಬಸ್​​ ಚಾಲಕನನ್ನು ಬಂಧಿಸಲು ನೆರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಡೆಲಿವರಿ ಬಾಯ್​​ ಜೀಬ್ರಾ ಕ್ರಾಸಿಂಗ್​​ ರಸ್ತೆಯನ್ನು ದಾಟುತ್ತಿದ್ದ ವೇಳೆ ವೇಗವಾಗಿ ಬಂದ ನೀಲಿ ಮತ್ತು ಹಸಿರು ಬಸ್ ಆತನಿಗೆ ಡಿಕ್ಕಿ ಹೊಡೆದು ಆತನ ಮೇಲೆ ಬಸ್​​ ಹರಿದ ಹೋಗುವುದನ್ನು ಈ ವೀಡಿಯೊದಲ್ಲಿ ನೋಡಬಹುದು.

ಡೆಲಿವರಿ ಬಾಯ್‌ನನ್ನು ರಾಷ್ಟ್ರ ರಾಜಧಾನಿಯ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದ 27 ವರ್ಷದ ಧನ್ವೀರ್ ಸಿಂಗ್ ಎಂದು ಗುರುತಿಸಲಾಗಿದೆ. ಶನಿವಾರ ನಡೆದ ಘಟನೆಯ ದೃಶ್ಯಾವಳಿಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ:ಕೇರಳದ ಪಾಲಕ್ಕಾಡ್​ನಲ್ಲಿ ಭೀಕರ ಅಪಘಾತ; ಸರ್ಕಾರಿ ಬಸ್​​ಗೆ ಶಾಲಾ ಮಕ್ಕಳಿದ್ದ ಬಸ್​ ಡಿಕ್ಕಿ ಹೊಡೆದು 9 ಜನ ಸಾವು

ಆರೋಪಿ ಬಸ್ ಚಾಲಕನನ್ನು ಉತ್ತರ ಪ್ರದೇಶದ ಅಮ್ರೋಹಾ ನಿವಾಸಿ ಫಿರೋಜ್ ಖಾನ್ ಎಂದು ಗುರುತಿಸಲಾಗಿದೆ. ಬಂಧನದ ನಂತರ ಫಿರೋಜ್ ಖಾನ್ ಜೂನ್ 3 ರಂದು ಬೆಳಿಗ್ಗೆ 5:30 ರ ಸುಮಾರಿಗೆ ಉತ್ತರಾಖಂಡದಿಂದ ಬಸ್ ಓಡಿಸುತ್ತಿದ್ದ ಎಂದು ಪೊಲೀಸರಿಗೆ ತಿಳಿಸಿದರು.

ಪೊಲೀಸರ ಪ್ರಕಾರ ಬಸ್ ಐಎಸ್‌ಬಿಟಿ ಮೋರಿ ಗೇಟ್‌ನಿಂದ ಆಗಮಿಸಿ ಇಂದ್ರಪ್ರಸ್ಥ ಕಾಲೇಜು ಬಳಿ ಯು-ಟರ್ನ್ ತೆಗೆದುಕೊಂಡಿದೆ. ದೆಹಲಿಯ ಐಎಸ್‌ಬಿಟಿ ಕಾಶ್ಮೀರಿ ಗೇಟ್‌ನಲ್ಲಿ ಇಳಿಸಬೇಕಿದ್ದ, ಆದರೆ ಅಲ್ಲಿ ಇಳಿಸದೇ ತುಂಬಾ ಮುಂದೆ ಹೋಗಿ ನಿಲ್ಲಿಸಿದ್ದಾರೆ. ಇದು ಉತ್ತರ ಪ್ರದೇಶದ ನಂಬರ್ ಪ್ಲೇಟ್ ಹೊಂದಿದ್ದ ಬಸ್​​ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:49 pm, Tue, 6 June 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ