AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ದೆಹಲಿಯಲ್ಲಿ ಬಸ್​​ ಹರಿದು ಫುಡ್​​​ ಡೆಲಿವರಿ ಬಾಯ್ ಸ್ಥಿತಿ ಗಂಭೀರ, ವೀಡಿಯೊ ವೈರಲ್​​

ದೆಹಲಿಯ ಮಜು ಕಾ ತಿಲಾ ಪ್ರದೇಶದಲ್ಲಿ ಫುಡ್​​​ ಡೆಲಿವರಿ ಬಾಯ್​​​ಗೆ ಬಸ್​​ ಡಿಕ್ಕಿ ಹೊಡೆದು ನೋಡಿಯೂ ನೋಡುದಂತೆ ಆತನ ಮೇಲೆ ಹರಿದು ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Video: ದೆಹಲಿಯಲ್ಲಿ ಬಸ್​​ ಹರಿದು ಫುಡ್​​​ ಡೆಲಿವರಿ ಬಾಯ್ ಸ್ಥಿತಿ ಗಂಭೀರ, ವೀಡಿಯೊ ವೈರಲ್​​
ವೈರಲ್​​ ವೀಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on:Jun 06, 2023 | 6:59 PM

Share

ದೆಹಲಿ: ದೆಹಲಿಯಲ್ಲಿ ಮಾನವೀಯತೆ ಮರೆತ ಘಟನೆಯೊಂದು ನಡೆದಿದೆ. ದೇಶದಲ್ಲಿ ಇಂತಹ ಅನೇಕ ಘಟನೆ ನಡೆಯುತ್ತಿದೆ. ಇಲ್ಲಿ ಜೀವಗಳಿಗೆ ಬೆಲೆಯೇ ಇಲ್ಲವೇ ಎಂದು ಅನಿಸುವಷ್ಟರ ಮಟ್ಟಿಗೆ ಜನ ವರ್ತಿಸುತ್ತಾರೆ. ಹೌದು ದೆಹಲಿಯ ಮಜು ಕಾ ತಿಲಾ ಪ್ರದೇಶದಲ್ಲಿ ಫುಡ್​​​ ಡೆಲಿವರಿ ಬಾಯ್​​​ಗೆ ಬಸ್​​ ಡಿಕ್ಕಿ ಹೊಡೆದು ನೋಡಿಯೂ ನೋಡುದಂತೆ ಆತನ ಮೇಲೆ ಹರಿದು ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತದ ಬಳಿಕ ಸ್ಥಳದಿಂದ ಪರಾರಿಯಾಗಿದ್ದ ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯೂ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದರಿಂದ ಬಸ್​​ ಚಾಲಕನನ್ನು ಬಂಧಿಸಲು ನೆರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಡೆಲಿವರಿ ಬಾಯ್​​ ಜೀಬ್ರಾ ಕ್ರಾಸಿಂಗ್​​ ರಸ್ತೆಯನ್ನು ದಾಟುತ್ತಿದ್ದ ವೇಳೆ ವೇಗವಾಗಿ ಬಂದ ನೀಲಿ ಮತ್ತು ಹಸಿರು ಬಸ್ ಆತನಿಗೆ ಡಿಕ್ಕಿ ಹೊಡೆದು ಆತನ ಮೇಲೆ ಬಸ್​​ ಹರಿದ ಹೋಗುವುದನ್ನು ಈ ವೀಡಿಯೊದಲ್ಲಿ ನೋಡಬಹುದು.

ಡೆಲಿವರಿ ಬಾಯ್‌ನನ್ನು ರಾಷ್ಟ್ರ ರಾಜಧಾನಿಯ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದ 27 ವರ್ಷದ ಧನ್ವೀರ್ ಸಿಂಗ್ ಎಂದು ಗುರುತಿಸಲಾಗಿದೆ. ಶನಿವಾರ ನಡೆದ ಘಟನೆಯ ದೃಶ್ಯಾವಳಿಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ:ಕೇರಳದ ಪಾಲಕ್ಕಾಡ್​ನಲ್ಲಿ ಭೀಕರ ಅಪಘಾತ; ಸರ್ಕಾರಿ ಬಸ್​​ಗೆ ಶಾಲಾ ಮಕ್ಕಳಿದ್ದ ಬಸ್​ ಡಿಕ್ಕಿ ಹೊಡೆದು 9 ಜನ ಸಾವು

ಆರೋಪಿ ಬಸ್ ಚಾಲಕನನ್ನು ಉತ್ತರ ಪ್ರದೇಶದ ಅಮ್ರೋಹಾ ನಿವಾಸಿ ಫಿರೋಜ್ ಖಾನ್ ಎಂದು ಗುರುತಿಸಲಾಗಿದೆ. ಬಂಧನದ ನಂತರ ಫಿರೋಜ್ ಖಾನ್ ಜೂನ್ 3 ರಂದು ಬೆಳಿಗ್ಗೆ 5:30 ರ ಸುಮಾರಿಗೆ ಉತ್ತರಾಖಂಡದಿಂದ ಬಸ್ ಓಡಿಸುತ್ತಿದ್ದ ಎಂದು ಪೊಲೀಸರಿಗೆ ತಿಳಿಸಿದರು.

ಪೊಲೀಸರ ಪ್ರಕಾರ ಬಸ್ ಐಎಸ್‌ಬಿಟಿ ಮೋರಿ ಗೇಟ್‌ನಿಂದ ಆಗಮಿಸಿ ಇಂದ್ರಪ್ರಸ್ಥ ಕಾಲೇಜು ಬಳಿ ಯು-ಟರ್ನ್ ತೆಗೆದುಕೊಂಡಿದೆ. ದೆಹಲಿಯ ಐಎಸ್‌ಬಿಟಿ ಕಾಶ್ಮೀರಿ ಗೇಟ್‌ನಲ್ಲಿ ಇಳಿಸಬೇಕಿದ್ದ, ಆದರೆ ಅಲ್ಲಿ ಇಳಿಸದೇ ತುಂಬಾ ಮುಂದೆ ಹೋಗಿ ನಿಲ್ಲಿಸಿದ್ದಾರೆ. ಇದು ಉತ್ತರ ಪ್ರದೇಶದ ನಂಬರ್ ಪ್ಲೇಟ್ ಹೊಂದಿದ್ದ ಬಸ್​​ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:49 pm, Tue, 6 June 23

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ