AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂದರ್ಶಕರ ಪುಸ್ತಕದಲ್ಲಿ ಬರೆಯುವಾಗ ನಕಲು ಮಾಡುತ್ತಿರುವ ಅಸ್ಸಾಂ ಸಿಎಂ; ಲೇವಡಿಯ ವಿಡಿಯೊಗೆ ಹಿಮಂತ ಬಿಸ್ವಾ ಶರ್ಮಾ ಉತ್ತರ ಹೀಗಿದೆ

ಇದಾಗಿ ಕೆಲವು ಗಂಟೆಗಳ ನಂತರ ಪ್ರತಿಕ್ರಿಯಿಸಿದ ಅಸ್ಸಾಂ ಮುಖ್ಯಮಂತ್ರಿ ನಾನು ಅಸ್ಸಾಮಿ ಮಾಧ್ಯಮ ಶಾಲೆಗೆ ಹೋಗಿದ್ದೇನೆ. ಹಿಂದಿ ಮತ್ತು ಇಂಗ್ಲಿಷ್ ಅನ್ನು ನನ್ನದೇ ಆದ ರೀತಿಯಲ್ಲಿ ಕಲಿಯಲು ಪ್ರಯತ್ನಿಸುತ್ತಿದ್ದೇನೆ. ನನಗೆ ಇಂಗ್ಲಿಷ್ ಮತ್ತು ಹಿಂದಿ ಚೆನ್ನಾಗಿ ಬರುವುದಿಲ್ಲ ಎಂದು ನಾನು ಒಪ್ಪಿಕೊಳ್ಳುತ್ತೇನೆ

ಸಂದರ್ಶಕರ ಪುಸ್ತಕದಲ್ಲಿ ಬರೆಯುವಾಗ ನಕಲು ಮಾಡುತ್ತಿರುವ ಅಸ್ಸಾಂ ಸಿಎಂ; ಲೇವಡಿಯ ವಿಡಿಯೊಗೆ ಹಿಮಂತ ಬಿಸ್ವಾ ಶರ್ಮಾ ಉತ್ತರ ಹೀಗಿದೆ
ಹಿಮಂತ ಬಿಸ್ವಾ ಶರ್ಮಾ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Apr 04, 2023 | 9:39 PM

Share

ದೆಹಲಿ: ಅಸ್ಸಾಂ (Assam) ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ(Himanta Sarma) ಅವರು ರಾಜ್ಯದ ಶಾಲೆಗೆ ಭೇಟಿ ನೀಡಿದಾಗ ಸಂದರ್ಶಕರ ಪುಸ್ತಕದಲ್ಲಿ ಬರೆಯುವಾಗ ಬೇರೊಂದು ಹಾಳೆಯಲ್ಲಿ ಬರೆದಿರುವ ಪಠ್ಯವನ್ನು ನಕಲು ಮಾಡುತ್ತಿರುವುದನ್ನು ತೋರಿಸುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ (Social Media) ಹರಿದಾಡಿದೆ. ಹಿಮಂತ ಬಿಸ್ವಾ ಶರ್ಮಾ ಸಂದರ್ಶಕರ ರಿಜಿಸ್ಟರ್‌ನಲ್ಲಿ ಬೇರೊಂದು ಪಠ್ಯ ನೋಡಿಕೊಂಡು ಬರೆಯುತ್ತಿರುವ ವಿಡಿಯೊವನ್ನು ರೋಷನ್ ರೈ ಎಂಬವರು ಟ್ವೀಟ್ ಮಾಡಿದ್ದಾರೆ. “ಸಂದರ್ಶಕರ ಪುಸ್ತಕದಲ್ಲಿ ನಕಲು ಮಾಡದೆ ಒಂದು ಪ್ಯಾರಾವನ್ನು ಸಹ ಬರೆಯಲು ಸಾಧ್ಯವಾಗದ ಅಸ್ಸಾಂ ಮುಖ್ಯಮಂತ್ರಿಯನ್ನು ಪ್ರಸ್ತುತಪಡಿಸುತ್ತಿದ್ದೇವೆ ಎಂದು ರೈ ಟ್ವೀಟ್ ಮಾಡಿದ್ದಾರೆ.

ಇದಾಗಿ ಕೆಲವು ಗಂಟೆಗಳ ನಂತರ ಪ್ರತಿಕ್ರಿಯಿಸಿದ ಅಸ್ಸಾಂ ಮುಖ್ಯಮಂತ್ರಿ ನಾನು ಅಸ್ಸಾಮಿ ಮಾಧ್ಯಮ ಶಾಲೆಗೆ ಹೋಗಿದ್ದೇನೆ. ಹಿಂದಿ ಮತ್ತು ಇಂಗ್ಲಿಷ್ ಅನ್ನು ನನ್ನದೇ ಆದ ರೀತಿಯಲ್ಲಿ ಕಲಿಯಲು ಪ್ರಯತ್ನಿಸುತ್ತಿದ್ದೇನೆ. ನನಗೆ ಇಂಗ್ಲಿಷ್ ಮತ್ತು ಹಿಂದಿ ಚೆನ್ನಾಗಿ ಬರುವುದಿಲ್ಲ ಎಂದು ನಾನು ಒಪ್ಪಿಕೊಳ್ಳುತ್ತೇನೆ. ಅದನ್ನು ಒಪ್ಪಿಕೊಳ್ಳಲು ನನಗೆ ಯಾವುದೇ ಹಿಂಜರಿಕೆ ಇಲ್ಲ ಎಂದಿದ್ದಾರೆ. ಈ ವಿಡಿಯೊಗೆ ನೆಟಿಜನ್​ಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಆಧಾರ ರಹಿತ ಟ್ವೀಟ್‌ಗಳಿಗೆ ನೀವು ಪ್ರತ್ಯುತ್ತರ ನೀಡಿರುವುದು ನಿಮ್ಮ ವಿನಮ್ರತೆ ಎಂದು ಟ್ವಿಟರ್ ಬಳಕೆದಾರ ಅಶುತೋಷ್ ಜೆ ದುಬೆ ಹೇಳಿದ್ದಾರೆ.

ನಿಮ್ಮ ಪ್ರಥಮ ಭಾಷೆಯಲ್ಲಿ ಏಕೆ ಬರೆಯಬಾರದು?ಎಂದು ಮತ್ತೊಬ್ಬರು ಕೇಳಿದರು.

ಹಿಮಂತ ಬಿಸ್ವಾ ಅವರು  BA, MA, LLB ಮಾಡಿದ್ದಾರೆ. ಅವರು 3 ಡಿಗ್ರಿಗಳ ನಂತರವೂ ಮೆಚ್ಚುಗೆಯ ಎರಡು ವಾಕ್ಯಗಳನ್ನು ಬರೆಯಲು ಸಾಧ್ಯವಾಗದಿದ್ದರೆ ಅವರು ನಿಜವಾಗಿಯೂ ಅನ್ಪಡ್ ಜಮಾತ್‌ಗೆ ಸೇರಿದವರು. ಹಾಗೆಯೇ ನಿಮ್ಮ ಮಾತೃಭಾಷೆಯಲ್ಲಿ ಬರೆಯಲು ನಿಮಗೆ ನಾಚಿಕೆ ಏಕೆ? ಅಸ್ಸಾಮಿಯಲ್ಲೇ ಬರೆಯಿರಿ ಎಂದು ಮತ್ತೊಬ್ಬರು ಹೇಳಿದ್ದಾರೆ.

ನಿಮ್ಮ ಬಗ್ಗೆ ಹೆಮ್ಮೆ ಇದೆ ಸರ್. ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಲ್ಲಿ ನಕಾರಾತ್ಮಕತೆಯನ್ನು ಒಪ್ಪಿಕೊಳ್ಳುವುದು ಬಹಳ ದೊಡ್ಡ ವಿಷಯ ಎಂದು ಇನ್ನೊಬ್ಬರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’